ಮನರಂಜನೆ

ನಿರ್ದೇಶಕರಾಗಿ ಬಾಬು 50 ವರ್ಷ: ಅ.23ರಿಂದ ಐದು ದಿನಗಳ ಕಾಲ ‘SVR 50’

ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಎಸ್‍.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶಕರಾಗಿ 50 ವರ್ಷಗಳಾಗಿವೆ. ಈ ಸಂಭ್ರಮವನ್ನು ಸಂಭಮಿಸಲು ಕನ್ನಡ ಚಿತ್ರರಂಗದಿಂದ ‘SVR 50’ ಎಂಬ ಕಾರ್ಯಕ್ರಮ ಆಯೋಜಿಸಿ ರಾಜೇಂದ್ರ ಸಿಂಗ್ ಬಾಬು ಅವರನ್ನು ಆತ್ಮೀಯವಾಗಿ ಸನ್ಮಾನಿಸುವ ಕಾರ್ಯಕ್ರಮ ಸದ್ಯದಲ್ಲೇ ನಡೆಯಲಿದೆ.

ಸಮಾರಂಭದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ನಾಗತಿಹಳ್ಳಿ ಚಂದ್ರಶೇಖರ್, ಪಿ. ಶೇಷಾದ್ರಿ, ನಂಜುಂಡೇಗೌಡ, ವಿಜಯಲಕ್ಷ್ಮಿ ಸಿಂಗ್, ಸಂಗೀತ ನಿರ್ದೇಶಕ ಹಂಸಲೇಖ, ನಿರ್ಮಾಪಕ ರಾಕ್‍ಲೈನ್‍ ವೆಂಕಟೇಶ್, ಪತ್ರಕರ್ತ ಗಂಗಾಧರ್ ಮೊದಲಿಯರ್, ಬಿ.ಎಸ್‍. ಲಿಂಗದೇವರು, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್ ಕೆ. ವಿಶ್ವನಾಥ್, ಸಂಕಲನಕಾರ ಕೆಂಪರಾಜ್ ಹಾಗೂ ಸಮಾರಂಭದ ಆಯೋಜಕರಾದ ಕೃಷ್ಣೇಗೌಡ (ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ) ಉಪಸ್ಥಿತರಿದ್ದರು.

ಇದನ್ನು ಓದಿ: ಮುಖ್ಯಮಂತ್ರಿಯಾದ ಎಲ್‍.ಆರ್.ಶಿವರಾಮೇಗೌಡ; ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದಲ್ಲಿ ನಟನೆ

ಕಾರ್ಯಕ್ರಮದ ರೂಪುರೇಷೆಗಳ ಕುರಿತಾಗಿ ಮಾತನಾಡಿದ ಕೃಷ್ಣೇಗೌಡ, ‘ಕರ್ನಾಟಕ ಮಾತ್ರವಲ್ಲ, ಇಡೀ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ 50 ವರ್ಷಗಳ ಸಕ್ರಿಯವಾಗಿ ನಿರ್ದೇಶಕರಾಗಿರುವವರು ಯಾರು ಇಲ್ಲ. ಆ ಹೆಗ್ಗಳಿಕೆ ಮತ್ತು ಖ್ಯಾತಿ ಬಾಬು ಅವರಿಗಿದೆ.. ಈಗಲೂ ಅವರ ನಿರ್ದೇಶನದ ಎರಡು ಚಿತ್ರಗಳು ತೆರೆಗೆ ಬರಲು ಸಿದ್ದಾವಾಗಿದೆ. ಈ ಸುವರ್ಣ ಸಂಭ್ರಮವನ್ನು ಸಂಭ್ರಮಿಸಲು ಅಕ್ಟೋಬರ್ 23 ರಿಂದ 5 ದಿನಗಳ ಕಾಲ ‘SVR 50ʼ ಎಂಬ ಸಮಾರಂಭ ನಡೆಸಲು ಉದ್ದೇಶಿಸಲಾಗಿದೆ’ ಎಂದರು.

ಅಕ್ಟೋಬರ್.23ರಂದು ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಅಲ್ಲಿಂದ ನಾಲ್ಕು ದಿನಗಳ ಕಾಲ ಕಲಾವಿದರ ಸಂಘದಲ್ಲಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ಚಿತ್ರಗಳ ಚಿತ್ರೋತ್ಸವ ನಡೆಯಲಿದೆ. ದಿನಕ್ಕೆ ಎರಡು ಚಿತ್ರಗಳ ಪ್ರದರ್ಶನವಿರುತ್ತದೆ. ಈ ಸಂದರ್ಭದಲ್ಲಿ ಕನ್ನಡ ಹಾಗೂ ಇತರ ಭಾಷೆಗಳ ಗಣ್ಯರು ಪಾಲ್ಗೊಳ್ಳಲಿದ್ದಾರೆ. 27 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ರಾಜೇಂದ್ರಸಿಂಗ್ ಬಾಬು ಅವರಿಗೆ ಚಿತ್ರರಂಗದ ಪರವಾಗಿ ಆತ್ಮೀಯವಾಗಿ ಸನ್ಮಾನ‌ ಸಮಾರಂಭ ನಡೆಯಲಿದೆ. ಅಂದು ಬಾಬು ಕುರಿತು ಎರಡು ಪುಸ್ತಕಗಳು ಮತ್ತು ಸಾಕ್ಷ್ಯಚಿತ್ರ ಬಿಡುಗಡೆ ಆಗಲಿದೆ. ಹಂಸಲೇಖ ಅವರ ನೇತೃತ್ವದಲ್ಲಿ ರಾಜೇಂದ್ರಸಿಂಗ್ ಬಾಬು ಅವರ ನಿರ್ದೇಶನದ ಚಿತ್ರಗಳ ಜನಪ್ರಿಯ ಹಾಡುಗಳನ್ನು ಹಂಸಲೇಖ ಅವರ ತಂಡದವರು ಹಾಡಲಿದ್ದಾರೆ. ಮುಖ್ಯಮಂತ್ರಿಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಹಿರಿಯ ನಿರ್ದೇಶಕ ಗಿರೀಶ್‍ ಕಾಸರವಳ್ಳಿ ಮಾತನಾಡಿ, ‘ರಾಜೇಂದ್ರಸಿಂಗ್ ಬಾಬು ಅವರು ಸಿನಿಮಾ ನಿರ್ದೇಶನವನ್ನು ಹೊರತುಪಡಿಸಿ, ಚಿತ್ರರಂಗಕ್ಕಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಸ್ಥಾಪನೆ, ವಿಧಾನಸೌಧದ ಮುಂದೆ ಚಲನಚಿತ್ರೋತ್ಸವದ ಉದ್ಘಾಟನೆ ಹಾಗೂ ಮೈಸೂರಿನ ಅರಮನೆ ಬಳಿ ಸಮರೋಪ ಸಮಾರಂಭದ ಆಯೋಜನೆ ಹೀಗೆ ಹಲವು ಕಾರ್ಯಕ್ರಮಗಳನ್ನು ಬಾಬು ಅವರು ಮಾಡಿದ್ದಾರೆ. ತಮ್ಮ ಚಿತ್ರಗಳ ಮೂಲಕವೂ ಅವರು ಎಲ್ಲರ ಮನೆ ಮಾತಾಗಿದ್ದಾರೆ. ರಾಜೇಂದ್ರ ಸಿಂಗ್ ಬಾಬು ಅವರು ನಿರ್ದೇಶಕರಾಗಿ 50 ವರ್ಷಗಳು ಪೂರೈಸಿರುವ ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸುತ್ತೇನೆ’ ಎಂದರು.

ಆಂದೋಲನ ಡೆಸ್ಕ್

Recent Posts

ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…

28 mins ago

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ…

59 mins ago

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

1 hour ago

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…

2 hours ago

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…

2 hours ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

2 hours ago