ಮನರಂಜನೆ

ನಿರ್ದೇಶಕರಾಗಿ ಬಾಬು 50 ವರ್ಷ: ಅ.23ರಿಂದ ಐದು ದಿನಗಳ ಕಾಲ ‘SVR 50’

ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಎಸ್‍.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶಕರಾಗಿ 50 ವರ್ಷಗಳಾಗಿವೆ. ಈ ಸಂಭ್ರಮವನ್ನು ಸಂಭಮಿಸಲು ಕನ್ನಡ ಚಿತ್ರರಂಗದಿಂದ ‘SVR 50’ ಎಂಬ ಕಾರ್ಯಕ್ರಮ ಆಯೋಜಿಸಿ ರಾಜೇಂದ್ರ ಸಿಂಗ್ ಬಾಬು ಅವರನ್ನು ಆತ್ಮೀಯವಾಗಿ ಸನ್ಮಾನಿಸುವ ಕಾರ್ಯಕ್ರಮ ಸದ್ಯದಲ್ಲೇ ನಡೆಯಲಿದೆ.

ಸಮಾರಂಭದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ನಾಗತಿಹಳ್ಳಿ ಚಂದ್ರಶೇಖರ್, ಪಿ. ಶೇಷಾದ್ರಿ, ನಂಜುಂಡೇಗೌಡ, ವಿಜಯಲಕ್ಷ್ಮಿ ಸಿಂಗ್, ಸಂಗೀತ ನಿರ್ದೇಶಕ ಹಂಸಲೇಖ, ನಿರ್ಮಾಪಕ ರಾಕ್‍ಲೈನ್‍ ವೆಂಕಟೇಶ್, ಪತ್ರಕರ್ತ ಗಂಗಾಧರ್ ಮೊದಲಿಯರ್, ಬಿ.ಎಸ್‍. ಲಿಂಗದೇವರು, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್ ಕೆ. ವಿಶ್ವನಾಥ್, ಸಂಕಲನಕಾರ ಕೆಂಪರಾಜ್ ಹಾಗೂ ಸಮಾರಂಭದ ಆಯೋಜಕರಾದ ಕೃಷ್ಣೇಗೌಡ (ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ) ಉಪಸ್ಥಿತರಿದ್ದರು.

ಇದನ್ನು ಓದಿ: ಮುಖ್ಯಮಂತ್ರಿಯಾದ ಎಲ್‍.ಆರ್.ಶಿವರಾಮೇಗೌಡ; ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದಲ್ಲಿ ನಟನೆ

ಕಾರ್ಯಕ್ರಮದ ರೂಪುರೇಷೆಗಳ ಕುರಿತಾಗಿ ಮಾತನಾಡಿದ ಕೃಷ್ಣೇಗೌಡ, ‘ಕರ್ನಾಟಕ ಮಾತ್ರವಲ್ಲ, ಇಡೀ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ 50 ವರ್ಷಗಳ ಸಕ್ರಿಯವಾಗಿ ನಿರ್ದೇಶಕರಾಗಿರುವವರು ಯಾರು ಇಲ್ಲ. ಆ ಹೆಗ್ಗಳಿಕೆ ಮತ್ತು ಖ್ಯಾತಿ ಬಾಬು ಅವರಿಗಿದೆ.. ಈಗಲೂ ಅವರ ನಿರ್ದೇಶನದ ಎರಡು ಚಿತ್ರಗಳು ತೆರೆಗೆ ಬರಲು ಸಿದ್ದಾವಾಗಿದೆ. ಈ ಸುವರ್ಣ ಸಂಭ್ರಮವನ್ನು ಸಂಭ್ರಮಿಸಲು ಅಕ್ಟೋಬರ್ 23 ರಿಂದ 5 ದಿನಗಳ ಕಾಲ ‘SVR 50ʼ ಎಂಬ ಸಮಾರಂಭ ನಡೆಸಲು ಉದ್ದೇಶಿಸಲಾಗಿದೆ’ ಎಂದರು.

ಅಕ್ಟೋಬರ್.23ರಂದು ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಅಲ್ಲಿಂದ ನಾಲ್ಕು ದಿನಗಳ ಕಾಲ ಕಲಾವಿದರ ಸಂಘದಲ್ಲಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ಚಿತ್ರಗಳ ಚಿತ್ರೋತ್ಸವ ನಡೆಯಲಿದೆ. ದಿನಕ್ಕೆ ಎರಡು ಚಿತ್ರಗಳ ಪ್ರದರ್ಶನವಿರುತ್ತದೆ. ಈ ಸಂದರ್ಭದಲ್ಲಿ ಕನ್ನಡ ಹಾಗೂ ಇತರ ಭಾಷೆಗಳ ಗಣ್ಯರು ಪಾಲ್ಗೊಳ್ಳಲಿದ್ದಾರೆ. 27 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ರಾಜೇಂದ್ರಸಿಂಗ್ ಬಾಬು ಅವರಿಗೆ ಚಿತ್ರರಂಗದ ಪರವಾಗಿ ಆತ್ಮೀಯವಾಗಿ ಸನ್ಮಾನ‌ ಸಮಾರಂಭ ನಡೆಯಲಿದೆ. ಅಂದು ಬಾಬು ಕುರಿತು ಎರಡು ಪುಸ್ತಕಗಳು ಮತ್ತು ಸಾಕ್ಷ್ಯಚಿತ್ರ ಬಿಡುಗಡೆ ಆಗಲಿದೆ. ಹಂಸಲೇಖ ಅವರ ನೇತೃತ್ವದಲ್ಲಿ ರಾಜೇಂದ್ರಸಿಂಗ್ ಬಾಬು ಅವರ ನಿರ್ದೇಶನದ ಚಿತ್ರಗಳ ಜನಪ್ರಿಯ ಹಾಡುಗಳನ್ನು ಹಂಸಲೇಖ ಅವರ ತಂಡದವರು ಹಾಡಲಿದ್ದಾರೆ. ಮುಖ್ಯಮಂತ್ರಿಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಹಿರಿಯ ನಿರ್ದೇಶಕ ಗಿರೀಶ್‍ ಕಾಸರವಳ್ಳಿ ಮಾತನಾಡಿ, ‘ರಾಜೇಂದ್ರಸಿಂಗ್ ಬಾಬು ಅವರು ಸಿನಿಮಾ ನಿರ್ದೇಶನವನ್ನು ಹೊರತುಪಡಿಸಿ, ಚಿತ್ರರಂಗಕ್ಕಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಸ್ಥಾಪನೆ, ವಿಧಾನಸೌಧದ ಮುಂದೆ ಚಲನಚಿತ್ರೋತ್ಸವದ ಉದ್ಘಾಟನೆ ಹಾಗೂ ಮೈಸೂರಿನ ಅರಮನೆ ಬಳಿ ಸಮರೋಪ ಸಮಾರಂಭದ ಆಯೋಜನೆ ಹೀಗೆ ಹಲವು ಕಾರ್ಯಕ್ರಮಗಳನ್ನು ಬಾಬು ಅವರು ಮಾಡಿದ್ದಾರೆ. ತಮ್ಮ ಚಿತ್ರಗಳ ಮೂಲಕವೂ ಅವರು ಎಲ್ಲರ ಮನೆ ಮಾತಾಗಿದ್ದಾರೆ. ರಾಜೇಂದ್ರ ಸಿಂಗ್ ಬಾಬು ಅವರು ನಿರ್ದೇಶಕರಾಗಿ 50 ವರ್ಷಗಳು ಪೂರೈಸಿರುವ ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸುತ್ತೇನೆ’ ಎಂದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

4 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago