ಮನರಂಜನೆ

ಈ ಬಾರಿಯೂ ‘ಅ’ಕಾರದ ಮಮತೆ ಮೆರೆದ ಮಹೇಶ್‍ ಬಾಬು

ನಿರ್ದೇಶಕ ಮಹೇಶ್‍ ಬಾಬು ನಿರ್ದೇಶನದ ಚಿತ್ರಗಳು ‘ಅ’ಕಾರದಿಂದ ಶುರುವಾಗಬೇಕು ಎಂಬುದು ನಿಯಮವಾಗಿಬಿಟ್ಟಿದೆ. ಅವರು ಬೇರೆ ಅಕ್ಷರಗಳಿಂದ ಪ್ರಾರಂಭವಾಗುವ ಚಿತ್ರಗಳನ್ನು ಮಾಡಿಲ್ಲ ಎಂದೇನಲ್ಲ. ಆದರೆ, ‘ಅ’ಕಾರದಿಂದ ಶುರುವಾಗುವ ಚಿತ್ರಗಳು ಹೆಚ್ಚು ಸಿಗುತ್ತವೆ. ‘ಅರಸು’, ‘ಆಕಾಶ್’, ‘ಅಪರೂಪ’, ‘ಅತಿರಥ’, ‘ಅಜಿತ್‍’, ‘ಅಭಯ್’ ಹೀಗೆ ಪಟ್ಟಿ ಬೆಳೆಯುತ್ತದೆ.

ಈಗ್ಯಾಕೆ ಈ ವಿಷಯ ಎಂದರೆ, ಇತ್ತೀಚೆಗೆ ಅವರು ‘ಸ್ಮೈಲ್‍ ಗುರು’ ರಕ್ಷಿತ್‍ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ಪ್ರಾರಂಭಿಸಿದ್ದರು. ಈ ಚಿತ್ರಕ್ಕೆ ಅವರು ಏನು ಹೆಸರಿಡಬಹುದು ಎಂಬ ಕುತೂಹಲ ಎಲ್ಲರಿಗೂ ಇತ್ತು. ಆ ಕುತೂಹಲಕ್ಕೆ ತೆರೆಬಿದ್ದಿದ್ದು, ಚಿತ್ರಕ್ಕೆ ‘ಅಮ್ಮು’ ಎಂಬ ಹೆಸರನ್ನು ಇಡಲಾಗಿದೆ. ಅಷ್ಟೇ ಅಲ್ಲ, ಸಮುದ್ರದಾಳದಲ್ಲಿ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಲಾಗಿದೆ.

ಈ ಚಿತ್ರದ ಶೀರ್ಷಿಕೆಯನ್ನು ಪುದುಚೇರಿಯ ಸಮುದ್ರದಾಳದಲ್ಲಿ ಬಿಡುಗಡೆ ಮಾಡಲಾಗಿದೆ. ನಾಯಕ ‘ಸ್ಮೈಲ್‍ ಗುರು’ ರಕ್ಷಿತ್‍ ಸ್ಕೂಬಾ ಡೈವಿಂಗ್ ಮಾಡಿ, ಶೀರ್ಷಿಕೆ ಅನಾವರಣ ಮಾಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಈ ಟೀಸರ್‍ ಬಿಡುಗಡೆ ಮಾಡಲಾಗಿದೆ. ‘ದುನಿಯಾ’ ವಿಜಯ್ ಟೀಸರ್‍ ಬಿಡುಗಡೆ ಮಾಡಿದ್ದಾರೆ. ‘ನೆನಪಿರಲಿ’ ಪ್ರೇಮ್‍ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಟೀಸರ್‍ ಬಿಡುಗಡೆ ಮಾತನಾಡಿದ ‘ದುನಿಯಾ’ ವಿಜಯ್‍, ‘ಈ ಚಿತ್ರದ ಶೀರ್ಷಷಿಕೆಯನ್ನು ಸಮುದ್ರದಾಳದಲ್ಲಿ ಬಿಡುಗಡೆ ಮಾಡಿದಂತೆ, ನಾನು ಮತ್ತು ಪ್ರೇಮ್ ಸಹ ಸಿನಿಮಾ ಆಳಕ್ಕೆ ಇಳಿದಿದ್ದೇವೆ. ಕಳೆದ 20ಕ್ಕೂ ಹೆಚ್ಚು ವರ್ಷಗಳಿಂದ ಚಿತ್ರರಂಗದಲ್ಲಿದ್ದೇವೆ. ನಮಗೆ ಸಿನಿಮಾ ಬಿಟ್ಟರೆ ಬೇರೆ ಗೊತ್ತಿಲ್ಲ. ನಿಮ್ಮೆಲ್ಲರ ಆಶೀರ್ವಾದ, ಎಲ್ಲಾ ಹೀರೋ ಅಭಿಮಾನಿಗಳ ಆಶೀರ್ವಾದ ಈ ಮಕ್ಕಳ ಮೇಲೆ ಇರಲಿ. ಇವರು ತಪ್ಪು ಮಾಡಿದರೆ ತಿದ್ದಿ. ಮಹೇಶ್‍ ಬಾಬು ಹಿರಿಯ ನಿರ್ದೇಶಕರು. ಅವರದ್ದು ಅದ್ಭುತ ವ್ಯಕ್ತಿತ್ವ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು.

ಮಹೇಶ್ ಬಾಬು ತಮ್ಮ ಪ್ರತಿ ಚಿತ್ರದಲ್ಲೂ ಹೊಸ ಪ್ರತಿಭೆಗಳನ್ನು ಪರಿಚಯಿಸುತ್ತಿರುತ್ತಾರೆ. ಈಗ ಅವರು ಈ ಸಿನಿಮಾ ಮೂಲಕ ‘ಕನ್ನಡತಿ’, ‘ಅವನು ಮತ್ತೆ ಶ್ರಾವಣಿ 2’ ದಂತಹ ಧಾರಾವಾಹಿಗಳಲ್ಲಿ ನಟಿಸಿದ್ದ ‘ಸ್ಮೈಲ್ ಗುರು’ ರಕ್ಷಿತ್ ಅವರನ್ನು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಪರಿಚಯ ಮಾಡುತ್ತಿದ್ದಾರೆ. ಇದು ನಾಯಕನಾಗಿ ರಕ್ಷಿತ್‍ಗೂ ಮೊದಲ ಹೆಜ್ಜೆ. ಇನ್ನು, ಜೆರುಷಾ ಮತ್ತು ಅಮೃತಾ ಪ್ರೇಮ್‍ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

MMM ಪಿಕ್ಚರ್ಸ್ ಹಾಗೂ ಎ ಕ್ಲಾಸ್ ಸಿನಿ ಫಿಲ್ಮಂಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಈ ನಿರ್ಮಾಣ ಸಂಸ್ಥೆಯಡಿ ಅನುರಾಗ್ ಆರ್ ಹಾಗೂ ಮಿಥುನ್ ಕೆ.ಎಸ್ ಸೇರಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ, ಸತ್ಯ ಅವರು ಛಾಯಾಗ್ರಹಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ನಾಯಕ ಸ್ಮೈಲ್ ಗುರು ರಕ್ಷಿತ್ ಕಥೆ ಬರೆದಿದ್ದು, ವಿಜಯ್ ಈಶ್ವರ್ ಸಂಭಾಷಣೆ ಬರೆದಿದ್ದಾರೆ.

ಭೂಮಿಕಾ

Recent Posts

ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನ ಉದ್ಘಾಟನೆ : ಸಾವಿರಾರು ಮಂದಿ ದರ್ಶನ, ಕೊಂಡೋತ್ಸವದಲ್ಲಿ ಭಕ್ತಿಪರವಶ

ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ…

8 mins ago

ಬೆಂಗಳೂರು | ಮಾಂಜಾ ದಾರಕ್ಕೆ ಸಿಲುಕಿ ಬೈಕ್‌ ಸವಾರ ಸಾವು

ಬೆಂಗಳೂರು : ಬೀದರ್‌ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ…

25 mins ago

ಕೇಂದ್ರ ಬಜೆಟ್‌ ದೇಶದ ಅಭಿವೃದ್ಧಿಗೆ ಪೂರಕ : ಡಾ. ಸಿ.ಎನ್.ಅಶ್ವತ್ಥ ನಾರಾಯಣ

ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…

56 mins ago

ನಂಜನಗೂಡು ದೊಡ್ಡ ಜಾತ್ರೆಗೆ ಸಿದ್ಧತೆ : ಭಕ್ತರ ಸೌಕರ್ಯಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಸೂಚನೆ

ನಂಜನಗೂಡು : ಮಾರ್ಚ್‌ 30 ರಂದು ನಡೆಯುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ…

1 hour ago

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ ; ಪರಿಶೀಲಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಮಗ್ರ ಓದಿಗೆ ಒತ್ತು ನೀಡಿ : ಎಸ್‌.ಪಿ ಮಲ್ಲಿಕಾರ್ಜುನ ಬಾಲದಂಡಿ

ಮೈಸೂರು : ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ…

2 hours ago