ಮನರಂಜನೆ

‘ದೂರ ತೀರ ಯಾನ’ಕ್ಕೆ ಹೊರಟ ನಿರ್ದೇಶಕ ಮಂಸೋರೆ …

ಮಂಸೋರೆ ಚಿತ್ರಗಳೆಂದರೆ ಏನಾದರೂ ಸಾಮಾಜಿಕ ಸಮಸ್ಯೆ, ಕಾಳಜಿ ಇರಬೇಕು ಎನ್ನುವಷ್ಟರ ಮಟ್ಟಿಗೆ ಆ ತರಹದ ಚಿತ್ರಗಳನ್ನೇ ಮಾಡುತ್ತಿದ್ದರು ಮಂಸೋರೆ. ಅದಕ್ಕೆ ಉದಾಹರಣೆಯಾಗಿ ‘ಆ್ಯಕ್ಟ್ 1978’, ‘ಹರಿವು’, ’19.20.21’ ಮುಂತಾದ ಚಿತ್ರಗಳು ಸಿಗುತ್ತವೆ. ಅದೇ ತರಹದ ಚಿತ್ರಗಳನ್ನು ಮಾಡುತ್ತಿದ್ದರೆ, ಬ್ರಾಂಡ್‍ ಆಗಿಬಿಡಬಹುದು ಎಂದು ಅವರಿಗೆ ಅನಿಸಿದ್ದಿದೆ. ಅದೇ ಕಾರಣಕ್ಕೆ, ಅವರು ಒಂದು ವರ್ಷದ ಗ್ಯಾಪ್‍ನ ನಂತರ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ಪ್ರೇಮಕಥೆಯೊಂದನ್ನು ಕೈಗೆತ್ತಿಕೊಂಡಿದ್ದು, ಚಿತ್ರಕ್ಕೆ ‘ದೂರ ತೀರ ಯಾನ’ ಎಂಬ ಹೆಸರು ಇಡಲಾಗಿದೆ.

‘ದೂರ ತೀರ ಯಾನ’ ಚಿತ್ರವನ್ನು ಡಿ ಕ್ರಿಯೇಷನ್ಸ್ ಬ್ಯಾನರ್‍ನಡಿ ದೇವರಾಜ್‍ ನಿರ್ಮಿಸುತ್ತಿದ್ದು, ವಿಜಯ್‍ ಕೃಷ್ಣ ಮತ್ತು ಪ್ರಿಯಾಂಕಾ ಕುಮಾರ್‍ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಮಂಸೋರೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ.

ಈ ಚಿತ್ರದಲ್ಲಿ ಕಥೆ ಹೇಳುವ ಶೈಲಿ ಬದಲಿಸುತ್ತಿರುವುದಾಗಿ ಹೇಳುವ ಮಂಸೋರೆ, ‘ಇಲ್ಲೂ ಕಥೆ ಆಳವಾಗಿದೆ. ಅದನ್ನು ಹೇಳುವ ಶೈಲಿ ಮಾತ್ರ ಬದಲಾಯಿಸುತ್ತಿದ್ದೇನೆ. ಇದೊಂದು ಪ್ರಯಾಣದ ಚಿತ್ರ. ಬೆಂಗಳೂರಿನಿಂದ ಶುರುವಾಗಿ ಗೋವಾದಲ್ಲಿ ಮುಗಿಯುತ್ತದೆ. ಇದೊಂದು ಪ್ರೇಮಕಥೆ. ಮೊದಲ 10 ನಿಮಿಷ ಬೆಂಗಳೂರಿನಲ್ಲಿ ನಡೆಯುತ್ತದೆ. ನಂತರ ಗೋವಾವರೆಗೂ ಪ್ರಯಾಣ ಮುಂದುವರೆಯುತ್ತದೆ. ಇಲ್ಲಿ ನಾಯಕ ಪಿಟೀಲು ನುಡಿಸುತ್ತಾನೆ. ನಾಯಕಿ ಕೊಳಲು ನುಡಿಸುತ್ತಾಳೆ. ಅದು ಅವರಿಬ್ಬರ ಪ್ರವೃತ್ತಿ. ವೃತ್ತಿಯಲ್ಲಿ ಅವರಿಬ್ಬರೂ ಸಾಫ್ಟ್ವೇರ್ ಇಂಜಿನಿಯರ್‍ಗಳು. ಅವರಿಬ್ಬರ ಪ್ರೀತಿಯ ಹುಡುಕಾಟವೇ ಈ ಚಿತ್ರದ ಕಥೆ’ ಎಂದರು.

ಇದೊಂದು ತೀರಾ ಗಂಭೀರವಲ್ಲದ ಮತ್ತು ಲವಲವಿಕೆಯಿಂದ ಕೂಡಿರುವ ಚಿತ್ರ ಎನ್ನುವ ಮಂಸೋರೆ, ‘ಇದೊಂದು ಪ್ರೀತಿಯ ಹುಡುಕಾಟದ ಕಥೆ. ಈಗ ಪ್ರೀತಿಯ ವ್ಯಾಖ್ಯಾನ ಬದಲಾಗಿದೆ. ಅದನ್ನು ಹೇಳುವ ಪ್ರಯತ್ನ ಮಾಡುತ್ತಿದ್ದೇವೆ. ಈ ಚಿತ್ರಕ್ಕಾಗಿ ಅವರು ಒಂದು ವರ್ಷ ರೀಸರ್ಚ್ ಮಾಡಿದ್ದೇನೆ. ಸಾಮಾಜಿಕ ಮತ್ತು ರಾಜಕೀಯ ವಿಷಯಗಳನ್ನು ಅವಲೋಕಿಸಿದ್ದೇನೆ. ಪ್ರೇಕ್ಷಕರು ಯಾವ ರೀತಿಯ ಕಥೆ ಮತ್ತು ಚಿತ್ರಗಳನ್ನು ಇಷ್ಟಪಡುತ್ತಾರೆ ಎಂದು ಮಾಹಿತಿ ಕಲೆ ಹಾಕಿ, ಅದೆಲ್ಲವನ್ನೂ ಇಟ್ಟುಕೊಂಡು ಕಥೆ ಮಾಡಿದ್ದೇನೆ’ ಎಂದರು.

ವಿಜಯ್‍ ಕೃಷ್ಣಗೆ ಇದು ಮೊದಲ ಚಿತ್ರ. ಆದರೆ, ಹಿಂದಿ ಸಿನಿಮಾ ಮತ್ತು ವೆಬ್‍ಸರಣಿಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ಮೂಲತಃ ಕನ್ನಡದವರಾದ ಅವರಿಗೆ ಕನ್ನಡದಲ್ಲೇ ಏನಾದರೂ ಮಾಡಬೇಕು ಎಂಬ ಆಸೆ ಇತ್ತಂತೆ. ಅದು ಈ ಚಿತ್ರದಲ್ಲಿ ಈಡೇರಿದೆ. ಇನ್ನು, ನಾಯಕಿ ಪ್ರಿಯಾಂಕಾಗೆ ಇದು ಮೂರನೆಯ ಚಿತ್ರ. ಈ ಹಿಂದೆ ‘ಬ್ಯಾಡ್‍ ಮ್ಯಾನರ್ಸ್’ ಮತ್ತು ‘ರುದ್ರ ಗರುಡ ಪುರಾಣ’ ಚಿತ್ರಗಳಲ್ಲಿ ಅವರು ನಟಿಸಿದ್ದರು.

‘ದೂರ ತೀರ ಯಾನ’ ಚಿತ್ರ ಮುಂದಿನ ಜುಲೈನಲ್ಲಿ ಬಿಡುಗಡೆ ಆಗಲಿದೆ. ಶೇಖರ್‍ ಚಂದ್ರು ಛಾಯಾಗ್ರಹಣ ಮತ್ತು ಬಕ್ಕೇಶ್‍ ಸಂಗೀತ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

22 mins ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

40 mins ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

1 hour ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

2 hours ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

3 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

6 hours ago