ಮನರಂಜನೆ

‘ದೂರ ತೀರ ಯಾನ’ಕ್ಕೆ ಹೊರಟ ನಿರ್ದೇಶಕ ಮಂಸೋರೆ …

ಮಂಸೋರೆ ಚಿತ್ರಗಳೆಂದರೆ ಏನಾದರೂ ಸಾಮಾಜಿಕ ಸಮಸ್ಯೆ, ಕಾಳಜಿ ಇರಬೇಕು ಎನ್ನುವಷ್ಟರ ಮಟ್ಟಿಗೆ ಆ ತರಹದ ಚಿತ್ರಗಳನ್ನೇ ಮಾಡುತ್ತಿದ್ದರು ಮಂಸೋರೆ. ಅದಕ್ಕೆ ಉದಾಹರಣೆಯಾಗಿ ‘ಆ್ಯಕ್ಟ್ 1978’, ‘ಹರಿವು’, ’19.20.21’ ಮುಂತಾದ ಚಿತ್ರಗಳು ಸಿಗುತ್ತವೆ. ಅದೇ ತರಹದ ಚಿತ್ರಗಳನ್ನು ಮಾಡುತ್ತಿದ್ದರೆ, ಬ್ರಾಂಡ್‍ ಆಗಿಬಿಡಬಹುದು ಎಂದು ಅವರಿಗೆ ಅನಿಸಿದ್ದಿದೆ. ಅದೇ ಕಾರಣಕ್ಕೆ, ಅವರು ಒಂದು ವರ್ಷದ ಗ್ಯಾಪ್‍ನ ನಂತರ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ಪ್ರೇಮಕಥೆಯೊಂದನ್ನು ಕೈಗೆತ್ತಿಕೊಂಡಿದ್ದು, ಚಿತ್ರಕ್ಕೆ ‘ದೂರ ತೀರ ಯಾನ’ ಎಂಬ ಹೆಸರು ಇಡಲಾಗಿದೆ.

‘ದೂರ ತೀರ ಯಾನ’ ಚಿತ್ರವನ್ನು ಡಿ ಕ್ರಿಯೇಷನ್ಸ್ ಬ್ಯಾನರ್‍ನಡಿ ದೇವರಾಜ್‍ ನಿರ್ಮಿಸುತ್ತಿದ್ದು, ವಿಜಯ್‍ ಕೃಷ್ಣ ಮತ್ತು ಪ್ರಿಯಾಂಕಾ ಕುಮಾರ್‍ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಮಂಸೋರೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ.

ಈ ಚಿತ್ರದಲ್ಲಿ ಕಥೆ ಹೇಳುವ ಶೈಲಿ ಬದಲಿಸುತ್ತಿರುವುದಾಗಿ ಹೇಳುವ ಮಂಸೋರೆ, ‘ಇಲ್ಲೂ ಕಥೆ ಆಳವಾಗಿದೆ. ಅದನ್ನು ಹೇಳುವ ಶೈಲಿ ಮಾತ್ರ ಬದಲಾಯಿಸುತ್ತಿದ್ದೇನೆ. ಇದೊಂದು ಪ್ರಯಾಣದ ಚಿತ್ರ. ಬೆಂಗಳೂರಿನಿಂದ ಶುರುವಾಗಿ ಗೋವಾದಲ್ಲಿ ಮುಗಿಯುತ್ತದೆ. ಇದೊಂದು ಪ್ರೇಮಕಥೆ. ಮೊದಲ 10 ನಿಮಿಷ ಬೆಂಗಳೂರಿನಲ್ಲಿ ನಡೆಯುತ್ತದೆ. ನಂತರ ಗೋವಾವರೆಗೂ ಪ್ರಯಾಣ ಮುಂದುವರೆಯುತ್ತದೆ. ಇಲ್ಲಿ ನಾಯಕ ಪಿಟೀಲು ನುಡಿಸುತ್ತಾನೆ. ನಾಯಕಿ ಕೊಳಲು ನುಡಿಸುತ್ತಾಳೆ. ಅದು ಅವರಿಬ್ಬರ ಪ್ರವೃತ್ತಿ. ವೃತ್ತಿಯಲ್ಲಿ ಅವರಿಬ್ಬರೂ ಸಾಫ್ಟ್ವೇರ್ ಇಂಜಿನಿಯರ್‍ಗಳು. ಅವರಿಬ್ಬರ ಪ್ರೀತಿಯ ಹುಡುಕಾಟವೇ ಈ ಚಿತ್ರದ ಕಥೆ’ ಎಂದರು.

ಇದೊಂದು ತೀರಾ ಗಂಭೀರವಲ್ಲದ ಮತ್ತು ಲವಲವಿಕೆಯಿಂದ ಕೂಡಿರುವ ಚಿತ್ರ ಎನ್ನುವ ಮಂಸೋರೆ, ‘ಇದೊಂದು ಪ್ರೀತಿಯ ಹುಡುಕಾಟದ ಕಥೆ. ಈಗ ಪ್ರೀತಿಯ ವ್ಯಾಖ್ಯಾನ ಬದಲಾಗಿದೆ. ಅದನ್ನು ಹೇಳುವ ಪ್ರಯತ್ನ ಮಾಡುತ್ತಿದ್ದೇವೆ. ಈ ಚಿತ್ರಕ್ಕಾಗಿ ಅವರು ಒಂದು ವರ್ಷ ರೀಸರ್ಚ್ ಮಾಡಿದ್ದೇನೆ. ಸಾಮಾಜಿಕ ಮತ್ತು ರಾಜಕೀಯ ವಿಷಯಗಳನ್ನು ಅವಲೋಕಿಸಿದ್ದೇನೆ. ಪ್ರೇಕ್ಷಕರು ಯಾವ ರೀತಿಯ ಕಥೆ ಮತ್ತು ಚಿತ್ರಗಳನ್ನು ಇಷ್ಟಪಡುತ್ತಾರೆ ಎಂದು ಮಾಹಿತಿ ಕಲೆ ಹಾಕಿ, ಅದೆಲ್ಲವನ್ನೂ ಇಟ್ಟುಕೊಂಡು ಕಥೆ ಮಾಡಿದ್ದೇನೆ’ ಎಂದರು.

ವಿಜಯ್‍ ಕೃಷ್ಣಗೆ ಇದು ಮೊದಲ ಚಿತ್ರ. ಆದರೆ, ಹಿಂದಿ ಸಿನಿಮಾ ಮತ್ತು ವೆಬ್‍ಸರಣಿಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ಮೂಲತಃ ಕನ್ನಡದವರಾದ ಅವರಿಗೆ ಕನ್ನಡದಲ್ಲೇ ಏನಾದರೂ ಮಾಡಬೇಕು ಎಂಬ ಆಸೆ ಇತ್ತಂತೆ. ಅದು ಈ ಚಿತ್ರದಲ್ಲಿ ಈಡೇರಿದೆ. ಇನ್ನು, ನಾಯಕಿ ಪ್ರಿಯಾಂಕಾಗೆ ಇದು ಮೂರನೆಯ ಚಿತ್ರ. ಈ ಹಿಂದೆ ‘ಬ್ಯಾಡ್‍ ಮ್ಯಾನರ್ಸ್’ ಮತ್ತು ‘ರುದ್ರ ಗರುಡ ಪುರಾಣ’ ಚಿತ್ರಗಳಲ್ಲಿ ಅವರು ನಟಿಸಿದ್ದರು.

‘ದೂರ ತೀರ ಯಾನ’ ಚಿತ್ರ ಮುಂದಿನ ಜುಲೈನಲ್ಲಿ ಬಿಡುಗಡೆ ಆಗಲಿದೆ. ಶೇಖರ್‍ ಚಂದ್ರು ಛಾಯಾಗ್ರಹಣ ಮತ್ತು ಬಕ್ಕೇಶ್‍ ಸಂಗೀತ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

6 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

8 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

9 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

10 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

12 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

13 hours ago