ಮನರಂಜನೆ

‘ದೂರ ತೀರ ಯಾನ’ಕ್ಕೆ ಹೊರಟ ನಿರ್ದೇಶಕ ಮಂಸೋರೆ …

ಮಂಸೋರೆ ಚಿತ್ರಗಳೆಂದರೆ ಏನಾದರೂ ಸಾಮಾಜಿಕ ಸಮಸ್ಯೆ, ಕಾಳಜಿ ಇರಬೇಕು ಎನ್ನುವಷ್ಟರ ಮಟ್ಟಿಗೆ ಆ ತರಹದ ಚಿತ್ರಗಳನ್ನೇ ಮಾಡುತ್ತಿದ್ದರು ಮಂಸೋರೆ. ಅದಕ್ಕೆ ಉದಾಹರಣೆಯಾಗಿ ‘ಆ್ಯಕ್ಟ್ 1978’, ‘ಹರಿವು’, ’19.20.21’ ಮುಂತಾದ ಚಿತ್ರಗಳು ಸಿಗುತ್ತವೆ. ಅದೇ ತರಹದ ಚಿತ್ರಗಳನ್ನು ಮಾಡುತ್ತಿದ್ದರೆ, ಬ್ರಾಂಡ್‍ ಆಗಿಬಿಡಬಹುದು ಎಂದು ಅವರಿಗೆ ಅನಿಸಿದ್ದಿದೆ. ಅದೇ ಕಾರಣಕ್ಕೆ, ಅವರು ಒಂದು ವರ್ಷದ ಗ್ಯಾಪ್‍ನ ನಂತರ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ಪ್ರೇಮಕಥೆಯೊಂದನ್ನು ಕೈಗೆತ್ತಿಕೊಂಡಿದ್ದು, ಚಿತ್ರಕ್ಕೆ ‘ದೂರ ತೀರ ಯಾನ’ ಎಂಬ ಹೆಸರು ಇಡಲಾಗಿದೆ.

‘ದೂರ ತೀರ ಯಾನ’ ಚಿತ್ರವನ್ನು ಡಿ ಕ್ರಿಯೇಷನ್ಸ್ ಬ್ಯಾನರ್‍ನಡಿ ದೇವರಾಜ್‍ ನಿರ್ಮಿಸುತ್ತಿದ್ದು, ವಿಜಯ್‍ ಕೃಷ್ಣ ಮತ್ತು ಪ್ರಿಯಾಂಕಾ ಕುಮಾರ್‍ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಮಂಸೋರೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ.

ಈ ಚಿತ್ರದಲ್ಲಿ ಕಥೆ ಹೇಳುವ ಶೈಲಿ ಬದಲಿಸುತ್ತಿರುವುದಾಗಿ ಹೇಳುವ ಮಂಸೋರೆ, ‘ಇಲ್ಲೂ ಕಥೆ ಆಳವಾಗಿದೆ. ಅದನ್ನು ಹೇಳುವ ಶೈಲಿ ಮಾತ್ರ ಬದಲಾಯಿಸುತ್ತಿದ್ದೇನೆ. ಇದೊಂದು ಪ್ರಯಾಣದ ಚಿತ್ರ. ಬೆಂಗಳೂರಿನಿಂದ ಶುರುವಾಗಿ ಗೋವಾದಲ್ಲಿ ಮುಗಿಯುತ್ತದೆ. ಇದೊಂದು ಪ್ರೇಮಕಥೆ. ಮೊದಲ 10 ನಿಮಿಷ ಬೆಂಗಳೂರಿನಲ್ಲಿ ನಡೆಯುತ್ತದೆ. ನಂತರ ಗೋವಾವರೆಗೂ ಪ್ರಯಾಣ ಮುಂದುವರೆಯುತ್ತದೆ. ಇಲ್ಲಿ ನಾಯಕ ಪಿಟೀಲು ನುಡಿಸುತ್ತಾನೆ. ನಾಯಕಿ ಕೊಳಲು ನುಡಿಸುತ್ತಾಳೆ. ಅದು ಅವರಿಬ್ಬರ ಪ್ರವೃತ್ತಿ. ವೃತ್ತಿಯಲ್ಲಿ ಅವರಿಬ್ಬರೂ ಸಾಫ್ಟ್ವೇರ್ ಇಂಜಿನಿಯರ್‍ಗಳು. ಅವರಿಬ್ಬರ ಪ್ರೀತಿಯ ಹುಡುಕಾಟವೇ ಈ ಚಿತ್ರದ ಕಥೆ’ ಎಂದರು.

ಇದೊಂದು ತೀರಾ ಗಂಭೀರವಲ್ಲದ ಮತ್ತು ಲವಲವಿಕೆಯಿಂದ ಕೂಡಿರುವ ಚಿತ್ರ ಎನ್ನುವ ಮಂಸೋರೆ, ‘ಇದೊಂದು ಪ್ರೀತಿಯ ಹುಡುಕಾಟದ ಕಥೆ. ಈಗ ಪ್ರೀತಿಯ ವ್ಯಾಖ್ಯಾನ ಬದಲಾಗಿದೆ. ಅದನ್ನು ಹೇಳುವ ಪ್ರಯತ್ನ ಮಾಡುತ್ತಿದ್ದೇವೆ. ಈ ಚಿತ್ರಕ್ಕಾಗಿ ಅವರು ಒಂದು ವರ್ಷ ರೀಸರ್ಚ್ ಮಾಡಿದ್ದೇನೆ. ಸಾಮಾಜಿಕ ಮತ್ತು ರಾಜಕೀಯ ವಿಷಯಗಳನ್ನು ಅವಲೋಕಿಸಿದ್ದೇನೆ. ಪ್ರೇಕ್ಷಕರು ಯಾವ ರೀತಿಯ ಕಥೆ ಮತ್ತು ಚಿತ್ರಗಳನ್ನು ಇಷ್ಟಪಡುತ್ತಾರೆ ಎಂದು ಮಾಹಿತಿ ಕಲೆ ಹಾಕಿ, ಅದೆಲ್ಲವನ್ನೂ ಇಟ್ಟುಕೊಂಡು ಕಥೆ ಮಾಡಿದ್ದೇನೆ’ ಎಂದರು.

ವಿಜಯ್‍ ಕೃಷ್ಣಗೆ ಇದು ಮೊದಲ ಚಿತ್ರ. ಆದರೆ, ಹಿಂದಿ ಸಿನಿಮಾ ಮತ್ತು ವೆಬ್‍ಸರಣಿಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ಮೂಲತಃ ಕನ್ನಡದವರಾದ ಅವರಿಗೆ ಕನ್ನಡದಲ್ಲೇ ಏನಾದರೂ ಮಾಡಬೇಕು ಎಂಬ ಆಸೆ ಇತ್ತಂತೆ. ಅದು ಈ ಚಿತ್ರದಲ್ಲಿ ಈಡೇರಿದೆ. ಇನ್ನು, ನಾಯಕಿ ಪ್ರಿಯಾಂಕಾಗೆ ಇದು ಮೂರನೆಯ ಚಿತ್ರ. ಈ ಹಿಂದೆ ‘ಬ್ಯಾಡ್‍ ಮ್ಯಾನರ್ಸ್’ ಮತ್ತು ‘ರುದ್ರ ಗರುಡ ಪುರಾಣ’ ಚಿತ್ರಗಳಲ್ಲಿ ಅವರು ನಟಿಸಿದ್ದರು.

‘ದೂರ ತೀರ ಯಾನ’ ಚಿತ್ರ ಮುಂದಿನ ಜುಲೈನಲ್ಲಿ ಬಿಡುಗಡೆ ಆಗಲಿದೆ. ಶೇಖರ್‍ ಚಂದ್ರು ಛಾಯಾಗ್ರಹಣ ಮತ್ತು ಬಕ್ಕೇಶ್‍ ಸಂಗೀತ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

1 hour ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago