ಮನರಂಜನೆ

ರಜನಿಕಾಂತ್ ಚಿತ್ರದಿಂದ ಹೊರಬಂದ ನಿರ್ದೇಶಕ ಸುಂದರ್ ಸಿ

ಒಂದು ವಾರದ ಹಿಂದಷ್ಟೇ, ತಮಿಳು ಚಿತ್ರರಂಗದ ಜನಪ್ರಿಯ ನಟರಾದ ರಜನಿಕಾಂತ್‍ ಮತ್ತು ಕಮಲ್‍ ಹಾಸನ್‍ ಇಬ್ಬರೂ ಹೊಸ ಚಿತ್ರವೊಂದರಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು. ಕಮಲ್‍ ಹಾಸನ್‍ ನಿರ್ಮಾಣದ ಈ ಚಿತ್ರವನ್ನು ಸುಂದರ್ ಸಿ ನಿರ್ದೇಶಿಸಬೇಕಿತ್ತು. ಸ್ವತಃ ಕಮಲ್‍ ಹಾಸನ್‍ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ಆದರೆ, ಇದೀಗ ಈ ಚಿತ್ರತಂಡದಿಂದ ಸುಂದರ್‍ ಹೊರಬಂದಿದ್ದಾರೆ.

ಹೌದು, ‘ತಲೈವರ್ 173’ ಚಿತ್ರವನ್ನು ನಿರ್ದೇಶಿಸಬೇಕಿದ್ದ ಸುಂದರ್ ಸಿ, ಆ ಚಿತ್ರ ಶುರುವಾಗುವ ಮೊದಲೇ ಅದರಿಂದ ಹೊರಬಂದಿದ್ದಾರೆ. ಅನಿವಾರ್ಯ ಕಾರಣಗಳಿಂದ ಚಿತ್ರದಿಂದ ಹೊರಬರಬೇಕಾಯಿತು ಎಂದು ಸೋಷಿಯಲ್‍ ಮೀಡಿಯಾದಲ್ಲಿ ಘೋಷಿಸಿದ್ದಾರೆ. ಅಲ್ಲಿಗೆ ರಜನಿಕಾಂತ್ ಅಭಿನಯದ ಚಿತ್ರ ಶುರುವಾಗುವ ಮೊದಲೇ ವಿವಾದಕ್ಕೀಡಾಗಿದೆ.

ಇದನ್ನು ಓದಿ: ನವೆಂಬರ್.14ರಂದು ತೆರೆಮೇಲೆ ಫ್ಯಾಂಟಸಿ ‘ಗತವೈಭವ’

ಹಾಗೆ ನೋಡಿದರೆ, ಈ ಚಿತ್ರದಿಂದ ನಿರ್ದೇಶಕರು ಹೊರಬರುತ್ತಿರುವುದು ಹೊಸದೇನಲ್ಲ. ಮೊದಲಿಗೆ ಈ ಚಿತ್ರವನ್ನು ಲೋಕೇಶ್‍ ಕನಕರಾಜ್‍ ನಿರ್ದೇಶಿಸುತ್ತಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ನಂತರ ನೆಲ್ಸನ್‍ ದಿಲೀಪ್‍ ಕುಮಾರ್ ನಿರ್ದೇಶಿಸುತ್ತಾರೆ ಎಂದು ಹೇಳಲಾಗಿತ್ತು. ಕೊನೆಗೆ ಅವರಿಬ್ಬರನ್ನೂ ಬಿಟ್ಟು, ಸುಂದರ್ ಸಿ ಚಿತ್ರ ನಿರ್ದೇಶಿಸುತ್ತಿದ್ದಾರೆ ಎಂದು ಹೇಳಲಾಯಿತು.

ನಟಿ-ರಾಜಕಾರಣಿ ಖುಷ್ಬೂ ಅವರ ಪತಿಯಾಗಿರುವ ಸುಂದರ್, ಈ ಹಿಂದೆ ರಜನಿಕಾಂತ್‍ ಅಭಿನಯದಲ್ಲಿ ‘ಅರುಣಾಚಲಂ’ ಚಿತ್ರವನ್ನು ನಿರ್ದೇಶಿಸಿದ್ದರು. ಈ ಚಿತ್ರ 1997ರಲ್ಲಿ ಬಿಡುಗಡೆಯಾಗಿ ಸೂಪರ್ ಹಿಟ್‍ ಆಗಿತ್ತು. ಇದೀಗ 28 ವರ್ಷಗಳ ನಂತರ ರಜನಿಕಾಂತ್‍ ಅಭಿನಯದಲ್ಲಿ ಸುಂದರ್‍ ಹೊಸ ಚಿತ್ರ ಅವರು ಚಿತ್ರ ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿ ತಣ್ಣಗಾಗುವ ಮೊದಲೇ ಅವರು ಈ ಚಿತ್ರದಿಂದ ಹೊರಬರುತ್ತಿದ್ದಾರೆ. ಅವರ ಬದಲು ಈ ಚಿತ್ರವನ್ನು ಯಾರು ನಿರ್ದೇಶಿಸಬಹುದು ಎಂಬ ಪ್ರಶ್ನೆ ಕೇಳಿ ಬರುತ್ತಿದ್ದು, ಈ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ಈ ಚಿತ್ರವನ್ನು ಕಮಲ್ ಹಾಸನ್ ತಮ್ಮದೇ ನಿರ್ಮಾಣ ಸಂಸ್ಥೆಯಾದ ರಾಜ್‌ ಕಮಲ್ ಫಿಲ್ಮ್ ಇಂಟರ್‌ನ್ಯಾಷನಲ್ ಕಂಪನಿ ಮೂಲಕ ಚಿತ್ರ ನಿರ್ಮಿಸುತ್ತಿದ್ದಾರೆ. ಈ ಹಿಂದೆ ರಾಜ್‍ ಕಮಲ್‍ ಸಂಸ್ಥೆಯು ಕಮಲ್‍ ಹಾಸನ್‍ ಸೇರಿದಂತೆ ತಮಿಳು ಚಿತ್ರರಂಗದ ಹಲವು ಜನಪ್ರಿಯ ನಟರ ಚಿತ್ರಗಳನ್ನು ನಿರ್ಮಿಸಿತ್ತು. ಇದೇ ಮೊದಲ ಬಾರಿಗೆ ರಜನಿಕಾಂತ್‍ ಅಭಿನಯದ ಚಿತ್ರವನ್ನು ರಾಜ್‍ ಕಮಲ್‍ ನಿರ್ಮಿಸುತ್ತಿದೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

6 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

6 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

8 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

8 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

9 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

9 hours ago