ಮನರಂಜನೆ

ರಜನಿಕಾಂತ್ ಚಿತ್ರದಿಂದ ಹೊರಬಂದ ನಿರ್ದೇಶಕ ಸುಂದರ್ ಸಿ

ಒಂದು ವಾರದ ಹಿಂದಷ್ಟೇ, ತಮಿಳು ಚಿತ್ರರಂಗದ ಜನಪ್ರಿಯ ನಟರಾದ ರಜನಿಕಾಂತ್‍ ಮತ್ತು ಕಮಲ್‍ ಹಾಸನ್‍ ಇಬ್ಬರೂ ಹೊಸ ಚಿತ್ರವೊಂದರಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು. ಕಮಲ್‍ ಹಾಸನ್‍ ನಿರ್ಮಾಣದ ಈ ಚಿತ್ರವನ್ನು ಸುಂದರ್ ಸಿ ನಿರ್ದೇಶಿಸಬೇಕಿತ್ತು. ಸ್ವತಃ ಕಮಲ್‍ ಹಾಸನ್‍ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ಆದರೆ, ಇದೀಗ ಈ ಚಿತ್ರತಂಡದಿಂದ ಸುಂದರ್‍ ಹೊರಬಂದಿದ್ದಾರೆ.

ಹೌದು, ‘ತಲೈವರ್ 173’ ಚಿತ್ರವನ್ನು ನಿರ್ದೇಶಿಸಬೇಕಿದ್ದ ಸುಂದರ್ ಸಿ, ಆ ಚಿತ್ರ ಶುರುವಾಗುವ ಮೊದಲೇ ಅದರಿಂದ ಹೊರಬಂದಿದ್ದಾರೆ. ಅನಿವಾರ್ಯ ಕಾರಣಗಳಿಂದ ಚಿತ್ರದಿಂದ ಹೊರಬರಬೇಕಾಯಿತು ಎಂದು ಸೋಷಿಯಲ್‍ ಮೀಡಿಯಾದಲ್ಲಿ ಘೋಷಿಸಿದ್ದಾರೆ. ಅಲ್ಲಿಗೆ ರಜನಿಕಾಂತ್ ಅಭಿನಯದ ಚಿತ್ರ ಶುರುವಾಗುವ ಮೊದಲೇ ವಿವಾದಕ್ಕೀಡಾಗಿದೆ.

ಇದನ್ನು ಓದಿ: ನವೆಂಬರ್.14ರಂದು ತೆರೆಮೇಲೆ ಫ್ಯಾಂಟಸಿ ‘ಗತವೈಭವ’

ಹಾಗೆ ನೋಡಿದರೆ, ಈ ಚಿತ್ರದಿಂದ ನಿರ್ದೇಶಕರು ಹೊರಬರುತ್ತಿರುವುದು ಹೊಸದೇನಲ್ಲ. ಮೊದಲಿಗೆ ಈ ಚಿತ್ರವನ್ನು ಲೋಕೇಶ್‍ ಕನಕರಾಜ್‍ ನಿರ್ದೇಶಿಸುತ್ತಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ನಂತರ ನೆಲ್ಸನ್‍ ದಿಲೀಪ್‍ ಕುಮಾರ್ ನಿರ್ದೇಶಿಸುತ್ತಾರೆ ಎಂದು ಹೇಳಲಾಗಿತ್ತು. ಕೊನೆಗೆ ಅವರಿಬ್ಬರನ್ನೂ ಬಿಟ್ಟು, ಸುಂದರ್ ಸಿ ಚಿತ್ರ ನಿರ್ದೇಶಿಸುತ್ತಿದ್ದಾರೆ ಎಂದು ಹೇಳಲಾಯಿತು.

ನಟಿ-ರಾಜಕಾರಣಿ ಖುಷ್ಬೂ ಅವರ ಪತಿಯಾಗಿರುವ ಸುಂದರ್, ಈ ಹಿಂದೆ ರಜನಿಕಾಂತ್‍ ಅಭಿನಯದಲ್ಲಿ ‘ಅರುಣಾಚಲಂ’ ಚಿತ್ರವನ್ನು ನಿರ್ದೇಶಿಸಿದ್ದರು. ಈ ಚಿತ್ರ 1997ರಲ್ಲಿ ಬಿಡುಗಡೆಯಾಗಿ ಸೂಪರ್ ಹಿಟ್‍ ಆಗಿತ್ತು. ಇದೀಗ 28 ವರ್ಷಗಳ ನಂತರ ರಜನಿಕಾಂತ್‍ ಅಭಿನಯದಲ್ಲಿ ಸುಂದರ್‍ ಹೊಸ ಚಿತ್ರ ಅವರು ಚಿತ್ರ ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿ ತಣ್ಣಗಾಗುವ ಮೊದಲೇ ಅವರು ಈ ಚಿತ್ರದಿಂದ ಹೊರಬರುತ್ತಿದ್ದಾರೆ. ಅವರ ಬದಲು ಈ ಚಿತ್ರವನ್ನು ಯಾರು ನಿರ್ದೇಶಿಸಬಹುದು ಎಂಬ ಪ್ರಶ್ನೆ ಕೇಳಿ ಬರುತ್ತಿದ್ದು, ಈ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ಈ ಚಿತ್ರವನ್ನು ಕಮಲ್ ಹಾಸನ್ ತಮ್ಮದೇ ನಿರ್ಮಾಣ ಸಂಸ್ಥೆಯಾದ ರಾಜ್‌ ಕಮಲ್ ಫಿಲ್ಮ್ ಇಂಟರ್‌ನ್ಯಾಷನಲ್ ಕಂಪನಿ ಮೂಲಕ ಚಿತ್ರ ನಿರ್ಮಿಸುತ್ತಿದ್ದಾರೆ. ಈ ಹಿಂದೆ ರಾಜ್‍ ಕಮಲ್‍ ಸಂಸ್ಥೆಯು ಕಮಲ್‍ ಹಾಸನ್‍ ಸೇರಿದಂತೆ ತಮಿಳು ಚಿತ್ರರಂಗದ ಹಲವು ಜನಪ್ರಿಯ ನಟರ ಚಿತ್ರಗಳನ್ನು ನಿರ್ಮಿಸಿತ್ತು. ಇದೇ ಮೊದಲ ಬಾರಿಗೆ ರಜನಿಕಾಂತ್‍ ಅಭಿನಯದ ಚಿತ್ರವನ್ನು ರಾಜ್‍ ಕಮಲ್‍ ನಿರ್ಮಿಸುತ್ತಿದೆ.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

2 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

2 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

3 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

3 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

4 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

4 hours ago