ಮನರಂಜನೆ

ರಜನಿಕಾಂತ್ ಚಿತ್ರದಿಂದ ಹೊರಬಂದ ನಿರ್ದೇಶಕ ಸುಂದರ್ ಸಿ

ಒಂದು ವಾರದ ಹಿಂದಷ್ಟೇ, ತಮಿಳು ಚಿತ್ರರಂಗದ ಜನಪ್ರಿಯ ನಟರಾದ ರಜನಿಕಾಂತ್‍ ಮತ್ತು ಕಮಲ್‍ ಹಾಸನ್‍ ಇಬ್ಬರೂ ಹೊಸ ಚಿತ್ರವೊಂದರಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು. ಕಮಲ್‍ ಹಾಸನ್‍ ನಿರ್ಮಾಣದ ಈ ಚಿತ್ರವನ್ನು ಸುಂದರ್ ಸಿ ನಿರ್ದೇಶಿಸಬೇಕಿತ್ತು. ಸ್ವತಃ ಕಮಲ್‍ ಹಾಸನ್‍ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ಆದರೆ, ಇದೀಗ ಈ ಚಿತ್ರತಂಡದಿಂದ ಸುಂದರ್‍ ಹೊರಬಂದಿದ್ದಾರೆ.

ಹೌದು, ‘ತಲೈವರ್ 173’ ಚಿತ್ರವನ್ನು ನಿರ್ದೇಶಿಸಬೇಕಿದ್ದ ಸುಂದರ್ ಸಿ, ಆ ಚಿತ್ರ ಶುರುವಾಗುವ ಮೊದಲೇ ಅದರಿಂದ ಹೊರಬಂದಿದ್ದಾರೆ. ಅನಿವಾರ್ಯ ಕಾರಣಗಳಿಂದ ಚಿತ್ರದಿಂದ ಹೊರಬರಬೇಕಾಯಿತು ಎಂದು ಸೋಷಿಯಲ್‍ ಮೀಡಿಯಾದಲ್ಲಿ ಘೋಷಿಸಿದ್ದಾರೆ. ಅಲ್ಲಿಗೆ ರಜನಿಕಾಂತ್ ಅಭಿನಯದ ಚಿತ್ರ ಶುರುವಾಗುವ ಮೊದಲೇ ವಿವಾದಕ್ಕೀಡಾಗಿದೆ.

ಇದನ್ನು ಓದಿ: ನವೆಂಬರ್.14ರಂದು ತೆರೆಮೇಲೆ ಫ್ಯಾಂಟಸಿ ‘ಗತವೈಭವ’

ಹಾಗೆ ನೋಡಿದರೆ, ಈ ಚಿತ್ರದಿಂದ ನಿರ್ದೇಶಕರು ಹೊರಬರುತ್ತಿರುವುದು ಹೊಸದೇನಲ್ಲ. ಮೊದಲಿಗೆ ಈ ಚಿತ್ರವನ್ನು ಲೋಕೇಶ್‍ ಕನಕರಾಜ್‍ ನಿರ್ದೇಶಿಸುತ್ತಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ನಂತರ ನೆಲ್ಸನ್‍ ದಿಲೀಪ್‍ ಕುಮಾರ್ ನಿರ್ದೇಶಿಸುತ್ತಾರೆ ಎಂದು ಹೇಳಲಾಗಿತ್ತು. ಕೊನೆಗೆ ಅವರಿಬ್ಬರನ್ನೂ ಬಿಟ್ಟು, ಸುಂದರ್ ಸಿ ಚಿತ್ರ ನಿರ್ದೇಶಿಸುತ್ತಿದ್ದಾರೆ ಎಂದು ಹೇಳಲಾಯಿತು.

ನಟಿ-ರಾಜಕಾರಣಿ ಖುಷ್ಬೂ ಅವರ ಪತಿಯಾಗಿರುವ ಸುಂದರ್, ಈ ಹಿಂದೆ ರಜನಿಕಾಂತ್‍ ಅಭಿನಯದಲ್ಲಿ ‘ಅರುಣಾಚಲಂ’ ಚಿತ್ರವನ್ನು ನಿರ್ದೇಶಿಸಿದ್ದರು. ಈ ಚಿತ್ರ 1997ರಲ್ಲಿ ಬಿಡುಗಡೆಯಾಗಿ ಸೂಪರ್ ಹಿಟ್‍ ಆಗಿತ್ತು. ಇದೀಗ 28 ವರ್ಷಗಳ ನಂತರ ರಜನಿಕಾಂತ್‍ ಅಭಿನಯದಲ್ಲಿ ಸುಂದರ್‍ ಹೊಸ ಚಿತ್ರ ಅವರು ಚಿತ್ರ ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿ ತಣ್ಣಗಾಗುವ ಮೊದಲೇ ಅವರು ಈ ಚಿತ್ರದಿಂದ ಹೊರಬರುತ್ತಿದ್ದಾರೆ. ಅವರ ಬದಲು ಈ ಚಿತ್ರವನ್ನು ಯಾರು ನಿರ್ದೇಶಿಸಬಹುದು ಎಂಬ ಪ್ರಶ್ನೆ ಕೇಳಿ ಬರುತ್ತಿದ್ದು, ಈ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ಈ ಚಿತ್ರವನ್ನು ಕಮಲ್ ಹಾಸನ್ ತಮ್ಮದೇ ನಿರ್ಮಾಣ ಸಂಸ್ಥೆಯಾದ ರಾಜ್‌ ಕಮಲ್ ಫಿಲ್ಮ್ ಇಂಟರ್‌ನ್ಯಾಷನಲ್ ಕಂಪನಿ ಮೂಲಕ ಚಿತ್ರ ನಿರ್ಮಿಸುತ್ತಿದ್ದಾರೆ. ಈ ಹಿಂದೆ ರಾಜ್‍ ಕಮಲ್‍ ಸಂಸ್ಥೆಯು ಕಮಲ್‍ ಹಾಸನ್‍ ಸೇರಿದಂತೆ ತಮಿಳು ಚಿತ್ರರಂಗದ ಹಲವು ಜನಪ್ರಿಯ ನಟರ ಚಿತ್ರಗಳನ್ನು ನಿರ್ಮಿಸಿತ್ತು. ಇದೇ ಮೊದಲ ಬಾರಿಗೆ ರಜನಿಕಾಂತ್‍ ಅಭಿನಯದ ಚಿತ್ರವನ್ನು ರಾಜ್‍ ಕಮಲ್‍ ನಿರ್ಮಿಸುತ್ತಿದೆ.

ಆಂದೋಲನ ಡೆಸ್ಕ್

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

6 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

6 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

7 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

10 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

10 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

11 hours ago