ಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಾಟೇರ ಡೈರೆಕ್ಟರ್‌ ತರುಣ್‌ ಸುಧೀರ್‌-ಸೋನಾಲ್‌!

ಬೆಂಗಳೂರು: ಕಾಟೇರಾ ಚಿತ್ರದ ನಿರ್ದೇಶಕ ತರುಣ್‌ ಸುಧೀರ್‌ ಹಾಗೂ ನಟಿ ಸೋನಾಲ್‌ ಮೊಂಥೆರೋ ಅವರು ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟರು.

ಕೆಂಗೇರಿ ಬಳಿಯ ಪೂರ್ಣಿಮಾ ಪ್ಯಾಲೇಸ್‌ನಲ್ಲಿ ಇಂದು ಬೆಳಿಗ್ಗೆ 10.50 ರಿಂದ 11.35ರ ಶುಭ ತುಲಾ ಲಘ್ನದಲ್ಲಿ ಈ ನವ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಹಿಂದೂ ಸಂಪ್ರದಾಯದಂತೆ ಮಾಂಗಲ್ಯ ಧಾರಣೆ ಮೂಲಕ ನಡೆದ ಮದುವೆಗೆ ಕನ್ನಡ ಚಿತ್ರರಂಗ ಹಲವಾರು ಗಣ್ಯರು ಸಾಕ್ಷಿಯಾದರು.

ಇನ್ನು ಈ ಮದುವೆ ಹಾಲ್‌ನ ಔಟ್‌ ಡೋರನ್ನು ಫಿಲ್ಮಂ ಅವಾರ್ಡ್‌ ಫಂಕ್ಷನ್‌ ಮಾದರಿಯಲ್ಲಿ ನಿರ್ಮಿಸಿದ್ದು, 185ಕ್ಕೂ ವಿವಿಧ ಬಗೆಯ ಖಾದ್ಯಗಳನ್ನು ಮದುವೆಯಲ್ಲಿ ಮಾಡಲಾಗಿದೆ. ಇನ್ನು ತರುಣ್‌ ಅವರ ಮದುವೆ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಯ್ಯೂಟೂಬ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಸುಧೀರ್‌ ಗೆಳೆಯರಾದ ನೆನಪಿರಲಿ ಪ್ರೇಮ್‌, ನಟ ಶರಣ್‌, ಮಾಸ್ಟರ್‌ ಆನಂದ್‌ ಸೇರಿದಂತೆ ಸ್ನೇಹ ಬಳಗ ಹಾಗೂ ಗಣ್ಯರ ದಂಡೇ ಮದುವೆ ಸಮಾರಂಭದಲ್ಲಿ ಭಾಗಿಯಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಿ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…

6 mins ago

ಚಾ. ಬೆಟ್ಟಕ್ಕೆ ಗಂಡಾಂತರ ತರುವ ಕಟ್ಟಡಗಳ ನಿರ್ಮಾಣ ನಿಲ್ಲಿಸಿ

ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…

16 mins ago

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

40 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

58 mins ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

3 hours ago