ಮನರಂಜನೆ

ಡಿಕೆಶಿ ಹೇಳಿಕೆಯಿಂದ ದರ್ಶನ್‌ಗೆ ಮತ್ತೊಂದು ಸಂಕಷ್ಟ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್‌ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಲಿದೆಯಾ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ ಸದ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನೀಡಿರುವ ಹೇಳಿಕೆ.

ಇಂದು ( ಜೂನ್‌ 18 ) ಡಿಕೆ ಶಿವಕುಮಾರ್‌ ಬಿಬಿಎಂಪಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮೇಲ್ವಿಚಾರಣೆಗಳ ಕಚೇರಿ ಉದ್ಘಾಟನೆ ಮತ್ತು ಬಿಬಿಎಂಪಿ ಪೌರ ಸಭಾಂಗಣ ಕಚೇರಿ ಉದ್ಘಾಟನೆ ಮಾಡಿ ಮಾಧ್ಯಮಗಳ ಜತೆ ಮಾತನಾಡುವಾಗ ರಾಜರಾಜೇಶ್ವರಿ ನಗರ ರಾಜಕಾಲುವೆ ಮೇಲೆ ನಿರ್ಮಾಣಗೊಂಡಿರುವ ದರ್ಶನ್‌ ಮನೆ ತೆರವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಯಾರೇ ಸ್ಟೇ ತಂದಿದ್ದರೂ ಕಾನೂನು ಪ್ರಕಾರ ಕ್ರಮವಹಿಸಿ ತೆರವು ಮಾಡಲಿದ್ದೇವೆ. ನೀನು ಸ್ಟೇ ತಂದಿದ್ದರೂ ತೆರವು ಮಾಡುತ್ತೇವೆ. ನಾನು ಸ್ಟೇ ತಂದಿದ್ದರೂ ತೆರವು ಮಾಡುತ್ತೇವೆ. ಯಾರೇ ಸ್ಟೇ ತಂದಿದ್ದರೂ ತೆರವು ಮಾಡುತ್ತೇವೆ. ಕಾನೂನು ಪ್ರಕಾರ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್‌ ಹೇಳಿದರು. ಈ ಮೂಲಕ ಪರೋಕ್ಷವಾಗಿ ದರ್ಶನ್‌ ಮನೆ ತೆರವಿನ ಸುಳಿವು ನೀಡಿದಂತಿದೆ.

ಈ ಹಿಂದೆ ಸರ್ಕಾರ ರಾಜಕಾಲುವೆ ಮೇಲೆ ನಿರ್ಮಾಣವಾಗಿರುವ ಮನೆಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದಾಗ ನಟ ದರ್ಶನ್‌ ಬಫರ್‌ ಜೋನ್‌ ಮೇಲೆ ಮನೆ ನಿರ್ಮಿಸಿರುವುದು ಬೆಳಕಿಗೆ ಬಂದಿತ್ತು. ಕೂಡಲೇ ದರ್ಶನ್‌ ಕೋರ್ಟ್ ಮೊರೆ ಹೋಗಿದ್ದರು. ಉಚ್ಛ ನ್ಯಾಯಾಲಯ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ 2016ರಲ್ಲಿ ಸೂಚನೆ ನೀಡಿತ್ತು.

 

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

3 hours ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

3 hours ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

3 hours ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

3 hours ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

13 hours ago