dk and kicha
ಬೆಂಗಳೂರು : ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟ ಸುದೀಪ್ ಸುದ್ದಿಗೋಷ್ಠಿ ನಡೆಸಿ ಸಾಕಷ್ಟು ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ದರ್ಶನ್ ಹಾಗೂ ತಮ್ಮ ನಡುವಿನ ಸ್ನೇಹದ ಬಗ್ಗೆಯೂ ಒಂದಿಷ್ಟು ಮೆಲುಕು ಹಾಕಿದ್ದು, ಇದೇ ವೇಳೆ ಡಿಕೆ ಶಿವಕುಮಾರ್ ಅವರ ನಟ್ಟು ಬೋಲ್ಟು ಹೇಳಿಕೆಗೆ ಸ್ಪಷ್ಟನೆ ಕೊಟ್ಟಿದ್ದಾರೆ.
ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ನಟ ಸುದೀಪ್, ನಟ್ಟು ಬೋಲ್ಟು ಕಿತಾಪತಿ ಸಾಧು ಕೋಕಿಲ ಅವರದ್ದು, ಇದ್ರಲ್ಲಿ ಡಿಕೆ ಸಾಹೇಬರದ್ದು ಏನೂ ಇಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಸಾಧು ಕೋಕಿಲ ಅವರು ಆಮೇಲೆ ಹೇಳ್ತಾರೆ, ಎಲ್ಲಾರನ್ನೂ ಒಟ್ಟಿಗೆ ಕರೆದ್ರೆ ನಾನು ಹೇಗೆ ಮೆಂಟೇನ್ ಮಾಡ್ಲಿ? ಯಾರಿಗೆ ಸೆಕ್ಯೂರಿಟಿ ಕೊಡ್ಲಿ ಅಂತಾರೆ. ಅದನ್ನ ಮೊದಲೇ ಅವರಿಗೆ ಹೇಳ್ಬೇಕು ತಾನೆ. ಅಲ್ಲಿ ಬಂದು ಹೇಳಿದಾಗ ಸೈಲೆಂಟ್ ಆಗಿದ್ದರು. ಇದು ಸಾಧು ಅವರದ್ದೇ ಕಿತಾಪತಿ. ವೈಯಕ್ತಿಕವಾಗಿ ಕಾರ್ಯಕ್ರಮಕ್ಕೆ ಕರೆದವರು ಬಂದಿದ್ದಾರೆ. ಕೆಲವರಿಗೆ ಬರೋಕಾಗಿಲ್ಲ. ಅಷ್ಟಕ್ಕೆ ಕೆಲವರು ದೊಡ್ಡ ದೊಡ್ಡ ಮಾತುಗಳನ್ನಾಡಿದರು, ಪರ್ವಾಗಿಲ್ಲ ಅಂದರು.
ಪಾಪ ಸಾಧು ಅವರದ್ದು ಇದರಲ್ಲಿ ಏನೂ ತಪ್ಪಿಲ್ಲ. ಅವರು ತಮಾಷೆ ಮಾಡಿಕೊಂಡೇ ಇರ್ತಾರೆ. ಇದನ್ನೂ ತಮಾಷೆಯಾಗೇ ಹೇಳಿದ್ದಾರೆ. ಆದ್ರೆ ಸೀರಿಯಸ್ ಆಗಿಬಿಡ್ತು ಅಷ್ಟೇ ಅಂತ ಹೇಳಿದರು.
ಡಿಕೆಶಿ ನಟ್ಟು ಬೋಲ್ಟು ಟೈಟ್ ಮಾಡೋದಾಗಿ ಹೇಳಿದ್ದೇಕೆ?
ಬೆಂಗಳೂರಲ್ಲೇ ಸಿನಿ ಕಾರ್ಯಕ್ರಮವೊಂದರಲ್ಲಿ ಡಿಕೆಶಿ ಮಾತನಾಡುವಾಗ, ಚಿತ್ರರಂಗದಲ್ಲಿ ಯಾರಿಗೆ ಹೇಗೆ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಎನ್ನುವುದು ಗೊತ್ತಿದೆ. ಇದನ್ನು ವಾರ್ನಿಂಗ್ ಅಂತಾ ಆದ್ರೂ ಅಂದುಕೊಳ್ಳಿ, ಮನವಿ ಅಂತಾ ಆದ್ರೂ ಅಂದುಕೊಳ್ಳಿ. ಥಿಯೇಟರ್ಗೆ ಪರ್ಮಿಷನ್ ಕೊಡಲಿಲ್ಲಾ ಅಂದ್ರೆ ಸಿನಿಮಾನೇ ರಿಲೀಸ್ ಆಗಲ್ವಲ್ಲ ಅಂತ ಹೇಳಿದ್ದರು. ಈ ಹೇಳಿಕೆ ಸಿನಿಮಾರಂಗದಲ್ಲಿ ಭಾರೀ ಸಂಚಲನ ಮೂಡಿಸಿತ್ತು, ಇಡೀ ಚಿತ್ರರಂಗವೇ ದಂಗಾಗಿತ್ತು. ಆ ಸಮಯಕ್ಕೆ ಕೆಲವು ನಟ ನಟಿಯರು ಪ್ರತಿಕ್ರಿಯಿಸಿದ್ರು, ಕೆಲವರು ಡಿಕೆಶಿ ವಿರುದ್ಧ ಬೇಸರವನ್ನು ಸಹ ಹೊರ ಹಾಕಿದ್ದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…