ಮೈಸೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ “ಮೈಸೂರಿನ ಅನ್ವೇಷಿಸದ ಪ್ರವಾಸಿ ತಾಣಗಳು” ಎಂಬ ಶೀರ್ಷಿಕೆಯಡಿಯಲ್ಲಿ ರಾಜ್ಯ ಮಟ್ಟದ ಛಾಯಾಚಿತ್ರ ಮತ್ತು ಕಿರು ವಿಡಿಯೋ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನದಿಗಳು, ಪ್ರಕೃತಿ ಮತ್ತು ರಮಣೀಯ ಸೌಂದರ್ಯ ತಾಣಗಳು, ಜಲಪಾತಗಳು, ವಸ್ತು ಸಂಗ್ರಹಾಲಯಗಳು, ಜಾನಪದ ಹಾಗೂ ಕಲೆಗಳು, ಸಾಂಪ್ರದಾಯಿಕ ಸ್ಥಳೀಯ ಹಬ್ಬಗಳು ಮತ್ತು ಕಲೆಗಳು, ಪಾರಂಪರಿಕ ಕಟ್ಟಡಗಳು ಮತ್ತು ಸ್ಮಾರಕಗಳು, ಧಾರ್ಮಿಕ ಮತ್ತು ಸಾಹಸ ಪ್ರವಾಸೋದ್ಯಮ ಹಾಗೂ ಇತರೆ ತಾಣಗಳ ರಾಜ್ಯ ಮಟ್ಟದ ಛಾಯಾಗ್ರಹಣ ಮತ್ತು ಕಿರು ವೀಡಿಯೋ ಸ್ಪರ್ಧೆ ಇದಾಗಿದೆ.
ಆಯ್ಕೆಯಾದ ಅತ್ಯುತ್ತಮ ಸ್ಪರ್ಧಾರ್ಥಿಗಳಿಗೆ ಪ್ರಥಮ ಬಹುಮಾನವಾಗಿ ರೂ.25,000 ದ್ವಿತೀಯ ಬಹುಮಾನ ರೂ.15,000 ಹಾಗೂ ತೃತೀಯ ಬಹುಮಾನವಾಗಿ ರೂ.10,000 ಗಳನ್ನು ನೀಡಲಾಗುವುದು.
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು https://Mysore.nic.inen/competitions/ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಜೂ.20 ಅಂತಿಮ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ visitmysurutourism@gmail.com ಹಾಗೂ 7411564510, 9008693409 ನ್ನು ಸಂಪರ್ಕಿಸಬಹುದು ಎಂದು ಮೈಸೂರು ವಿಭಾಗದ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಎಂ.ಕೆ. ಸವಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ: ರಾಷ್ಟ್ರ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ…
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ…
ಕಠ್ಮಂಡು: ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಆತಂಕ ಎದುರಾಗಿದೆ. ದಾರ್ಚುಲಾ ಜಿಲ್ಲೆಯ ಅಪಿ ಹಿಮಾಲ್ ಗ್ರಾಮೀಣ ಪುರಸಭೆಯ ಭಟ್ಟಾರ್ ಪ್ರದೇಶದಲ್ಲಿ…
ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ಎನ್.ಚಲುವರಾಯ ಸ್ವಾಮಿಯವರ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು…
ಸರ್ಕಾರವು ೭೦ ವರ್ಷದೊಳಗಿನ ನಿವೃತ್ತ ಸರ್ಕಾರಿ ಪಿಂಚಣಿದಾರರಿಗೆ, ಕುಟುಂಬ ಪಿಂಚಣಿದಾರರಿಗೆ ಮತ್ತು ಅವರ ಅರ್ಹ ಅವಲಂಬಿತ ವಿಕಲಚೇತನ ಮಕ್ಕಳ ಆರೋಗ್ಯ…
ನಮ್ಮಲ್ಲಿ ಗುರುವಿಗೆ ಅಗ್ರಸ್ಥಾನ ಕೊಟ್ಟಿದ್ದೇವೆ. ಒಂದು ಅಕ್ಷರ ಕಲಿಸಿದವರನ್ನು ಗುರುವೆಂದು ಒಪ್ಪಿಕೊಂಡಿದ್ದೇವೆ. ಗುರುವು ನಮಗೆ ಒಳ್ಳೆಯ ಮಾರ್ಗ,ನಡತೆ ಹಾಗೂ ಜ್ಞಾನವನ್ನು…