ಮೈಸೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ “ಮೈಸೂರಿನ ಅನ್ವೇಷಿಸದ ಪ್ರವಾಸಿ ತಾಣಗಳು” ಎಂಬ ಶೀರ್ಷಿಕೆಯಡಿಯಲ್ಲಿ ರಾಜ್ಯ ಮಟ್ಟದ ಛಾಯಾಚಿತ್ರ ಮತ್ತು ಕಿರು ವಿಡಿಯೋ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನದಿಗಳು, ಪ್ರಕೃತಿ ಮತ್ತು ರಮಣೀಯ ಸೌಂದರ್ಯ ತಾಣಗಳು, ಜಲಪಾತಗಳು, ವಸ್ತು ಸಂಗ್ರಹಾಲಯಗಳು, ಜಾನಪದ ಹಾಗೂ ಕಲೆಗಳು, ಸಾಂಪ್ರದಾಯಿಕ ಸ್ಥಳೀಯ ಹಬ್ಬಗಳು ಮತ್ತು ಕಲೆಗಳು, ಪಾರಂಪರಿಕ ಕಟ್ಟಡಗಳು ಮತ್ತು ಸ್ಮಾರಕಗಳು, ಧಾರ್ಮಿಕ ಮತ್ತು ಸಾಹಸ ಪ್ರವಾಸೋದ್ಯಮ ಹಾಗೂ ಇತರೆ ತಾಣಗಳ ರಾಜ್ಯ ಮಟ್ಟದ ಛಾಯಾಗ್ರಹಣ ಮತ್ತು ಕಿರು ವೀಡಿಯೋ ಸ್ಪರ್ಧೆ ಇದಾಗಿದೆ.
ಆಯ್ಕೆಯಾದ ಅತ್ಯುತ್ತಮ ಸ್ಪರ್ಧಾರ್ಥಿಗಳಿಗೆ ಪ್ರಥಮ ಬಹುಮಾನವಾಗಿ ರೂ.25,000 ದ್ವಿತೀಯ ಬಹುಮಾನ ರೂ.15,000 ಹಾಗೂ ತೃತೀಯ ಬಹುಮಾನವಾಗಿ ರೂ.10,000 ಗಳನ್ನು ನೀಡಲಾಗುವುದು.
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು https://Mysore.nic.inen/competitions/ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಜೂ.20 ಅಂತಿಮ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ visitmysurutourism@gmail.com ಹಾಗೂ 7411564510, 9008693409 ನ್ನು ಸಂಪರ್ಕಿಸಬಹುದು ಎಂದು ಮೈಸೂರು ವಿಭಾಗದ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಎಂ.ಕೆ. ಸವಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…