ಮನರಂಜನೆ

‘GOAT’ ಚಿತ್ರಕ್ಕೆ ವಿಜಯ್‍ ಪಡೆದ ಸಂಭಾವನೆ ಎಷ್ಟು ಗೊತ್ತಾ?

ತಮಿಳಿನ ಸ್ಟಾರ್ ನಟ ‘ಇಳಯದಳಪತಿ’ ವಿಜಯ್‍ ನಟಿಸಿರುವ The Greatest of All Time (GOAT) ಚಿತ್ರವು ಇಂದು (ಸೆಪ್ಟೆಂಬರ್ 05) ಜಗತ್ತಿನಾದ್ಯಂತ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಈ ಚಿತ್ರಕ್ಕೆ ವಿಜಯ್‍ ಪಡೆದಿರಬಹುದಾದ ಸಂಭಾವನೆ ಕುರಿತು ಬಿಸಿಬಿಸಿ ಚರ್ಚೆಯಾಗುತ್ತಿದೆ.

ಸಾಮಾನ್ಯವಾಗಿ ಒಂದು ಚಿತ್ರದ ಬಜೆಟ್‍ ಬಗ್ಗೆ ಅಥವಾ ನಾಯಕರ ಸಂಭಾವನೆಯ ಕುರಿತು ನಿರ್ಮಾಪಕರು ಮಾತನಾಡುವುದಿಲ್ಲ. ಸಂಭಾವನೆಯ ವಿಷಯವನ್ನು ಗೌಪ್ಯವಾಗಿ ಇಡಲಾಗಿದೆ. ಆದರೆ, ಈ ಚಿತ್ರದ ನಿರ್ಮಾಪಕರೇ ವಿಜಯ್‍ ಸಂಭಾವನೆ ಕುರಿತು ಒಂದಿಷ್ಟು ವಿಷಯಗಳನ್ನು ಹೇಳಿಕೊಂಡಿದ್ದಾರೆ.

‘GOAT’ ನಿರ್ಮಾಪಕಿ ಅರ್ಚನಾ ಕಲಾಪತಿ ಅವರ ಪ್ರಕಾರ, ಚಿತ್ರಕ್ಕೆ ವಿಜಯ್‍ ಪಡೆದಿರುವ ಸಂಭಾವನೆ 200 ಕೋಟಿ ರೂ.ಗಳಂತೆ. ಚಿತ್ರದ ಬಜೆಟ್‍ 380ರಿಂದ 400 ಕೋಟಿಯವರೆಗೂ ಆಗಿದ್ದು, ಅದರಲ್ಲಿ ವಿಜಯ್‍ ಅವರ ಸಂಭಾವನೆಯೇ ಅರ್ಧದಷ್ಟು ಆಗಿದೆ ಎಂದು ಹೇಳಲಾಗಿದೆ. ಈ ಮೂಲಕ ಭಾರತೀಯ ನಟರ ಪೈಕಿ ಅತೀ ಹೆಚ್ಚು ಸಂಭಾವನೆ ಪಡೆಯುವ ಕಲಾವಿದರು ಯಾರು ಎಂಬ ಚರ್ಚೆಗಳು ಆಗಾಗ ಆಗುತ್ತಲೇ ಇರುತ್ತವೆ. ವಿಜಯ್‍ ಅವರ ಹೆಸರು ಸಹ ಈ ಪಟ್ಟಿಯಲ್ಲಿ ಕೆಲವು ವರ್ಷಗಳಿಂದ ಇದ್ದು, ಈಗ ಅವರು ಅಗ್ರಸ್ಥಾನಕ್ಕೇರಿದ್ದಾರೆ.

‘GOAT’ ಚಿತ್ರದಲ್ಲಿ ವಿಜಯ್‍ ಜೊತೆಗೆ ಪ್ರಶಾತ್‍, ಅಜ್ಮಲ್ ಅಮೀರ್, ಸ್ನೇಹಾ, ಲೈಲಾ, ಪ್ರಭುದೇವ, ಮೋಹನ್‍, ಜಯರಾಂ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಟ-ರಾಜಕಾರಣಿ ದಿವಂಗತ ವಿಜಯಕಾಂತ್‍ ಅವರನ್ನು ಈ ಚಿತ್ರದಲ್ಲಿ ಏಐ ತಂತ್ರಜ್ಞಾನದ ಮೂಲಕ ಸೃಷ್ಟಿಸಿದೆ ಎಂದು ಹೇಳಲಾಗುತ್ತಿದೆ.

ಈ ಚಿತ್ರವನ್ನು ವೆಂಕಟ್‍ ಪ್ರಭು ನಿರ್ದೇಶನ ಮಾಡಿದರೆ, ಯುವನ್‍ ಶಂಕರ್ ರಾಜ ಸಂಗೀತ ಸಂಯೋಜಿಸಿದ್ದಾರೆ. ಕಲಾಪತಿ ಎಸ್‍ ಅಘೋರಂ ಈ ಚಿತ್ರವನ್ನು ಎಜಿಎಸ್‍ ಎಂಟರ್‍ಟೈನ್‍ಮೆಂಟ್‍ ಸಂಸ್ಥೆಯಡಿ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವು ತಮಿಳು, ಹಿಂದಿ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆ ಆಗುತ್ತಿದೆ.

ಭೂಮಿಕಾ

Recent Posts

ಹನೂರು | ಚಿನ್ನ ನಿಕ್ಷೇಪದ ಶಂಕೆ ; ಗುಡ್ಡವನ್ನೇ ಅಗೆದ ಕಿಡಿಗೇಡಿಗಳು

ಹನೂರು : ತಾಲ್ಲೂಕಿನ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲೂ ಜಿಎಸ್‌ಐ ಅಧಿಕಾರಿಗಳು ಚಿನ್ನದ ನಿಕ್ಷೇಪ ಇರುವ ಬಗ್ಗೆ ಅಧ್ಯಯನಕ್ಕೆ ಮುಂದಾಗುತ್ತಿದ್ದಂತೆ ಚಿನ್ನದಾಸೆಗಾಗಿ…

11 mins ago

ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ ಆರಂಭ : ವರ್ಣರಂಜಿತ ಚಾಲನೆ

ಮೈಸೂರು : ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂಭ್ರಮಕ್ಕೆ ಮುನ್ನುಡಿಯಾಗಿ ಅರಮನೆ ಫಲಪುಷ್ಪ ಪ್ರದರ್ಶನ ಭಾನುವಾರದಿಂದ ವರ್ಣರಂಜಿತವಾಗಿ ಆರಂಭಗೊಂಡಿದೆ. ಮೈಸೂರು…

15 mins ago

ಜೋಹಾನ್ಸ್‌ಬರ್ಗ್‌ನಲ್ಲಿ ಗುಂಡಿನ ದಾಳಿ : 10 ಮಂದಿ ಸಾವು, 10 ಜನರಿಗೆ ಗಾಯ

ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ…

20 mins ago

ಎಚ್.ಡಿ.ಕೋಟೆ | ಪಟ್ಟಣಕ್ಕೆ ಬಂದ ಚಿರತೆ : ಮೇಕೆ ಬಲಿ ; ಜನರಲ್ಲಿ ಆತಂಕ

ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್‌ ನಂಬರ್‌ 21ರ…

32 mins ago

ಗಂಗವಾಡಿ ಬಳಿ ಚಿರತೆ ದಾಳಿ : ಮೂರು ಕರು ಸಾವು

ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…

2 hours ago

ರೈಲು ಪ್ರಯಾಣ ದರ ಹೆಚ್ಚಳ : 500 ಕಿ.ಮೀ.ಗೆ 10ರೂ ಏರಿಕೆ

ಹೊಸದಿಲ್ಲಿ : ದೇಶಾದ್ಯಂತ ಡಿಸೆಂಬರ್ 26 ರಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆಯು ಪ್ರಯಾಣ ದರ ಏರಿಕೆ ಮಾಡಿದೆ. ಪರಿಷ್ಕೃತ ದರಗಳಂತೆ,…

2 hours ago