ಮನರಂಜನೆ

‘GOAT’ ಚಿತ್ರಕ್ಕೆ ವಿಜಯ್‍ ಪಡೆದ ಸಂಭಾವನೆ ಎಷ್ಟು ಗೊತ್ತಾ?

ತಮಿಳಿನ ಸ್ಟಾರ್ ನಟ ‘ಇಳಯದಳಪತಿ’ ವಿಜಯ್‍ ನಟಿಸಿರುವ The Greatest of All Time (GOAT) ಚಿತ್ರವು ಇಂದು (ಸೆಪ್ಟೆಂಬರ್ 05) ಜಗತ್ತಿನಾದ್ಯಂತ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಈ ಚಿತ್ರಕ್ಕೆ ವಿಜಯ್‍ ಪಡೆದಿರಬಹುದಾದ ಸಂಭಾವನೆ ಕುರಿತು ಬಿಸಿಬಿಸಿ ಚರ್ಚೆಯಾಗುತ್ತಿದೆ.

ಸಾಮಾನ್ಯವಾಗಿ ಒಂದು ಚಿತ್ರದ ಬಜೆಟ್‍ ಬಗ್ಗೆ ಅಥವಾ ನಾಯಕರ ಸಂಭಾವನೆಯ ಕುರಿತು ನಿರ್ಮಾಪಕರು ಮಾತನಾಡುವುದಿಲ್ಲ. ಸಂಭಾವನೆಯ ವಿಷಯವನ್ನು ಗೌಪ್ಯವಾಗಿ ಇಡಲಾಗಿದೆ. ಆದರೆ, ಈ ಚಿತ್ರದ ನಿರ್ಮಾಪಕರೇ ವಿಜಯ್‍ ಸಂಭಾವನೆ ಕುರಿತು ಒಂದಿಷ್ಟು ವಿಷಯಗಳನ್ನು ಹೇಳಿಕೊಂಡಿದ್ದಾರೆ.

‘GOAT’ ನಿರ್ಮಾಪಕಿ ಅರ್ಚನಾ ಕಲಾಪತಿ ಅವರ ಪ್ರಕಾರ, ಚಿತ್ರಕ್ಕೆ ವಿಜಯ್‍ ಪಡೆದಿರುವ ಸಂಭಾವನೆ 200 ಕೋಟಿ ರೂ.ಗಳಂತೆ. ಚಿತ್ರದ ಬಜೆಟ್‍ 380ರಿಂದ 400 ಕೋಟಿಯವರೆಗೂ ಆಗಿದ್ದು, ಅದರಲ್ಲಿ ವಿಜಯ್‍ ಅವರ ಸಂಭಾವನೆಯೇ ಅರ್ಧದಷ್ಟು ಆಗಿದೆ ಎಂದು ಹೇಳಲಾಗಿದೆ. ಈ ಮೂಲಕ ಭಾರತೀಯ ನಟರ ಪೈಕಿ ಅತೀ ಹೆಚ್ಚು ಸಂಭಾವನೆ ಪಡೆಯುವ ಕಲಾವಿದರು ಯಾರು ಎಂಬ ಚರ್ಚೆಗಳು ಆಗಾಗ ಆಗುತ್ತಲೇ ಇರುತ್ತವೆ. ವಿಜಯ್‍ ಅವರ ಹೆಸರು ಸಹ ಈ ಪಟ್ಟಿಯಲ್ಲಿ ಕೆಲವು ವರ್ಷಗಳಿಂದ ಇದ್ದು, ಈಗ ಅವರು ಅಗ್ರಸ್ಥಾನಕ್ಕೇರಿದ್ದಾರೆ.

‘GOAT’ ಚಿತ್ರದಲ್ಲಿ ವಿಜಯ್‍ ಜೊತೆಗೆ ಪ್ರಶಾತ್‍, ಅಜ್ಮಲ್ ಅಮೀರ್, ಸ್ನೇಹಾ, ಲೈಲಾ, ಪ್ರಭುದೇವ, ಮೋಹನ್‍, ಜಯರಾಂ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಟ-ರಾಜಕಾರಣಿ ದಿವಂಗತ ವಿಜಯಕಾಂತ್‍ ಅವರನ್ನು ಈ ಚಿತ್ರದಲ್ಲಿ ಏಐ ತಂತ್ರಜ್ಞಾನದ ಮೂಲಕ ಸೃಷ್ಟಿಸಿದೆ ಎಂದು ಹೇಳಲಾಗುತ್ತಿದೆ.

ಈ ಚಿತ್ರವನ್ನು ವೆಂಕಟ್‍ ಪ್ರಭು ನಿರ್ದೇಶನ ಮಾಡಿದರೆ, ಯುವನ್‍ ಶಂಕರ್ ರಾಜ ಸಂಗೀತ ಸಂಯೋಜಿಸಿದ್ದಾರೆ. ಕಲಾಪತಿ ಎಸ್‍ ಅಘೋರಂ ಈ ಚಿತ್ರವನ್ನು ಎಜಿಎಸ್‍ ಎಂಟರ್‍ಟೈನ್‍ಮೆಂಟ್‍ ಸಂಸ್ಥೆಯಡಿ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವು ತಮಿಳು, ಹಿಂದಿ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆ ಆಗುತ್ತಿದೆ.

ಭೂಮಿಕಾ

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

9 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

11 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

12 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

12 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

12 hours ago