ಮನರಂಜನೆ

‘GOAT’ ಚಿತ್ರಕ್ಕೆ ವಿಜಯ್‍ ಪಡೆದ ಸಂಭಾವನೆ ಎಷ್ಟು ಗೊತ್ತಾ?

ತಮಿಳಿನ ಸ್ಟಾರ್ ನಟ ‘ಇಳಯದಳಪತಿ’ ವಿಜಯ್‍ ನಟಿಸಿರುವ The Greatest of All Time (GOAT) ಚಿತ್ರವು ಇಂದು (ಸೆಪ್ಟೆಂಬರ್ 05) ಜಗತ್ತಿನಾದ್ಯಂತ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಈ ಚಿತ್ರಕ್ಕೆ ವಿಜಯ್‍ ಪಡೆದಿರಬಹುದಾದ ಸಂಭಾವನೆ ಕುರಿತು ಬಿಸಿಬಿಸಿ ಚರ್ಚೆಯಾಗುತ್ತಿದೆ.

ಸಾಮಾನ್ಯವಾಗಿ ಒಂದು ಚಿತ್ರದ ಬಜೆಟ್‍ ಬಗ್ಗೆ ಅಥವಾ ನಾಯಕರ ಸಂಭಾವನೆಯ ಕುರಿತು ನಿರ್ಮಾಪಕರು ಮಾತನಾಡುವುದಿಲ್ಲ. ಸಂಭಾವನೆಯ ವಿಷಯವನ್ನು ಗೌಪ್ಯವಾಗಿ ಇಡಲಾಗಿದೆ. ಆದರೆ, ಈ ಚಿತ್ರದ ನಿರ್ಮಾಪಕರೇ ವಿಜಯ್‍ ಸಂಭಾವನೆ ಕುರಿತು ಒಂದಿಷ್ಟು ವಿಷಯಗಳನ್ನು ಹೇಳಿಕೊಂಡಿದ್ದಾರೆ.

‘GOAT’ ನಿರ್ಮಾಪಕಿ ಅರ್ಚನಾ ಕಲಾಪತಿ ಅವರ ಪ್ರಕಾರ, ಚಿತ್ರಕ್ಕೆ ವಿಜಯ್‍ ಪಡೆದಿರುವ ಸಂಭಾವನೆ 200 ಕೋಟಿ ರೂ.ಗಳಂತೆ. ಚಿತ್ರದ ಬಜೆಟ್‍ 380ರಿಂದ 400 ಕೋಟಿಯವರೆಗೂ ಆಗಿದ್ದು, ಅದರಲ್ಲಿ ವಿಜಯ್‍ ಅವರ ಸಂಭಾವನೆಯೇ ಅರ್ಧದಷ್ಟು ಆಗಿದೆ ಎಂದು ಹೇಳಲಾಗಿದೆ. ಈ ಮೂಲಕ ಭಾರತೀಯ ನಟರ ಪೈಕಿ ಅತೀ ಹೆಚ್ಚು ಸಂಭಾವನೆ ಪಡೆಯುವ ಕಲಾವಿದರು ಯಾರು ಎಂಬ ಚರ್ಚೆಗಳು ಆಗಾಗ ಆಗುತ್ತಲೇ ಇರುತ್ತವೆ. ವಿಜಯ್‍ ಅವರ ಹೆಸರು ಸಹ ಈ ಪಟ್ಟಿಯಲ್ಲಿ ಕೆಲವು ವರ್ಷಗಳಿಂದ ಇದ್ದು, ಈಗ ಅವರು ಅಗ್ರಸ್ಥಾನಕ್ಕೇರಿದ್ದಾರೆ.

‘GOAT’ ಚಿತ್ರದಲ್ಲಿ ವಿಜಯ್‍ ಜೊತೆಗೆ ಪ್ರಶಾತ್‍, ಅಜ್ಮಲ್ ಅಮೀರ್, ಸ್ನೇಹಾ, ಲೈಲಾ, ಪ್ರಭುದೇವ, ಮೋಹನ್‍, ಜಯರಾಂ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಟ-ರಾಜಕಾರಣಿ ದಿವಂಗತ ವಿಜಯಕಾಂತ್‍ ಅವರನ್ನು ಈ ಚಿತ್ರದಲ್ಲಿ ಏಐ ತಂತ್ರಜ್ಞಾನದ ಮೂಲಕ ಸೃಷ್ಟಿಸಿದೆ ಎಂದು ಹೇಳಲಾಗುತ್ತಿದೆ.

ಈ ಚಿತ್ರವನ್ನು ವೆಂಕಟ್‍ ಪ್ರಭು ನಿರ್ದೇಶನ ಮಾಡಿದರೆ, ಯುವನ್‍ ಶಂಕರ್ ರಾಜ ಸಂಗೀತ ಸಂಯೋಜಿಸಿದ್ದಾರೆ. ಕಲಾಪತಿ ಎಸ್‍ ಅಘೋರಂ ಈ ಚಿತ್ರವನ್ನು ಎಜಿಎಸ್‍ ಎಂಟರ್‍ಟೈನ್‍ಮೆಂಟ್‍ ಸಂಸ್ಥೆಯಡಿ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವು ತಮಿಳು, ಹಿಂದಿ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆ ಆಗುತ್ತಿದೆ.

ಭೂಮಿಕಾ

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

3 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

7 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

7 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

7 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

10 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

10 hours ago