ಮನರಂಜನೆ

‘GOAT’ ಚಿತ್ರಕ್ಕೆ ವಿಜಯ್‍ ಪಡೆದ ಸಂಭಾವನೆ ಎಷ್ಟು ಗೊತ್ತಾ?

ತಮಿಳಿನ ಸ್ಟಾರ್ ನಟ ‘ಇಳಯದಳಪತಿ’ ವಿಜಯ್‍ ನಟಿಸಿರುವ The Greatest of All Time (GOAT) ಚಿತ್ರವು ಇಂದು (ಸೆಪ್ಟೆಂಬರ್ 05) ಜಗತ್ತಿನಾದ್ಯಂತ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಈ ಚಿತ್ರಕ್ಕೆ ವಿಜಯ್‍ ಪಡೆದಿರಬಹುದಾದ ಸಂಭಾವನೆ ಕುರಿತು ಬಿಸಿಬಿಸಿ ಚರ್ಚೆಯಾಗುತ್ತಿದೆ.

ಸಾಮಾನ್ಯವಾಗಿ ಒಂದು ಚಿತ್ರದ ಬಜೆಟ್‍ ಬಗ್ಗೆ ಅಥವಾ ನಾಯಕರ ಸಂಭಾವನೆಯ ಕುರಿತು ನಿರ್ಮಾಪಕರು ಮಾತನಾಡುವುದಿಲ್ಲ. ಸಂಭಾವನೆಯ ವಿಷಯವನ್ನು ಗೌಪ್ಯವಾಗಿ ಇಡಲಾಗಿದೆ. ಆದರೆ, ಈ ಚಿತ್ರದ ನಿರ್ಮಾಪಕರೇ ವಿಜಯ್‍ ಸಂಭಾವನೆ ಕುರಿತು ಒಂದಿಷ್ಟು ವಿಷಯಗಳನ್ನು ಹೇಳಿಕೊಂಡಿದ್ದಾರೆ.

‘GOAT’ ನಿರ್ಮಾಪಕಿ ಅರ್ಚನಾ ಕಲಾಪತಿ ಅವರ ಪ್ರಕಾರ, ಚಿತ್ರಕ್ಕೆ ವಿಜಯ್‍ ಪಡೆದಿರುವ ಸಂಭಾವನೆ 200 ಕೋಟಿ ರೂ.ಗಳಂತೆ. ಚಿತ್ರದ ಬಜೆಟ್‍ 380ರಿಂದ 400 ಕೋಟಿಯವರೆಗೂ ಆಗಿದ್ದು, ಅದರಲ್ಲಿ ವಿಜಯ್‍ ಅವರ ಸಂಭಾವನೆಯೇ ಅರ್ಧದಷ್ಟು ಆಗಿದೆ ಎಂದು ಹೇಳಲಾಗಿದೆ. ಈ ಮೂಲಕ ಭಾರತೀಯ ನಟರ ಪೈಕಿ ಅತೀ ಹೆಚ್ಚು ಸಂಭಾವನೆ ಪಡೆಯುವ ಕಲಾವಿದರು ಯಾರು ಎಂಬ ಚರ್ಚೆಗಳು ಆಗಾಗ ಆಗುತ್ತಲೇ ಇರುತ್ತವೆ. ವಿಜಯ್‍ ಅವರ ಹೆಸರು ಸಹ ಈ ಪಟ್ಟಿಯಲ್ಲಿ ಕೆಲವು ವರ್ಷಗಳಿಂದ ಇದ್ದು, ಈಗ ಅವರು ಅಗ್ರಸ್ಥಾನಕ್ಕೇರಿದ್ದಾರೆ.

‘GOAT’ ಚಿತ್ರದಲ್ಲಿ ವಿಜಯ್‍ ಜೊತೆಗೆ ಪ್ರಶಾತ್‍, ಅಜ್ಮಲ್ ಅಮೀರ್, ಸ್ನೇಹಾ, ಲೈಲಾ, ಪ್ರಭುದೇವ, ಮೋಹನ್‍, ಜಯರಾಂ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಟ-ರಾಜಕಾರಣಿ ದಿವಂಗತ ವಿಜಯಕಾಂತ್‍ ಅವರನ್ನು ಈ ಚಿತ್ರದಲ್ಲಿ ಏಐ ತಂತ್ರಜ್ಞಾನದ ಮೂಲಕ ಸೃಷ್ಟಿಸಿದೆ ಎಂದು ಹೇಳಲಾಗುತ್ತಿದೆ.

ಈ ಚಿತ್ರವನ್ನು ವೆಂಕಟ್‍ ಪ್ರಭು ನಿರ್ದೇಶನ ಮಾಡಿದರೆ, ಯುವನ್‍ ಶಂಕರ್ ರಾಜ ಸಂಗೀತ ಸಂಯೋಜಿಸಿದ್ದಾರೆ. ಕಲಾಪತಿ ಎಸ್‍ ಅಘೋರಂ ಈ ಚಿತ್ರವನ್ನು ಎಜಿಎಸ್‍ ಎಂಟರ್‍ಟೈನ್‍ಮೆಂಟ್‍ ಸಂಸ್ಥೆಯಡಿ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವು ತಮಿಳು, ಹಿಂದಿ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆ ಆಗುತ್ತಿದೆ.

ಭೂಮಿಕಾ

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago