ಮನರಂಜನೆ

‘GOAT’ ಚಿತ್ರಕ್ಕೆ ವಿಜಯ್‍ ಪಡೆದ ಸಂಭಾವನೆ ಎಷ್ಟು ಗೊತ್ತಾ?

ತಮಿಳಿನ ಸ್ಟಾರ್ ನಟ ‘ಇಳಯದಳಪತಿ’ ವಿಜಯ್‍ ನಟಿಸಿರುವ The Greatest of All Time (GOAT) ಚಿತ್ರವು ಇಂದು (ಸೆಪ್ಟೆಂಬರ್ 05) ಜಗತ್ತಿನಾದ್ಯಂತ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಈ ಚಿತ್ರಕ್ಕೆ ವಿಜಯ್‍ ಪಡೆದಿರಬಹುದಾದ ಸಂಭಾವನೆ ಕುರಿತು ಬಿಸಿಬಿಸಿ ಚರ್ಚೆಯಾಗುತ್ತಿದೆ.

ಸಾಮಾನ್ಯವಾಗಿ ಒಂದು ಚಿತ್ರದ ಬಜೆಟ್‍ ಬಗ್ಗೆ ಅಥವಾ ನಾಯಕರ ಸಂಭಾವನೆಯ ಕುರಿತು ನಿರ್ಮಾಪಕರು ಮಾತನಾಡುವುದಿಲ್ಲ. ಸಂಭಾವನೆಯ ವಿಷಯವನ್ನು ಗೌಪ್ಯವಾಗಿ ಇಡಲಾಗಿದೆ. ಆದರೆ, ಈ ಚಿತ್ರದ ನಿರ್ಮಾಪಕರೇ ವಿಜಯ್‍ ಸಂಭಾವನೆ ಕುರಿತು ಒಂದಿಷ್ಟು ವಿಷಯಗಳನ್ನು ಹೇಳಿಕೊಂಡಿದ್ದಾರೆ.

‘GOAT’ ನಿರ್ಮಾಪಕಿ ಅರ್ಚನಾ ಕಲಾಪತಿ ಅವರ ಪ್ರಕಾರ, ಚಿತ್ರಕ್ಕೆ ವಿಜಯ್‍ ಪಡೆದಿರುವ ಸಂಭಾವನೆ 200 ಕೋಟಿ ರೂ.ಗಳಂತೆ. ಚಿತ್ರದ ಬಜೆಟ್‍ 380ರಿಂದ 400 ಕೋಟಿಯವರೆಗೂ ಆಗಿದ್ದು, ಅದರಲ್ಲಿ ವಿಜಯ್‍ ಅವರ ಸಂಭಾವನೆಯೇ ಅರ್ಧದಷ್ಟು ಆಗಿದೆ ಎಂದು ಹೇಳಲಾಗಿದೆ. ಈ ಮೂಲಕ ಭಾರತೀಯ ನಟರ ಪೈಕಿ ಅತೀ ಹೆಚ್ಚು ಸಂಭಾವನೆ ಪಡೆಯುವ ಕಲಾವಿದರು ಯಾರು ಎಂಬ ಚರ್ಚೆಗಳು ಆಗಾಗ ಆಗುತ್ತಲೇ ಇರುತ್ತವೆ. ವಿಜಯ್‍ ಅವರ ಹೆಸರು ಸಹ ಈ ಪಟ್ಟಿಯಲ್ಲಿ ಕೆಲವು ವರ್ಷಗಳಿಂದ ಇದ್ದು, ಈಗ ಅವರು ಅಗ್ರಸ್ಥಾನಕ್ಕೇರಿದ್ದಾರೆ.

‘GOAT’ ಚಿತ್ರದಲ್ಲಿ ವಿಜಯ್‍ ಜೊತೆಗೆ ಪ್ರಶಾತ್‍, ಅಜ್ಮಲ್ ಅಮೀರ್, ಸ್ನೇಹಾ, ಲೈಲಾ, ಪ್ರಭುದೇವ, ಮೋಹನ್‍, ಜಯರಾಂ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಟ-ರಾಜಕಾರಣಿ ದಿವಂಗತ ವಿಜಯಕಾಂತ್‍ ಅವರನ್ನು ಈ ಚಿತ್ರದಲ್ಲಿ ಏಐ ತಂತ್ರಜ್ಞಾನದ ಮೂಲಕ ಸೃಷ್ಟಿಸಿದೆ ಎಂದು ಹೇಳಲಾಗುತ್ತಿದೆ.

ಈ ಚಿತ್ರವನ್ನು ವೆಂಕಟ್‍ ಪ್ರಭು ನಿರ್ದೇಶನ ಮಾಡಿದರೆ, ಯುವನ್‍ ಶಂಕರ್ ರಾಜ ಸಂಗೀತ ಸಂಯೋಜಿಸಿದ್ದಾರೆ. ಕಲಾಪತಿ ಎಸ್‍ ಅಘೋರಂ ಈ ಚಿತ್ರವನ್ನು ಎಜಿಎಸ್‍ ಎಂಟರ್‍ಟೈನ್‍ಮೆಂಟ್‍ ಸಂಸ್ಥೆಯಡಿ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವು ತಮಿಳು, ಹಿಂದಿ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆ ಆಗುತ್ತಿದೆ.

ಭೂಮಿಕಾ

Recent Posts

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

27 mins ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

4 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

4 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

4 hours ago