ಮನರಂಜನೆ

ಇಂಡಿಯನ್‍ 2’ ಚಿತ್ರದ ಮೊದಲ ದಿನದ ಗಳಿಕೆ ಎಷ್ಟು ಗೊತ್ತಾ?

ಶಂಕರ್ ನಿರ್ದೇಶನದ ಮತ್ತು ಕಮಲ್‍ ಹಾಸನ್‍ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಇಂಡಿಯನ್‍ 2’ ಬಿಡುಗಡೆಯಾಗಿದೆ. ಚಿತ್ರಕ್ಕೆ ಅಷ್ಟೇನೂ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಷ್ಟೇನೂ ಒಳ್ಳೆಯ ವಿಮರ್ಶೆಗಳು ಸಿಕ್ಕಿಲ್ಲ. ಹೀಗಿರುವಾಗಲೇ, ಚಿತ್ರದ ಮೊದಲ ದಿನದ ಗಳಿಕೆ ಹೊರಬಿದ್ದಿದ್ದು, ಸಿನಿಪಂಡಿತರು ಅಕ್ಷರಶಃ ಶಾಕ್‍ ಆಗಿದ್ದಾರೆ.

‘ಇಂಡಿಯನ್‍ 2’ ಚಿತ್ರದ ಬಗ್ಗೆ ಅದೆಷ್ಟೇ ನಿರೀಕ್ಷೆಗಳಿದ್ದರೂ, ಚಿತ್ರ ಅಷ್ಟೇನೂ ದೊಡ್ಡ ಓಪನಿಂಗ್‍ ಪಡೆದಿಲ್ಲ. ಇನ್ನು, ಚಿತ್ರದ ಮೊದಲ ದಿನದ ಗಳಿಕೆ ಹೊರಬಿದ್ದಿದ್ದು, ಚಿತ್ರವು 25.6 ಕೋಟಿ ರೂ. ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಪೈಕಿ ತಮಿಳು ಅವತರಣಿಕೆಯಾದ ‘ಇಂಡಿಯನ್‍ 2’ ಚಿತ್ರವು 16.5 ಕೋಟಿ ರೂ ಸಂಗ್ರಹಿಸಿದರೆ, ತೆಲುಗು ಅವತರಣಿಕೆಯಾದ ‘ಭಾರತೀಯುಡು 2’ ಮತ್ತು ಹಿಂದಿಯ ‘ಹಿಂದುಸ್ಥಾನಿ 2’ ಚಿತ್ರವು 7.9 ಮತ್ತು 1.2 ಕೋಟಿ ರೂ. ಕ್ರಮವಾಗಿ ಸಂಗ್ರಹಿಸಿದೆ.

ಇತ್ತೀಚೆಗೆ ಬಿಡುಗಡೆಯಾದ ಪ್ರಭಾಸ್‍ ಅಭಿನಯದ ‘ಕಲ್ಕಿ 2898 ಎಡಿ’ ಚಿತ್ರವು ಮೊದಲ ದಿನ ಜಾಗತಿಕವಾಗಿ 191 ಕೋಟಿ ರೂ.ಗಳನ್ನು ಸಂಗ್ರಹಿಸಿತ್ತು. ಅದರ ಕಾಲು ಭಾಗದ ಗಳಿಕೆಯನ್ನೂ ‘ಇಂಡಿಯನ್‍ 2’ ಮಾಡಲಿಲ್ಲ ಎಂದು ಹೇಳಲಾಗುತ್ತಿದೆ.

28 ವರ್ಷಗಳ ಹಿಂದೆ ಬಿಡುಗಡೆಯಾದ ‘ಇಂಡಿಯನ್‍’ ಚಿತ್ರದ ಮುಂದುವರೆದ ಭಾಗ ಈ ‘ಇಂಡಿಯನ್‍ 2’. ಆ ಚಿತ್ರ ಆಗಿನ ಕಾಲಕ್ಕೆ ದೊಡ್ಡ ಹಿಟ್ ಆಗಿತ್ತು. ಹಾಗಾಗಿಯೇ, ಅದರ ಮುಂದುವರೆದ ಭಾಗದ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಕುತೂಹಲಗಳಿದ್ದವು. ಚಿತ್ರವು ಮೂರು ಭಾಷೆಗಳಲ್ಲಿ ಏಕಕಾಲಕ್ಕೆ ಜಗತ್ತಿನಾದ್ಯಂತ ಬಿಡುಗಡೆಯಾಗಿತ್ತು. ಆದರೆ, ಚಿತ್ರಕ್ಕೆ ಅಷ್ಟೇನೂ ಒಳ್ಳೆಯ ಪ್ರತಿಕ್ರಿಯೆಗಳು ಸಿಕ್ಕಿಲ್ಲ. ಚಿತ್ರವು ಅದ್ಧೂರಿಯಾಗಿ ಮೂಡಿಬಂದಿದೆಯಾದರೂ, ಕಥೆ ಅಂತ್ಯವಾಗಿಲ್ಲ. ಏಕೆಂದರೆ, ಚಿತ್ರ ಇನ್ನು ಮುಂದುವರೆಯಲಿದ್ದು, ‘ಇಂಡಿಯನ್‍ 2’ ಚಿತ್ರದ ಮುಂದುವರೆದ ಭಾಗವಾದ ‘ಇಂಡಿಯನ್‍ 3’ ಚಿತ್ರವು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿದೆ.

ಈಗಾಗಲೇ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಗರಿಗೆದರಿವೆ. ಏಕೆಂದರೆ, ‘ಇಂಡಿಯನ್‍ 3’ ಒಂದರ್ಥದಲ್ಲಿ ಪ್ರೀಕ್ವೆಲ್‍ ಸಹ ಹೌದು, ಸೀಕ್ವೆಲ್‍ ಸಹ ಹೌದು. ಚಿತ್ರವು, ‘ಇಂಡಿಯನ್‍ 1’ನ ಪ್ರೀಕ್ವೆಲ್‍ ಆದರೆ, ‘ಇಂಡಿಯನ್‍ 2’ನ ಸೀಕ್ವೆಲ್‍ ಆಗಿದೆ. ಚಿತ್ರದಲ್ಲಿ ಕಮಲ್‍ ಹಾಸನ್‍ ನಿರ್ವಹಿಸಿರುವ ವೀರಶೇಖರನ್‍ ಸೇನಾಪತಿ ಪಾತ್ರವು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸನ್ನಿವೇಶಗಳ ಜೊತೆಜೊತೆಗೆ, ಪ್ರಸಕ್ತ ಸಮಯದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸನ್ನಿವೇಶಗಳು ಸಹ ಇರಲಿವೆ.

ಭೂಮಿಕಾ

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago