ಮನರಂಜನೆ

ಇಂಡಿಯನ್‍ 2’ ಚಿತ್ರದ ಮೊದಲ ದಿನದ ಗಳಿಕೆ ಎಷ್ಟು ಗೊತ್ತಾ?

ಶಂಕರ್ ನಿರ್ದೇಶನದ ಮತ್ತು ಕಮಲ್‍ ಹಾಸನ್‍ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಇಂಡಿಯನ್‍ 2’ ಬಿಡುಗಡೆಯಾಗಿದೆ. ಚಿತ್ರಕ್ಕೆ ಅಷ್ಟೇನೂ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಷ್ಟೇನೂ ಒಳ್ಳೆಯ ವಿಮರ್ಶೆಗಳು ಸಿಕ್ಕಿಲ್ಲ. ಹೀಗಿರುವಾಗಲೇ, ಚಿತ್ರದ ಮೊದಲ ದಿನದ ಗಳಿಕೆ ಹೊರಬಿದ್ದಿದ್ದು, ಸಿನಿಪಂಡಿತರು ಅಕ್ಷರಶಃ ಶಾಕ್‍ ಆಗಿದ್ದಾರೆ.

‘ಇಂಡಿಯನ್‍ 2’ ಚಿತ್ರದ ಬಗ್ಗೆ ಅದೆಷ್ಟೇ ನಿರೀಕ್ಷೆಗಳಿದ್ದರೂ, ಚಿತ್ರ ಅಷ್ಟೇನೂ ದೊಡ್ಡ ಓಪನಿಂಗ್‍ ಪಡೆದಿಲ್ಲ. ಇನ್ನು, ಚಿತ್ರದ ಮೊದಲ ದಿನದ ಗಳಿಕೆ ಹೊರಬಿದ್ದಿದ್ದು, ಚಿತ್ರವು 25.6 ಕೋಟಿ ರೂ. ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಪೈಕಿ ತಮಿಳು ಅವತರಣಿಕೆಯಾದ ‘ಇಂಡಿಯನ್‍ 2’ ಚಿತ್ರವು 16.5 ಕೋಟಿ ರೂ ಸಂಗ್ರಹಿಸಿದರೆ, ತೆಲುಗು ಅವತರಣಿಕೆಯಾದ ‘ಭಾರತೀಯುಡು 2’ ಮತ್ತು ಹಿಂದಿಯ ‘ಹಿಂದುಸ್ಥಾನಿ 2’ ಚಿತ್ರವು 7.9 ಮತ್ತು 1.2 ಕೋಟಿ ರೂ. ಕ್ರಮವಾಗಿ ಸಂಗ್ರಹಿಸಿದೆ.

ಇತ್ತೀಚೆಗೆ ಬಿಡುಗಡೆಯಾದ ಪ್ರಭಾಸ್‍ ಅಭಿನಯದ ‘ಕಲ್ಕಿ 2898 ಎಡಿ’ ಚಿತ್ರವು ಮೊದಲ ದಿನ ಜಾಗತಿಕವಾಗಿ 191 ಕೋಟಿ ರೂ.ಗಳನ್ನು ಸಂಗ್ರಹಿಸಿತ್ತು. ಅದರ ಕಾಲು ಭಾಗದ ಗಳಿಕೆಯನ್ನೂ ‘ಇಂಡಿಯನ್‍ 2’ ಮಾಡಲಿಲ್ಲ ಎಂದು ಹೇಳಲಾಗುತ್ತಿದೆ.

28 ವರ್ಷಗಳ ಹಿಂದೆ ಬಿಡುಗಡೆಯಾದ ‘ಇಂಡಿಯನ್‍’ ಚಿತ್ರದ ಮುಂದುವರೆದ ಭಾಗ ಈ ‘ಇಂಡಿಯನ್‍ 2’. ಆ ಚಿತ್ರ ಆಗಿನ ಕಾಲಕ್ಕೆ ದೊಡ್ಡ ಹಿಟ್ ಆಗಿತ್ತು. ಹಾಗಾಗಿಯೇ, ಅದರ ಮುಂದುವರೆದ ಭಾಗದ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಕುತೂಹಲಗಳಿದ್ದವು. ಚಿತ್ರವು ಮೂರು ಭಾಷೆಗಳಲ್ಲಿ ಏಕಕಾಲಕ್ಕೆ ಜಗತ್ತಿನಾದ್ಯಂತ ಬಿಡುಗಡೆಯಾಗಿತ್ತು. ಆದರೆ, ಚಿತ್ರಕ್ಕೆ ಅಷ್ಟೇನೂ ಒಳ್ಳೆಯ ಪ್ರತಿಕ್ರಿಯೆಗಳು ಸಿಕ್ಕಿಲ್ಲ. ಚಿತ್ರವು ಅದ್ಧೂರಿಯಾಗಿ ಮೂಡಿಬಂದಿದೆಯಾದರೂ, ಕಥೆ ಅಂತ್ಯವಾಗಿಲ್ಲ. ಏಕೆಂದರೆ, ಚಿತ್ರ ಇನ್ನು ಮುಂದುವರೆಯಲಿದ್ದು, ‘ಇಂಡಿಯನ್‍ 2’ ಚಿತ್ರದ ಮುಂದುವರೆದ ಭಾಗವಾದ ‘ಇಂಡಿಯನ್‍ 3’ ಚಿತ್ರವು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿದೆ.

ಈಗಾಗಲೇ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಗರಿಗೆದರಿವೆ. ಏಕೆಂದರೆ, ‘ಇಂಡಿಯನ್‍ 3’ ಒಂದರ್ಥದಲ್ಲಿ ಪ್ರೀಕ್ವೆಲ್‍ ಸಹ ಹೌದು, ಸೀಕ್ವೆಲ್‍ ಸಹ ಹೌದು. ಚಿತ್ರವು, ‘ಇಂಡಿಯನ್‍ 1’ನ ಪ್ರೀಕ್ವೆಲ್‍ ಆದರೆ, ‘ಇಂಡಿಯನ್‍ 2’ನ ಸೀಕ್ವೆಲ್‍ ಆಗಿದೆ. ಚಿತ್ರದಲ್ಲಿ ಕಮಲ್‍ ಹಾಸನ್‍ ನಿರ್ವಹಿಸಿರುವ ವೀರಶೇಖರನ್‍ ಸೇನಾಪತಿ ಪಾತ್ರವು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸನ್ನಿವೇಶಗಳ ಜೊತೆಜೊತೆಗೆ, ಪ್ರಸಕ್ತ ಸಮಯದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸನ್ನಿವೇಶಗಳು ಸಹ ಇರಲಿವೆ.

ಭೂಮಿಕಾ

Recent Posts

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

17 mins ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

22 mins ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

24 mins ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

27 mins ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

37 mins ago

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…

54 mins ago