ಮನರಂಜನೆ

ಇಂಡಿಯನ್‍ 2’ ಚಿತ್ರದ ಮೊದಲ ದಿನದ ಗಳಿಕೆ ಎಷ್ಟು ಗೊತ್ತಾ?

ಶಂಕರ್ ನಿರ್ದೇಶನದ ಮತ್ತು ಕಮಲ್‍ ಹಾಸನ್‍ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಇಂಡಿಯನ್‍ 2’ ಬಿಡುಗಡೆಯಾಗಿದೆ. ಚಿತ್ರಕ್ಕೆ ಅಷ್ಟೇನೂ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಷ್ಟೇನೂ ಒಳ್ಳೆಯ ವಿಮರ್ಶೆಗಳು ಸಿಕ್ಕಿಲ್ಲ. ಹೀಗಿರುವಾಗಲೇ, ಚಿತ್ರದ ಮೊದಲ ದಿನದ ಗಳಿಕೆ ಹೊರಬಿದ್ದಿದ್ದು, ಸಿನಿಪಂಡಿತರು ಅಕ್ಷರಶಃ ಶಾಕ್‍ ಆಗಿದ್ದಾರೆ.

‘ಇಂಡಿಯನ್‍ 2’ ಚಿತ್ರದ ಬಗ್ಗೆ ಅದೆಷ್ಟೇ ನಿರೀಕ್ಷೆಗಳಿದ್ದರೂ, ಚಿತ್ರ ಅಷ್ಟೇನೂ ದೊಡ್ಡ ಓಪನಿಂಗ್‍ ಪಡೆದಿಲ್ಲ. ಇನ್ನು, ಚಿತ್ರದ ಮೊದಲ ದಿನದ ಗಳಿಕೆ ಹೊರಬಿದ್ದಿದ್ದು, ಚಿತ್ರವು 25.6 ಕೋಟಿ ರೂ. ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಪೈಕಿ ತಮಿಳು ಅವತರಣಿಕೆಯಾದ ‘ಇಂಡಿಯನ್‍ 2’ ಚಿತ್ರವು 16.5 ಕೋಟಿ ರೂ ಸಂಗ್ರಹಿಸಿದರೆ, ತೆಲುಗು ಅವತರಣಿಕೆಯಾದ ‘ಭಾರತೀಯುಡು 2’ ಮತ್ತು ಹಿಂದಿಯ ‘ಹಿಂದುಸ್ಥಾನಿ 2’ ಚಿತ್ರವು 7.9 ಮತ್ತು 1.2 ಕೋಟಿ ರೂ. ಕ್ರಮವಾಗಿ ಸಂಗ್ರಹಿಸಿದೆ.

ಇತ್ತೀಚೆಗೆ ಬಿಡುಗಡೆಯಾದ ಪ್ರಭಾಸ್‍ ಅಭಿನಯದ ‘ಕಲ್ಕಿ 2898 ಎಡಿ’ ಚಿತ್ರವು ಮೊದಲ ದಿನ ಜಾಗತಿಕವಾಗಿ 191 ಕೋಟಿ ರೂ.ಗಳನ್ನು ಸಂಗ್ರಹಿಸಿತ್ತು. ಅದರ ಕಾಲು ಭಾಗದ ಗಳಿಕೆಯನ್ನೂ ‘ಇಂಡಿಯನ್‍ 2’ ಮಾಡಲಿಲ್ಲ ಎಂದು ಹೇಳಲಾಗುತ್ತಿದೆ.

28 ವರ್ಷಗಳ ಹಿಂದೆ ಬಿಡುಗಡೆಯಾದ ‘ಇಂಡಿಯನ್‍’ ಚಿತ್ರದ ಮುಂದುವರೆದ ಭಾಗ ಈ ‘ಇಂಡಿಯನ್‍ 2’. ಆ ಚಿತ್ರ ಆಗಿನ ಕಾಲಕ್ಕೆ ದೊಡ್ಡ ಹಿಟ್ ಆಗಿತ್ತು. ಹಾಗಾಗಿಯೇ, ಅದರ ಮುಂದುವರೆದ ಭಾಗದ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಕುತೂಹಲಗಳಿದ್ದವು. ಚಿತ್ರವು ಮೂರು ಭಾಷೆಗಳಲ್ಲಿ ಏಕಕಾಲಕ್ಕೆ ಜಗತ್ತಿನಾದ್ಯಂತ ಬಿಡುಗಡೆಯಾಗಿತ್ತು. ಆದರೆ, ಚಿತ್ರಕ್ಕೆ ಅಷ್ಟೇನೂ ಒಳ್ಳೆಯ ಪ್ರತಿಕ್ರಿಯೆಗಳು ಸಿಕ್ಕಿಲ್ಲ. ಚಿತ್ರವು ಅದ್ಧೂರಿಯಾಗಿ ಮೂಡಿಬಂದಿದೆಯಾದರೂ, ಕಥೆ ಅಂತ್ಯವಾಗಿಲ್ಲ. ಏಕೆಂದರೆ, ಚಿತ್ರ ಇನ್ನು ಮುಂದುವರೆಯಲಿದ್ದು, ‘ಇಂಡಿಯನ್‍ 2’ ಚಿತ್ರದ ಮುಂದುವರೆದ ಭಾಗವಾದ ‘ಇಂಡಿಯನ್‍ 3’ ಚಿತ್ರವು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿದೆ.

ಈಗಾಗಲೇ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಗರಿಗೆದರಿವೆ. ಏಕೆಂದರೆ, ‘ಇಂಡಿಯನ್‍ 3’ ಒಂದರ್ಥದಲ್ಲಿ ಪ್ರೀಕ್ವೆಲ್‍ ಸಹ ಹೌದು, ಸೀಕ್ವೆಲ್‍ ಸಹ ಹೌದು. ಚಿತ್ರವು, ‘ಇಂಡಿಯನ್‍ 1’ನ ಪ್ರೀಕ್ವೆಲ್‍ ಆದರೆ, ‘ಇಂಡಿಯನ್‍ 2’ನ ಸೀಕ್ವೆಲ್‍ ಆಗಿದೆ. ಚಿತ್ರದಲ್ಲಿ ಕಮಲ್‍ ಹಾಸನ್‍ ನಿರ್ವಹಿಸಿರುವ ವೀರಶೇಖರನ್‍ ಸೇನಾಪತಿ ಪಾತ್ರವು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸನ್ನಿವೇಶಗಳ ಜೊತೆಜೊತೆಗೆ, ಪ್ರಸಕ್ತ ಸಮಯದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸನ್ನಿವೇಶಗಳು ಸಹ ಇರಲಿವೆ.

ಭೂಮಿಕಾ

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

2 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

2 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

2 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

2 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

2 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago