ಮನರಂಜನೆ

‘UI’ ಚಿತ್ರದ ಮೊದಲ ವಾರದ ಗಳಿಕೆ ಎಷ್ಟು ಗೊತ್ತಾ?

ಉಪೇಂದ್ರ ಅಭಿನಯದ ‘UI’ ಚಿತ್ರವು ಡಿ. 20ರಂದು ಬಿಡುಗಡೆಯಾಗಿ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ. ಕೆಲವರು ಚಿತ್ರದ ಬಗ್ಗೆ ಬಹಳ ಒಳ್ಳೆಯ ಮಾತುಗಳನ್ನಾಡುವುದರ ಜೊತೆಗೆ, ಇದು ಉಪೇಂದ್ರ ಅವರ ಅತ್ಯುತ್ತಮ ಚಿತ್ರ ಎಂದರೆ, ಇನ್ನೂ ಕೆಲವರು ಉಪೇಂದ್ರ ಸುಖಾಸುಮ್ಮನೆ ಗೊಂದಲಗೊಳಿಸಿದ್ದಾರೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ಚಿತ್ರವು ಒಂದು ವಾರ ಪೂರೈಸಿದೆ. ಈ ಒಂದು ವಾರದಲ್ಲಿ ಚಿತ್ರದ ಗಳಿಕೆ ಎಷ್ಟಾಗಿತ್ತು ಎಂದು ಹುಡುಕುತ್ತಾ ಹೋದರೆ, 26 ಕೋಟಿ ರೂ. ಎಂಬ ಉತ್ತರ ಸಿಗುತ್ತದೆ. ಬಾಕ್ಸ್ ಆಫೀಸ್‍ ಟ್ರಾಕರ್‍ ಸಚ್ನಿಕ್‍ ಡಾಟ್‍ಕಾಮ್‍ ಪ್ರಕಾರ, ಚಿತ್ರವು ಮೊದಲ ವಾರ 26 ಕೋಟಿ ಸಂಪಾದಿಸಿದೆಯಂತೆ. ಈ ಪೈಕಿ ಮೊದಲ ಮೂರು ದಿನಗಳ ಕಾಲ ಚಿತ್ರ 18 ಕೋಟಿ ರೂ.ಗಳವರೆಗೂ ಸಂಪಾದಿಸಿದೆ. ನಂತರದ ನಾಲ್‍ಕು ದಿನಗಳಲ್ಲಿ ಗಳಿಕೆಯ ಪ್ರಮಾಣ ಕಡಿಮೆಯಾಗಿದೆ.

ಇನ್ನು, ಚಿತ್ರವು ಪ್ಯಾನ್‍ ಇಂಡಿಯಾ ಚಿತ್ರವಾದರೂ, ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದರೂ, ಕರ್ನಾಟಕದಲ್ಲಿ ಮಾತ್ರ ಅತೀ ಹೆಚ್ಚು ಗಳಿಕೆಯಾಗಿದೆ. ಆಂಧ್ರ ಮತ್ತು ತೆಲಂಗಾಣದಲ್ಲೂ ಗಳಿಕೆ ಸುಮಾರಾಗಿದೆ. ಮಿಕ್ಕಂತೆ ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಗಳಿಕೆಯೇ ಇಲ್ಲ. ಮೊದಲ ವಾರದ ಗಳಿಕೆ ಕರ್ನಾಟಕದಿಂದ 22 ಕೋಟಿ ರೂ.ನಷ್ಟು ಬಂದರೆ, ಮಿಕ್ಕ ರಾಜ್ಯಗಳಿಂದ ನಾಲ್ಕು ಕೋಟಿಯಷ್ಟು ಗಳಿಕೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಗಳಿಕೆಯಲ್ಲಿ ನಿರ್ಮಾಪಕರ ಪಾಲು 14 ಕೋಟಿ ರೂ.ಗಳಷ್ಟಾಗುತ್ತದೆ. ಚಿತ್ರದ ಬಜೆಟ್‍ 30 ಕೋಟಿಗೂ ಮೀರಿದ್ದು, ಬಾಕ್ಸ್ ಆಫೀಸ್‍ನಿಂದ 14 ಕೋಟಿ ಬಂದರೆ, ಒಂದಿಷ್ಟು ಜೀ ಕನ್ನಡದಿಂದ ಬಂದಿದೆ. ನಿರ್ಮಾಪಕರು ಹಾಕಿದ ಬಂಡವಾಳವನ್ನು ಮರಳಿ ಪಡೆಯಲು ಇನ್ನಷ್ಟು ಸಮಯ ಕಾಯಬೇಕು.

‘UI’ ಚಿತ್ರವನ್ನು ಈ ಚಿತ್ರವನ್ನು ಲಹರಿ ಫಿಲಂಸ್ ಮತ್ತು ವೀನಸ್‍ ಎಂಟರ್‍ಟೈನರ್ಸ್‍ ಸಂಸ್ಥೆಗಳಡಿ ಜಿ. ಮನೋಹರನ್‍ ಮತ್ತು ಶ್ರೀಕಾಂತ್‍ ಕೆ.ಪಿ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಉಪೇಂದ್ರ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡಿ, ನಾಯಕರಾಗಿಯೂ ಕಾಣಿಸಿಕೊಂಡಿದ್ದಾರೆ. ಮಿಕ್ಕಂತೆ ರೀಷ್ಮಾ ನಾಣಯ್ಯ, ನಿಧಿ ಸುಬ್ಬಯ್ಯ, ರವಿಶಂಕರ್‍, ಅಚ್ಯುತ್‍ ಕುಮಾರ್‍, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

12 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

13 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

14 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

14 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

15 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

15 hours ago