ಮನರಂಜನೆ

‘UI’ ಚಿತ್ರದ ಮೊದಲ ವಾರದ ಗಳಿಕೆ ಎಷ್ಟು ಗೊತ್ತಾ?

ಉಪೇಂದ್ರ ಅಭಿನಯದ ‘UI’ ಚಿತ್ರವು ಡಿ. 20ರಂದು ಬಿಡುಗಡೆಯಾಗಿ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ. ಕೆಲವರು ಚಿತ್ರದ ಬಗ್ಗೆ ಬಹಳ ಒಳ್ಳೆಯ ಮಾತುಗಳನ್ನಾಡುವುದರ ಜೊತೆಗೆ, ಇದು ಉಪೇಂದ್ರ ಅವರ ಅತ್ಯುತ್ತಮ ಚಿತ್ರ ಎಂದರೆ, ಇನ್ನೂ ಕೆಲವರು ಉಪೇಂದ್ರ ಸುಖಾಸುಮ್ಮನೆ ಗೊಂದಲಗೊಳಿಸಿದ್ದಾರೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ಚಿತ್ರವು ಒಂದು ವಾರ ಪೂರೈಸಿದೆ. ಈ ಒಂದು ವಾರದಲ್ಲಿ ಚಿತ್ರದ ಗಳಿಕೆ ಎಷ್ಟಾಗಿತ್ತು ಎಂದು ಹುಡುಕುತ್ತಾ ಹೋದರೆ, 26 ಕೋಟಿ ರೂ. ಎಂಬ ಉತ್ತರ ಸಿಗುತ್ತದೆ. ಬಾಕ್ಸ್ ಆಫೀಸ್‍ ಟ್ರಾಕರ್‍ ಸಚ್ನಿಕ್‍ ಡಾಟ್‍ಕಾಮ್‍ ಪ್ರಕಾರ, ಚಿತ್ರವು ಮೊದಲ ವಾರ 26 ಕೋಟಿ ಸಂಪಾದಿಸಿದೆಯಂತೆ. ಈ ಪೈಕಿ ಮೊದಲ ಮೂರು ದಿನಗಳ ಕಾಲ ಚಿತ್ರ 18 ಕೋಟಿ ರೂ.ಗಳವರೆಗೂ ಸಂಪಾದಿಸಿದೆ. ನಂತರದ ನಾಲ್‍ಕು ದಿನಗಳಲ್ಲಿ ಗಳಿಕೆಯ ಪ್ರಮಾಣ ಕಡಿಮೆಯಾಗಿದೆ.

ಇನ್ನು, ಚಿತ್ರವು ಪ್ಯಾನ್‍ ಇಂಡಿಯಾ ಚಿತ್ರವಾದರೂ, ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದರೂ, ಕರ್ನಾಟಕದಲ್ಲಿ ಮಾತ್ರ ಅತೀ ಹೆಚ್ಚು ಗಳಿಕೆಯಾಗಿದೆ. ಆಂಧ್ರ ಮತ್ತು ತೆಲಂಗಾಣದಲ್ಲೂ ಗಳಿಕೆ ಸುಮಾರಾಗಿದೆ. ಮಿಕ್ಕಂತೆ ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಗಳಿಕೆಯೇ ಇಲ್ಲ. ಮೊದಲ ವಾರದ ಗಳಿಕೆ ಕರ್ನಾಟಕದಿಂದ 22 ಕೋಟಿ ರೂ.ನಷ್ಟು ಬಂದರೆ, ಮಿಕ್ಕ ರಾಜ್ಯಗಳಿಂದ ನಾಲ್ಕು ಕೋಟಿಯಷ್ಟು ಗಳಿಕೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಗಳಿಕೆಯಲ್ಲಿ ನಿರ್ಮಾಪಕರ ಪಾಲು 14 ಕೋಟಿ ರೂ.ಗಳಷ್ಟಾಗುತ್ತದೆ. ಚಿತ್ರದ ಬಜೆಟ್‍ 30 ಕೋಟಿಗೂ ಮೀರಿದ್ದು, ಬಾಕ್ಸ್ ಆಫೀಸ್‍ನಿಂದ 14 ಕೋಟಿ ಬಂದರೆ, ಒಂದಿಷ್ಟು ಜೀ ಕನ್ನಡದಿಂದ ಬಂದಿದೆ. ನಿರ್ಮಾಪಕರು ಹಾಕಿದ ಬಂಡವಾಳವನ್ನು ಮರಳಿ ಪಡೆಯಲು ಇನ್ನಷ್ಟು ಸಮಯ ಕಾಯಬೇಕು.

‘UI’ ಚಿತ್ರವನ್ನು ಈ ಚಿತ್ರವನ್ನು ಲಹರಿ ಫಿಲಂಸ್ ಮತ್ತು ವೀನಸ್‍ ಎಂಟರ್‍ಟೈನರ್ಸ್‍ ಸಂಸ್ಥೆಗಳಡಿ ಜಿ. ಮನೋಹರನ್‍ ಮತ್ತು ಶ್ರೀಕಾಂತ್‍ ಕೆ.ಪಿ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಉಪೇಂದ್ರ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡಿ, ನಾಯಕರಾಗಿಯೂ ಕಾಣಿಸಿಕೊಂಡಿದ್ದಾರೆ. ಮಿಕ್ಕಂತೆ ರೀಷ್ಮಾ ನಾಣಯ್ಯ, ನಿಧಿ ಸುಬ್ಬಯ್ಯ, ರವಿಶಂಕರ್‍, ಅಚ್ಯುತ್‍ ಕುಮಾರ್‍, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ಮಹಾಶಿವರಾತ್ರಿ ಜಾತ್ರೆಯ ಸಂಭ್ರಮ: ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನಗಳ ಪ್ರವೇಶಕ್ಕೆ ಬ್ರೇಕ್‌

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…

2 mins ago

ಭಕ್ತರ ಸುರಕ್ಷತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ: ಶಾಸಕ ಮಂಜುನಾಥ್ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…

24 mins ago

ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ

ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…

48 mins ago

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

6 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

6 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

6 hours ago