ಮನರಂಜನೆ

‘UI’ ಚಿತ್ರದ ಮೊದಲ ವಾರದ ಗಳಿಕೆ ಎಷ್ಟು ಗೊತ್ತಾ?

ಉಪೇಂದ್ರ ಅಭಿನಯದ ‘UI’ ಚಿತ್ರವು ಡಿ. 20ರಂದು ಬಿಡುಗಡೆಯಾಗಿ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ. ಕೆಲವರು ಚಿತ್ರದ ಬಗ್ಗೆ ಬಹಳ ಒಳ್ಳೆಯ ಮಾತುಗಳನ್ನಾಡುವುದರ ಜೊತೆಗೆ, ಇದು ಉಪೇಂದ್ರ ಅವರ ಅತ್ಯುತ್ತಮ ಚಿತ್ರ ಎಂದರೆ, ಇನ್ನೂ ಕೆಲವರು ಉಪೇಂದ್ರ ಸುಖಾಸುಮ್ಮನೆ ಗೊಂದಲಗೊಳಿಸಿದ್ದಾರೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ಚಿತ್ರವು ಒಂದು ವಾರ ಪೂರೈಸಿದೆ. ಈ ಒಂದು ವಾರದಲ್ಲಿ ಚಿತ್ರದ ಗಳಿಕೆ ಎಷ್ಟಾಗಿತ್ತು ಎಂದು ಹುಡುಕುತ್ತಾ ಹೋದರೆ, 26 ಕೋಟಿ ರೂ. ಎಂಬ ಉತ್ತರ ಸಿಗುತ್ತದೆ. ಬಾಕ್ಸ್ ಆಫೀಸ್‍ ಟ್ರಾಕರ್‍ ಸಚ್ನಿಕ್‍ ಡಾಟ್‍ಕಾಮ್‍ ಪ್ರಕಾರ, ಚಿತ್ರವು ಮೊದಲ ವಾರ 26 ಕೋಟಿ ಸಂಪಾದಿಸಿದೆಯಂತೆ. ಈ ಪೈಕಿ ಮೊದಲ ಮೂರು ದಿನಗಳ ಕಾಲ ಚಿತ್ರ 18 ಕೋಟಿ ರೂ.ಗಳವರೆಗೂ ಸಂಪಾದಿಸಿದೆ. ನಂತರದ ನಾಲ್‍ಕು ದಿನಗಳಲ್ಲಿ ಗಳಿಕೆಯ ಪ್ರಮಾಣ ಕಡಿಮೆಯಾಗಿದೆ.

ಇನ್ನು, ಚಿತ್ರವು ಪ್ಯಾನ್‍ ಇಂಡಿಯಾ ಚಿತ್ರವಾದರೂ, ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದರೂ, ಕರ್ನಾಟಕದಲ್ಲಿ ಮಾತ್ರ ಅತೀ ಹೆಚ್ಚು ಗಳಿಕೆಯಾಗಿದೆ. ಆಂಧ್ರ ಮತ್ತು ತೆಲಂಗಾಣದಲ್ಲೂ ಗಳಿಕೆ ಸುಮಾರಾಗಿದೆ. ಮಿಕ್ಕಂತೆ ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಗಳಿಕೆಯೇ ಇಲ್ಲ. ಮೊದಲ ವಾರದ ಗಳಿಕೆ ಕರ್ನಾಟಕದಿಂದ 22 ಕೋಟಿ ರೂ.ನಷ್ಟು ಬಂದರೆ, ಮಿಕ್ಕ ರಾಜ್ಯಗಳಿಂದ ನಾಲ್ಕು ಕೋಟಿಯಷ್ಟು ಗಳಿಕೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಗಳಿಕೆಯಲ್ಲಿ ನಿರ್ಮಾಪಕರ ಪಾಲು 14 ಕೋಟಿ ರೂ.ಗಳಷ್ಟಾಗುತ್ತದೆ. ಚಿತ್ರದ ಬಜೆಟ್‍ 30 ಕೋಟಿಗೂ ಮೀರಿದ್ದು, ಬಾಕ್ಸ್ ಆಫೀಸ್‍ನಿಂದ 14 ಕೋಟಿ ಬಂದರೆ, ಒಂದಿಷ್ಟು ಜೀ ಕನ್ನಡದಿಂದ ಬಂದಿದೆ. ನಿರ್ಮಾಪಕರು ಹಾಕಿದ ಬಂಡವಾಳವನ್ನು ಮರಳಿ ಪಡೆಯಲು ಇನ್ನಷ್ಟು ಸಮಯ ಕಾಯಬೇಕು.

‘UI’ ಚಿತ್ರವನ್ನು ಈ ಚಿತ್ರವನ್ನು ಲಹರಿ ಫಿಲಂಸ್ ಮತ್ತು ವೀನಸ್‍ ಎಂಟರ್‍ಟೈನರ್ಸ್‍ ಸಂಸ್ಥೆಗಳಡಿ ಜಿ. ಮನೋಹರನ್‍ ಮತ್ತು ಶ್ರೀಕಾಂತ್‍ ಕೆ.ಪಿ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಉಪೇಂದ್ರ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡಿ, ನಾಯಕರಾಗಿಯೂ ಕಾಣಿಸಿಕೊಂಡಿದ್ದಾರೆ. ಮಿಕ್ಕಂತೆ ರೀಷ್ಮಾ ನಾಣಯ್ಯ, ನಿಧಿ ಸುಬ್ಬಯ್ಯ, ರವಿಶಂಕರ್‍, ಅಚ್ಯುತ್‍ ಕುಮಾರ್‍, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

15 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

18 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

24 mins ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

28 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

36 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago