ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿಯುತ್ತಾ ಬಂದಿದ್ದು, ಚಿತ್ರದ ಬಿಡುಗಡೆಯಲ್ಲಿ ಒಂದು ಸಣ್ಣ ಬದಲಾವಣೆ ಆಗಿದೆ. ಚಿತ್ರವು ಡಿ.12ರಂದು ಬಿಡುಗಡೆ ಆಗಲಿದೆ ಎಂದು ಮೊದಲು ಹೇಳಲಾಗಿತ್ತು. ಆದರೆ, ಇದೀಗ ಚಿತ್ರವು ಒಂದು ದಿನ ಮೊದಲೇ ಬಿಡುಗಡೆ ಆಗಲಿದೆ.
ಇತ್ತೀಚೆಗೆ ‘ದಿ ಡೆವಿಲ್’ ಚಿತ್ರತಂಡದವರು ದರ್ಶನ್ ಅಭಿಮಾನಿಗಳ ಜೊತೆಗೆ ಒಂದು ಸಭೆ ನಡೆಸಿದರು. ಈ ಸಭೆಯಲ್ಲಿ ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕ ಪ್ರಕಾಶ್ ವೀರ್ ಜೊತೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಸಹೋದರ ದಿನಕರ್ ಮುಂತಾದವರು ಹಾಜರಿದ್ದರು. ಈ ಸಂದರ್ಭದಲ್ಲಿ ದರ್ಶನ್ ಅವರ ನೂರಾರು ಅಭಿಮಾನಿಗಳು ಭಾಗಿಯಾಗಿದ್ದರು.
ಇದನ್ನು ಓದಿ: ದರ್ಶನ್ ಅಭಿಮಾನಿಗಳಿಗೆ ಗುಡ್ನ್ಯೂಸ್: ಡಿಸೆಂಬರ್.11ರಂದೇ ಡೆವಿಲ್ ಬಿಡುಗಡೆ
ಈ ಸಭೆಯಲ್ಲಿ ಅಭಿಮಾನಿಗಳ ಅಭಿಪ್ರಾಯದ ಮೇರೆಗೆ ಚಿತ್ರವನ್ನು ಒಂದು ದಿನ ಮೊದಲು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತೀರ್ಮಾನಿಸಿದೆ. ಡಿ.12ರ ಬದಲು ಡಿ.11ರ ಗುರುವಾರದಂದು ಬಿಡುಗಡೆ ಆಗುತ್ತಿದೆ. ಈ ವಿಷಯವನ್ನು ಚಿತ್ರ ನಿರ್ಮಾಣ ಸಂಸ್ಥೆಯಾದ ಶ್ರೀ ಜೈಮಾತಾ ಕಂಬೈನ್ಸ್, ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತವಾಗಿ ಘೋಷಿಸಿದೆ.
ಶ್ರೀ ಜೈಮಾತಾ ಕಂಬೈನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದ್ದು, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ‘ದಿ ಡೆವಿಲ್’ ಚಿತ್ರದಲ್ಲಿ ದರ್ಶನ್ಗೆ ನಾಯಕಿಯಾಗಿ ರಚನಾ ರೈ ಅಭಿನಯಿಸಿದ್ದಾರೆ. ಮಿಕ್ಕಂತೆ ತುಳಸಿ, ಅಚ್ಯುತ್ ಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸ ಪ್ರಭು , ಶೋಭರಾಜ್ ಮುಂತಾದವರು ನಟಿಸಿದ್ದಾರೆ.
‘ದಿ ಡೆವಿಲ್’ ಚಿತ್ರಕ್ಕೆ ಸುಧಾಕರ್ ಎಸ್. ರಾಜ್ ಛಾಯಾಗ್ರಹಣ ಮತ್ತ ಅಜನೀಶ್ ಲೋಕನಾಥ್ ಸಂಗೀತವಿದೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…