ಮನರಂಜನೆ

ವಿಕ್ರಮ್‍ ರವಿಚಂದ್ರನ್‍ ಅಭಿನಯದ ‘ಮುಧೋಳ್‍’ ಬಿಡುಗಡೆ ಯಾವಾಗ ಗೊತ್ತಾ?

ಸುಮಾರು ಎರಡು ವರ್ಷಗಳ ಹಿಂದೆ ರವಿಚಂದ್ರನ್ ಅವರ ಎರಡನೇ ಮಗ ವಿಕ್ರಮ್‍ ರವಿಚಂದ್ರನ್‍ ಅಭಿನಯದ ‘ಮುಧೋಳ್‍’ ಎಂಬ ಚಿತ್ರ ಸೆಟ್ಟೇರಿತ್ತು. ಈಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದ, ಮುಂದಿನ ವರ್ಷದ ಆರಂಭದಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಹೌದು, ‘ಮುಧೋಳ್‍’ ಚಿತ್ರವು ಜನವರಿ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದರ ಹಿಂದಿನ ವಾರ ಜೈದ್‍ ಖಾನ್‍ ಅಭಿನಯದ ‘ಕಲ್ಟ್’ ಚಿತ್ರ ತೆರೆಗೆ ಬರಲಿದ್ದು, ಜೈದ್‍ ಮತ್ತು ವಿಕ್ರಮ್‍ ಅಭಿನಯದ ಎರಡನೆಯ ಚಿತ್ರಗಳು ಒಂದು ವಾರದ ಗ್ಯಾಪ್‍ನಲ್ಲಿ ಬಿಡುಗಡೆಯಾಗಲಿದೆ.

‘ಮುಧೋಳ್‍’ ಚಿತ್ರವನ್ನು ಇದಕ್ಕೂ ಮೊದಲು ರಕ್ಷಾ ಎನ್ನುವವರು ನಿರ್ಮಿಸುತ್ತಿದ್ದರು. ‘ಮುಧೋಳ್‍’ಗೂ ಮೊದಲು ಅವರು ವಿಕ್ರಮ್‍ ಸಹೋದರ ಮನೋರಂಜನ್‍ ರವಿಚಂದ್ರನ್‍ ಅಭಿನಯದ ‘ಮುಗಿಲ್ಪೇಟೆ’ ಚಿತ್ರವನ್ನು ನಿರ್ಮಿಸಿದ್ದರು. ಇದೀಗ ರಕ್ಷಾ ಜೊತೆಗೆ ಕೈಜೋಡಿಸಿರುವ ಅಮೃತಾ ಸಿನಿ ಕ್ರಾಫ್ಟ್ನ ವಿಜಯ್‍ ಟಾಟಾ ಚಿತ್ರವನ್ನು ಮುಂದುವರೆಸುತ್ತಿದೆ. ಚಿತ್ರದ ನಿರ್ಮಾಣದಲ್ಲಿ ಕೈಜೋಡಿಸುವುದರ ಜೊತೆಗೆ ವಿತರಣೆ, ಮಾರ್ಕೆಟಿಂಗ್ ಸೇರಿದಂತೆ ಬೇರೆ ವಿಭಾಗಗಳಲ್ಲೂ ತೊಡಗಿಸಿಕೊಂಡಿದ್ದಾರೆ.

ಇದಕ್ಕೂ ಮೊದಲು ಅಮೃತಾ ಸಿನಿ ಕ್ರಾಫ್ಟ್ ಸಂಸ್ಥೆಯ ವಿಜಯ್‍ ಟಾಟಾ, ವಿಕ್ರಮ್‍ ಅಭಿನಯದ ಹೊಸ ಚಿತ್ರವನ್ನು ನಿರ್ಮಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಅದರ ಬದಲು ಸಂಸ್ಥೆಯು ‘ಮುಧೋಳ್‍’ ಚಿತ್ರವನ್ನು ಮುಂದುವರೆಸುವುದರ ಜೊತೆಗೆ ಬಿಡುಗಡೆ ಮಾಡುತ್ತಿದೆ.

‘ಮುಧೋಳ್‍’ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವುದು ಕಾರ್ತಿಕ್‍ ರಾಜನ್‍. ಚಿತ್ರದಲ್ಲಿ ವಿಕ್ರಮ್‍ ಎದುರು ಸಂಜನಾ ಆನಂದ್‍ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಯುವರಾಜ್‍ ಚಂದ್ರನ್‍ ಸಂಗೀತ ಸಂಯೋಜಿಸುತ್ತಿದ್ದು, ಸಂದೀಪ್‍ ವಳ್ಳೂರಿ ಛಾಯಾಗ್ರಹಣ ಮಾಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜೆಡಿಎಸ್‌ನಲ್ಲೇ ಇದ್ದೀನಿ, ಪಕ್ಷದಿಂದಲೇ ಸ್ಪರ್ಧೆ : ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…

40 mins ago

ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ..!

ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…

53 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಅಲೆಮಾರಿ ಮಕ್ಕಳ ಶಿಕ್ಷಣ ಸಂಗಾತಿ ʻಲರ್ನಿಂಗ್ ಕಂಪ್ಯಾನಿಯನ್ಸ್’ ‌

ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…

2 hours ago

ಓದುಗರ ಪತ್ರ | ಸ್ಪೀಕರ್ ಸಭಾತ್ಯಾಗ ಮಾಡುವ ಸ್ಥಿತಿ ಬಾರದಿರಲಿ

ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…

2 hours ago

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

4 hours ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

4 hours ago