ಮನರಂಜನೆ

ವಿಕ್ರಮ್‍ ರವಿಚಂದ್ರನ್‍ ಅಭಿನಯದ ‘ಮುಧೋಳ್‍’ ಬಿಡುಗಡೆ ಯಾವಾಗ ಗೊತ್ತಾ?

ಸುಮಾರು ಎರಡು ವರ್ಷಗಳ ಹಿಂದೆ ರವಿಚಂದ್ರನ್ ಅವರ ಎರಡನೇ ಮಗ ವಿಕ್ರಮ್‍ ರವಿಚಂದ್ರನ್‍ ಅಭಿನಯದ ‘ಮುಧೋಳ್‍’ ಎಂಬ ಚಿತ್ರ ಸೆಟ್ಟೇರಿತ್ತು. ಈಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದ, ಮುಂದಿನ ವರ್ಷದ ಆರಂಭದಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಹೌದು, ‘ಮುಧೋಳ್‍’ ಚಿತ್ರವು ಜನವರಿ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದರ ಹಿಂದಿನ ವಾರ ಜೈದ್‍ ಖಾನ್‍ ಅಭಿನಯದ ‘ಕಲ್ಟ್’ ಚಿತ್ರ ತೆರೆಗೆ ಬರಲಿದ್ದು, ಜೈದ್‍ ಮತ್ತು ವಿಕ್ರಮ್‍ ಅಭಿನಯದ ಎರಡನೆಯ ಚಿತ್ರಗಳು ಒಂದು ವಾರದ ಗ್ಯಾಪ್‍ನಲ್ಲಿ ಬಿಡುಗಡೆಯಾಗಲಿದೆ.

‘ಮುಧೋಳ್‍’ ಚಿತ್ರವನ್ನು ಇದಕ್ಕೂ ಮೊದಲು ರಕ್ಷಾ ಎನ್ನುವವರು ನಿರ್ಮಿಸುತ್ತಿದ್ದರು. ‘ಮುಧೋಳ್‍’ಗೂ ಮೊದಲು ಅವರು ವಿಕ್ರಮ್‍ ಸಹೋದರ ಮನೋರಂಜನ್‍ ರವಿಚಂದ್ರನ್‍ ಅಭಿನಯದ ‘ಮುಗಿಲ್ಪೇಟೆ’ ಚಿತ್ರವನ್ನು ನಿರ್ಮಿಸಿದ್ದರು. ಇದೀಗ ರಕ್ಷಾ ಜೊತೆಗೆ ಕೈಜೋಡಿಸಿರುವ ಅಮೃತಾ ಸಿನಿ ಕ್ರಾಫ್ಟ್ನ ವಿಜಯ್‍ ಟಾಟಾ ಚಿತ್ರವನ್ನು ಮುಂದುವರೆಸುತ್ತಿದೆ. ಚಿತ್ರದ ನಿರ್ಮಾಣದಲ್ಲಿ ಕೈಜೋಡಿಸುವುದರ ಜೊತೆಗೆ ವಿತರಣೆ, ಮಾರ್ಕೆಟಿಂಗ್ ಸೇರಿದಂತೆ ಬೇರೆ ವಿಭಾಗಗಳಲ್ಲೂ ತೊಡಗಿಸಿಕೊಂಡಿದ್ದಾರೆ.

ಇದಕ್ಕೂ ಮೊದಲು ಅಮೃತಾ ಸಿನಿ ಕ್ರಾಫ್ಟ್ ಸಂಸ್ಥೆಯ ವಿಜಯ್‍ ಟಾಟಾ, ವಿಕ್ರಮ್‍ ಅಭಿನಯದ ಹೊಸ ಚಿತ್ರವನ್ನು ನಿರ್ಮಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಅದರ ಬದಲು ಸಂಸ್ಥೆಯು ‘ಮುಧೋಳ್‍’ ಚಿತ್ರವನ್ನು ಮುಂದುವರೆಸುವುದರ ಜೊತೆಗೆ ಬಿಡುಗಡೆ ಮಾಡುತ್ತಿದೆ.

‘ಮುಧೋಳ್‍’ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವುದು ಕಾರ್ತಿಕ್‍ ರಾಜನ್‍. ಚಿತ್ರದಲ್ಲಿ ವಿಕ್ರಮ್‍ ಎದುರು ಸಂಜನಾ ಆನಂದ್‍ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಯುವರಾಜ್‍ ಚಂದ್ರನ್‍ ಸಂಗೀತ ಸಂಯೋಜಿಸುತ್ತಿದ್ದು, ಸಂದೀಪ್‍ ವಳ್ಳೂರಿ ಛಾಯಾಗ್ರಹಣ ಮಾಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

3 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

4 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

4 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

4 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

4 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

5 hours ago