ಮನರಂಜನೆ

ವಿಕ್ರಮ್‍ ರವಿಚಂದ್ರನ್‍ ಅಭಿನಯದ ‘ಮುಧೋಳ್‍’ ಬಿಡುಗಡೆ ಯಾವಾಗ ಗೊತ್ತಾ?

ಸುಮಾರು ಎರಡು ವರ್ಷಗಳ ಹಿಂದೆ ರವಿಚಂದ್ರನ್ ಅವರ ಎರಡನೇ ಮಗ ವಿಕ್ರಮ್‍ ರವಿಚಂದ್ರನ್‍ ಅಭಿನಯದ ‘ಮುಧೋಳ್‍’ ಎಂಬ ಚಿತ್ರ ಸೆಟ್ಟೇರಿತ್ತು. ಈಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದ, ಮುಂದಿನ ವರ್ಷದ ಆರಂಭದಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಹೌದು, ‘ಮುಧೋಳ್‍’ ಚಿತ್ರವು ಜನವರಿ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದರ ಹಿಂದಿನ ವಾರ ಜೈದ್‍ ಖಾನ್‍ ಅಭಿನಯದ ‘ಕಲ್ಟ್’ ಚಿತ್ರ ತೆರೆಗೆ ಬರಲಿದ್ದು, ಜೈದ್‍ ಮತ್ತು ವಿಕ್ರಮ್‍ ಅಭಿನಯದ ಎರಡನೆಯ ಚಿತ್ರಗಳು ಒಂದು ವಾರದ ಗ್ಯಾಪ್‍ನಲ್ಲಿ ಬಿಡುಗಡೆಯಾಗಲಿದೆ.

‘ಮುಧೋಳ್‍’ ಚಿತ್ರವನ್ನು ಇದಕ್ಕೂ ಮೊದಲು ರಕ್ಷಾ ಎನ್ನುವವರು ನಿರ್ಮಿಸುತ್ತಿದ್ದರು. ‘ಮುಧೋಳ್‍’ಗೂ ಮೊದಲು ಅವರು ವಿಕ್ರಮ್‍ ಸಹೋದರ ಮನೋರಂಜನ್‍ ರವಿಚಂದ್ರನ್‍ ಅಭಿನಯದ ‘ಮುಗಿಲ್ಪೇಟೆ’ ಚಿತ್ರವನ್ನು ನಿರ್ಮಿಸಿದ್ದರು. ಇದೀಗ ರಕ್ಷಾ ಜೊತೆಗೆ ಕೈಜೋಡಿಸಿರುವ ಅಮೃತಾ ಸಿನಿ ಕ್ರಾಫ್ಟ್ನ ವಿಜಯ್‍ ಟಾಟಾ ಚಿತ್ರವನ್ನು ಮುಂದುವರೆಸುತ್ತಿದೆ. ಚಿತ್ರದ ನಿರ್ಮಾಣದಲ್ಲಿ ಕೈಜೋಡಿಸುವುದರ ಜೊತೆಗೆ ವಿತರಣೆ, ಮಾರ್ಕೆಟಿಂಗ್ ಸೇರಿದಂತೆ ಬೇರೆ ವಿಭಾಗಗಳಲ್ಲೂ ತೊಡಗಿಸಿಕೊಂಡಿದ್ದಾರೆ.

ಇದಕ್ಕೂ ಮೊದಲು ಅಮೃತಾ ಸಿನಿ ಕ್ರಾಫ್ಟ್ ಸಂಸ್ಥೆಯ ವಿಜಯ್‍ ಟಾಟಾ, ವಿಕ್ರಮ್‍ ಅಭಿನಯದ ಹೊಸ ಚಿತ್ರವನ್ನು ನಿರ್ಮಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಅದರ ಬದಲು ಸಂಸ್ಥೆಯು ‘ಮುಧೋಳ್‍’ ಚಿತ್ರವನ್ನು ಮುಂದುವರೆಸುವುದರ ಜೊತೆಗೆ ಬಿಡುಗಡೆ ಮಾಡುತ್ತಿದೆ.

‘ಮುಧೋಳ್‍’ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವುದು ಕಾರ್ತಿಕ್‍ ರಾಜನ್‍. ಚಿತ್ರದಲ್ಲಿ ವಿಕ್ರಮ್‍ ಎದುರು ಸಂಜನಾ ಆನಂದ್‍ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಯುವರಾಜ್‍ ಚಂದ್ರನ್‍ ಸಂಗೀತ ಸಂಯೋಜಿಸುತ್ತಿದ್ದು, ಸಂದೀಪ್‍ ವಳ್ಳೂರಿ ಛಾಯಾಗ್ರಹಣ ಮಾಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

2 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

2 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

2 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

2 hours ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

2 hours ago