ಸುಮಾರು ಎರಡು ವರ್ಷಗಳ ಹಿಂದೆ ರವಿಚಂದ್ರನ್ ಅವರ ಎರಡನೇ ಮಗ ವಿಕ್ರಮ್ ರವಿಚಂದ್ರನ್ ಅಭಿನಯದ ‘ಮುಧೋಳ್’ ಎಂಬ ಚಿತ್ರ ಸೆಟ್ಟೇರಿತ್ತು. ಈಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದ, ಮುಂದಿನ ವರ್ಷದ ಆರಂಭದಲ್ಲಿ ಚಿತ್ರ ಬಿಡುಗಡೆಯಾಗಲಿದೆ.
ಹೌದು, ‘ಮುಧೋಳ್’ ಚಿತ್ರವು ಜನವರಿ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದರ ಹಿಂದಿನ ವಾರ ಜೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರ ತೆರೆಗೆ ಬರಲಿದ್ದು, ಜೈದ್ ಮತ್ತು ವಿಕ್ರಮ್ ಅಭಿನಯದ ಎರಡನೆಯ ಚಿತ್ರಗಳು ಒಂದು ವಾರದ ಗ್ಯಾಪ್ನಲ್ಲಿ ಬಿಡುಗಡೆಯಾಗಲಿದೆ.
‘ಮುಧೋಳ್’ ಚಿತ್ರವನ್ನು ಇದಕ್ಕೂ ಮೊದಲು ರಕ್ಷಾ ಎನ್ನುವವರು ನಿರ್ಮಿಸುತ್ತಿದ್ದರು. ‘ಮುಧೋಳ್’ಗೂ ಮೊದಲು ಅವರು ವಿಕ್ರಮ್ ಸಹೋದರ ಮನೋರಂಜನ್ ರವಿಚಂದ್ರನ್ ಅಭಿನಯದ ‘ಮುಗಿಲ್ಪೇಟೆ’ ಚಿತ್ರವನ್ನು ನಿರ್ಮಿಸಿದ್ದರು. ಇದೀಗ ರಕ್ಷಾ ಜೊತೆಗೆ ಕೈಜೋಡಿಸಿರುವ ಅಮೃತಾ ಸಿನಿ ಕ್ರಾಫ್ಟ್ನ ವಿಜಯ್ ಟಾಟಾ ಚಿತ್ರವನ್ನು ಮುಂದುವರೆಸುತ್ತಿದೆ. ಚಿತ್ರದ ನಿರ್ಮಾಣದಲ್ಲಿ ಕೈಜೋಡಿಸುವುದರ ಜೊತೆಗೆ ವಿತರಣೆ, ಮಾರ್ಕೆಟಿಂಗ್ ಸೇರಿದಂತೆ ಬೇರೆ ವಿಭಾಗಗಳಲ್ಲೂ ತೊಡಗಿಸಿಕೊಂಡಿದ್ದಾರೆ.
ಇದಕ್ಕೂ ಮೊದಲು ಅಮೃತಾ ಸಿನಿ ಕ್ರಾಫ್ಟ್ ಸಂಸ್ಥೆಯ ವಿಜಯ್ ಟಾಟಾ, ವಿಕ್ರಮ್ ಅಭಿನಯದ ಹೊಸ ಚಿತ್ರವನ್ನು ನಿರ್ಮಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಅದರ ಬದಲು ಸಂಸ್ಥೆಯು ‘ಮುಧೋಳ್’ ಚಿತ್ರವನ್ನು ಮುಂದುವರೆಸುವುದರ ಜೊತೆಗೆ ಬಿಡುಗಡೆ ಮಾಡುತ್ತಿದೆ.
‘ಮುಧೋಳ್’ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವುದು ಕಾರ್ತಿಕ್ ರಾಜನ್. ಚಿತ್ರದಲ್ಲಿ ವಿಕ್ರಮ್ ಎದುರು ಸಂಜನಾ ಆನಂದ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಯುವರಾಜ್ ಚಂದ್ರನ್ ಸಂಗೀತ ಸಂಯೋಜಿಸುತ್ತಿದ್ದು, ಸಂದೀಪ್ ವಳ್ಳೂರಿ ಛಾಯಾಗ್ರಹಣ ಮಾಡುತ್ತಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…