ಮನರಂಜನೆ

ವಿಕ್ರಮ್‍ ರವಿಚಂದ್ರನ್‍ ಅಭಿನಯದ ‘ಮುಧೋಳ್‍’ ಬಿಡುಗಡೆ ಯಾವಾಗ ಗೊತ್ತಾ?

ಸುಮಾರು ಎರಡು ವರ್ಷಗಳ ಹಿಂದೆ ರವಿಚಂದ್ರನ್ ಅವರ ಎರಡನೇ ಮಗ ವಿಕ್ರಮ್‍ ರವಿಚಂದ್ರನ್‍ ಅಭಿನಯದ ‘ಮುಧೋಳ್‍’ ಎಂಬ ಚಿತ್ರ ಸೆಟ್ಟೇರಿತ್ತು. ಈಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದ, ಮುಂದಿನ ವರ್ಷದ ಆರಂಭದಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಹೌದು, ‘ಮುಧೋಳ್‍’ ಚಿತ್ರವು ಜನವರಿ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದರ ಹಿಂದಿನ ವಾರ ಜೈದ್‍ ಖಾನ್‍ ಅಭಿನಯದ ‘ಕಲ್ಟ್’ ಚಿತ್ರ ತೆರೆಗೆ ಬರಲಿದ್ದು, ಜೈದ್‍ ಮತ್ತು ವಿಕ್ರಮ್‍ ಅಭಿನಯದ ಎರಡನೆಯ ಚಿತ್ರಗಳು ಒಂದು ವಾರದ ಗ್ಯಾಪ್‍ನಲ್ಲಿ ಬಿಡುಗಡೆಯಾಗಲಿದೆ.

‘ಮುಧೋಳ್‍’ ಚಿತ್ರವನ್ನು ಇದಕ್ಕೂ ಮೊದಲು ರಕ್ಷಾ ಎನ್ನುವವರು ನಿರ್ಮಿಸುತ್ತಿದ್ದರು. ‘ಮುಧೋಳ್‍’ಗೂ ಮೊದಲು ಅವರು ವಿಕ್ರಮ್‍ ಸಹೋದರ ಮನೋರಂಜನ್‍ ರವಿಚಂದ್ರನ್‍ ಅಭಿನಯದ ‘ಮುಗಿಲ್ಪೇಟೆ’ ಚಿತ್ರವನ್ನು ನಿರ್ಮಿಸಿದ್ದರು. ಇದೀಗ ರಕ್ಷಾ ಜೊತೆಗೆ ಕೈಜೋಡಿಸಿರುವ ಅಮೃತಾ ಸಿನಿ ಕ್ರಾಫ್ಟ್ನ ವಿಜಯ್‍ ಟಾಟಾ ಚಿತ್ರವನ್ನು ಮುಂದುವರೆಸುತ್ತಿದೆ. ಚಿತ್ರದ ನಿರ್ಮಾಣದಲ್ಲಿ ಕೈಜೋಡಿಸುವುದರ ಜೊತೆಗೆ ವಿತರಣೆ, ಮಾರ್ಕೆಟಿಂಗ್ ಸೇರಿದಂತೆ ಬೇರೆ ವಿಭಾಗಗಳಲ್ಲೂ ತೊಡಗಿಸಿಕೊಂಡಿದ್ದಾರೆ.

ಇದಕ್ಕೂ ಮೊದಲು ಅಮೃತಾ ಸಿನಿ ಕ್ರಾಫ್ಟ್ ಸಂಸ್ಥೆಯ ವಿಜಯ್‍ ಟಾಟಾ, ವಿಕ್ರಮ್‍ ಅಭಿನಯದ ಹೊಸ ಚಿತ್ರವನ್ನು ನಿರ್ಮಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಅದರ ಬದಲು ಸಂಸ್ಥೆಯು ‘ಮುಧೋಳ್‍’ ಚಿತ್ರವನ್ನು ಮುಂದುವರೆಸುವುದರ ಜೊತೆಗೆ ಬಿಡುಗಡೆ ಮಾಡುತ್ತಿದೆ.

‘ಮುಧೋಳ್‍’ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವುದು ಕಾರ್ತಿಕ್‍ ರಾಜನ್‍. ಚಿತ್ರದಲ್ಲಿ ವಿಕ್ರಮ್‍ ಎದುರು ಸಂಜನಾ ಆನಂದ್‍ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಯುವರಾಜ್‍ ಚಂದ್ರನ್‍ ಸಂಗೀತ ಸಂಯೋಜಿಸುತ್ತಿದ್ದು, ಸಂದೀಪ್‍ ವಳ್ಳೂರಿ ಛಾಯಾಗ್ರಹಣ ಮಾಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

3 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

3 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

3 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

4 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

5 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

5 hours ago