ಮನರಂಜನೆ

ತನ್ನೂರಿನ ಶಾಲೆಗೆ ಹೈಟೆಕ್‌ ಸ್ಪರ್ಶ ನೀಡಲು ಮುಂದಾದ ಡಾಲಿ ಧನಂಜಯ್‌

ಹಾಸನ/ಅರಸೀಕೆರೆ: ವಿವಾಹದ ಹೊಸ್ತಿಲಲ್ಲಿರುವ ನಟ ಡಾಲಿ ಧನಂಜಯ್ ಸಮಾಜಮುಖಿ ಮಾದರಿಯ ತೃಪ್ತಿಕರ ಕಾಯಕ ಸೇವೆ ಮಾಡುತ್ತಿದ್ದು, ತನ್ನೂರಿನ ಶಾಲೆಗೆ ಹೈಟೆಕ್‌ ಸ್ಪರ್ಶ ನೀಡಲು ಮುಂದಾಗಿದ್ದಾರೆ.

ನಟ ಡಾಲಿ ಧನಂಜಯ್ ಹಾಗೂ ಡಾಕ್ಟರ್‌ ಧನ್ಯತಾ ಅವರ ವಿವಾಹ ಫೆಬ್ರವರಿಯಲ್ಲಿ ನಡೆಯಲಿದ್ದು, ಈಗಾಗಲೇ ಆಹ್ವಾನ ಪತ್ರಿಕೆ ನೀಡಿ ಮದುವೆಗೆ ಕರೆಯತೊಡಗಿದ್ದಾರೆ. ಆದರೆ ಈ ಮಧ್ಯೆ ತಮ್ಮ ಹುಟ್ಟೂರು ಅರಸೀಕೆರೆ ತಾಲೂಕಿನ ಕಾಳೇನಹಳ್ಳಿಯ 1 ರಿಂದ 7ನೇ ತರಗತಿವರೆಗಿನ ಸರ್ಕಾರಿ ಶಾಲೆ ಶಿಥಿಲಗೊಂಡಿದ್ದನ್ನು ಗಮನಿಸಿ, ಈ ಶಾಲೆಯ ಅಭಿವೃದ್ಧಿಗಾಗಿ ಆರ್ಥಿಕ ನೆರವು ನೀಡಿದ್ದಾರೆ. ಅಲ್ಲದೇ ತವರೂರಿನ ಮೇಲಿನ ಅಭಿಮಾನದಿಂದ ಶಾಲೆಗೆ ಕಾಯಕ ನೀಡಲು ಮುಂದಾಗಿದ್ದಾರೆ.

ಈ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿವರೆಗೆ 80 ಮಕ್ಕಳು ಕಲಿಯುತ್ತಿದ್ದಾರೆ. ಶಾಲೆಯ ಕೊಠಡಿಗಳಿಗೆ ಟೈಲ್ಸ್, ಗೋಡೆಗಳಿಗೆ ಸುಣ್ಣಬಣ್ಣ, ಚುರಕಿ ಗಾರೆ ರಿಪೇರಿ, ಗೇಟ್ ದುರಸ್ತಿ, ಶಿಕ್ಷಕರ ಕೊಠಡಿ, ಶೌಚಾಲಯ ದುರಸ್ತಿ, ಅಡುಗೆ ಮನೆ ಸಹಿತ ಶಾಲೆಗೆ ಹೈಟೆಕ್ ಸ್ಪರ್ಶ ನೀಡಲು ಧನಂಜಯ್ ದೇಣಿಗೆ ನೀಡಿದ್ದಾರೆ.

ಇನ್ನು ತಮ್ಮ ಮದುವೆಯನ್ನು ಅರ್ಥಪೂರ್ಣಗೊಳಿಸಲು ಇಡೀ ಶಾಲೆಗೆ ಕಾಯಕಲ್ಪ ನೀಡುವ ಮೂಲಕ ಸರ್ಕಾರಿ ಶಾಲೆ ಉಳಿಸಲು ಮುಂದಾಗಿದ್ದಾರೆ. ತನ್ನೂರಿನ ಶಾಲೆಯ ನೆಲಕ್ಕೆ ಟೈಲ್ಸ್, ಬಣ್ಣ ಮಾಸಿದ ಶಾಲೆಯ ಎಲ್ಲ ಗೋಡೆಗಳಿಗೆ ಸಂಪೂರ್ಣ, ಬಿರುಕು ಬಿಟ್ಟಿದ್ದ ಗೋಡೆ, ಅಂತಸ್ತಿಗೆ ಚುರಕಿ, ಗೇಟ್ ದುರಸ್ತಿ, ಶಿಕ್ಷಕರ ಕೊಠಡಿಗೆ ಹೊಸ ರೂಪ, ಶೌಚಾಲಯ ಸುಸ್ಥಿತಿ ಹಾಗೂ ಅಚ್ಚುಕಟ್ಟು ಅಡುಗೆ ಮನೆಗೆ ಹೈಟೆಕ್‌ ಸ್ಪರ್ಶ ನೀಡುತ್ತಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

30 mins ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

39 mins ago

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

1 hour ago

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

1 hour ago

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…

2 hours ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

2 hours ago