ಮನರಂಜನೆ

ತನ್ನೂರಿನ ಶಾಲೆಗೆ ಹೈಟೆಕ್‌ ಸ್ಪರ್ಶ ನೀಡಲು ಮುಂದಾದ ಡಾಲಿ ಧನಂಜಯ್‌

ಹಾಸನ/ಅರಸೀಕೆರೆ: ವಿವಾಹದ ಹೊಸ್ತಿಲಲ್ಲಿರುವ ನಟ ಡಾಲಿ ಧನಂಜಯ್ ಸಮಾಜಮುಖಿ ಮಾದರಿಯ ತೃಪ್ತಿಕರ ಕಾಯಕ ಸೇವೆ ಮಾಡುತ್ತಿದ್ದು, ತನ್ನೂರಿನ ಶಾಲೆಗೆ ಹೈಟೆಕ್‌ ಸ್ಪರ್ಶ ನೀಡಲು ಮುಂದಾಗಿದ್ದಾರೆ.

ನಟ ಡಾಲಿ ಧನಂಜಯ್ ಹಾಗೂ ಡಾಕ್ಟರ್‌ ಧನ್ಯತಾ ಅವರ ವಿವಾಹ ಫೆಬ್ರವರಿಯಲ್ಲಿ ನಡೆಯಲಿದ್ದು, ಈಗಾಗಲೇ ಆಹ್ವಾನ ಪತ್ರಿಕೆ ನೀಡಿ ಮದುವೆಗೆ ಕರೆಯತೊಡಗಿದ್ದಾರೆ. ಆದರೆ ಈ ಮಧ್ಯೆ ತಮ್ಮ ಹುಟ್ಟೂರು ಅರಸೀಕೆರೆ ತಾಲೂಕಿನ ಕಾಳೇನಹಳ್ಳಿಯ 1 ರಿಂದ 7ನೇ ತರಗತಿವರೆಗಿನ ಸರ್ಕಾರಿ ಶಾಲೆ ಶಿಥಿಲಗೊಂಡಿದ್ದನ್ನು ಗಮನಿಸಿ, ಈ ಶಾಲೆಯ ಅಭಿವೃದ್ಧಿಗಾಗಿ ಆರ್ಥಿಕ ನೆರವು ನೀಡಿದ್ದಾರೆ. ಅಲ್ಲದೇ ತವರೂರಿನ ಮೇಲಿನ ಅಭಿಮಾನದಿಂದ ಶಾಲೆಗೆ ಕಾಯಕ ನೀಡಲು ಮುಂದಾಗಿದ್ದಾರೆ.

ಈ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿವರೆಗೆ 80 ಮಕ್ಕಳು ಕಲಿಯುತ್ತಿದ್ದಾರೆ. ಶಾಲೆಯ ಕೊಠಡಿಗಳಿಗೆ ಟೈಲ್ಸ್, ಗೋಡೆಗಳಿಗೆ ಸುಣ್ಣಬಣ್ಣ, ಚುರಕಿ ಗಾರೆ ರಿಪೇರಿ, ಗೇಟ್ ದುರಸ್ತಿ, ಶಿಕ್ಷಕರ ಕೊಠಡಿ, ಶೌಚಾಲಯ ದುರಸ್ತಿ, ಅಡುಗೆ ಮನೆ ಸಹಿತ ಶಾಲೆಗೆ ಹೈಟೆಕ್ ಸ್ಪರ್ಶ ನೀಡಲು ಧನಂಜಯ್ ದೇಣಿಗೆ ನೀಡಿದ್ದಾರೆ.

ಇನ್ನು ತಮ್ಮ ಮದುವೆಯನ್ನು ಅರ್ಥಪೂರ್ಣಗೊಳಿಸಲು ಇಡೀ ಶಾಲೆಗೆ ಕಾಯಕಲ್ಪ ನೀಡುವ ಮೂಲಕ ಸರ್ಕಾರಿ ಶಾಲೆ ಉಳಿಸಲು ಮುಂದಾಗಿದ್ದಾರೆ. ತನ್ನೂರಿನ ಶಾಲೆಯ ನೆಲಕ್ಕೆ ಟೈಲ್ಸ್, ಬಣ್ಣ ಮಾಸಿದ ಶಾಲೆಯ ಎಲ್ಲ ಗೋಡೆಗಳಿಗೆ ಸಂಪೂರ್ಣ, ಬಿರುಕು ಬಿಟ್ಟಿದ್ದ ಗೋಡೆ, ಅಂತಸ್ತಿಗೆ ಚುರಕಿ, ಗೇಟ್ ದುರಸ್ತಿ, ಶಿಕ್ಷಕರ ಕೊಠಡಿಗೆ ಹೊಸ ರೂಪ, ಶೌಚಾಲಯ ಸುಸ್ಥಿತಿ ಹಾಗೂ ಅಚ್ಚುಕಟ್ಟು ಅಡುಗೆ ಮನೆಗೆ ಹೈಟೆಕ್‌ ಸ್ಪರ್ಶ ನೀಡುತ್ತಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

2 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

4 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

9 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

9 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

10 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

11 hours ago