ಮನರಂಜನೆ

ಡಾಲಿ ಈಗ ‘ಜಿಂಗೋ’; ಹುಟ್ಟುಹಬ್ಬಕ್ಕೆ ಹೊಸ ಚಿತ್ರದ ಘೋಷಣೆ

ಧನಂಜಯ್‍ ಸದ್ಯ ‘ಉತ್ತರಕಾಂಡ’ ಮತ್ತು ‘ಅಣ್ಣ ಫ್ರಮ್‍ ಮೆಕ್ಸಿಕೋ’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದಲ್ಲದೆ ಧನಂಜಯ್‍ ಅಭಿನಯದ ‘ಜೀಬ್ರಾ’ ಮತ್ತು ‘ಪುಷ್ಪ 2’ ಚಿತ್ರಗಳು ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿವೆ. ಇದರ ಜೊತೆಗೆ ‘ನಾಡಪ್ರಭು ಕೆಂಪೇಗೌಡ’ ಮತ್ತು ‘ಹಲಗಲಿ’ ಚಿತ್ರಗಳಲ್ಲಿ ನಟಿಸುತ್ತಿರುವ ಸುದ್ದಿ ಇದೆ. ಇವೆಲ್ಲದರ ಜೊತೆಗೆ ಅವರು ಇನ್ನೊಂದು ಚಿತ್ರವನ್ನು ಸಹ ಒಪ್ಪಿಕೊಂಡಿದ್ದಾರೆ.

ಧನಂಜಯ್‍ ಹೊಸ ಚಿತ್ರದ ಹೆಸರು ‘ಜಿಂಗೋ’. ಈ ಚಿತ್ರವನ್ನು ಶಶಾಂಕ್‍ ಸೋಗಾಲ್‍ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ, ಪೂರ್ಣಚಂದ್ರ ತೇಜಸ್ವಿ ವಿರಚಿತ ‘ಡೇರ್ ಡೆವಿಲ್‍ ಮುಸ್ತಾಫ’ ಚಿತ್ರವನ್ನು ನಿರ್ದೇಶಿಸಿದ್ದ ಶಶಾಂಕ್‍ ಅವರಿಗೆ ಇದು ಎರಡನೆಯ ಚಿತ್ರ. ‘ಡೇರ್ ಡೆವಿಲ್‍ ಮುಸ್ತಾಫ’ ಚಿತ್ರಕ್ಕೆ ಧನಂಜಯ್‍ ಬೆನ್ನೆಲುಬಾಗಿ ನಿಂತಿದ್ದರು. ಆ ಚಿತ್ರದ ಬಿಡುಗಡೆಗೆ ದೊಡ್ಡ ರೀತಿಯಲ್ಲಿ ಸಹಾಯ ಮಾಡಿದ್ದರು. ಈಗ ಅದೇ ಶಶಾಂಕ್‍ ನಿರ್ದೇಶನದ ಚಿತ್ರದಲ್ಲಿ ಧನಂಜಯ್‍ ನಟಿಸುತ್ತಿದ್ದಾರೆ.

ಈ ಚಿತ್ರದಲ್ಲಿ ಧನಂಜಯ್‍ ಆ್ಯಂಟಿ-ಹೀರೋ ಆಗಿ ನಟಿಸುತ್ತಿದ್ದಾರೆ. ಬಹಳ ದಿನಗಳ ನಂತರ ಅವರು ನೆಗೆಟಿವ್‍ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೊಂದು ಮರ್ಡರ್‍ ಮಿಸ್ಟ್ರಿ ಚಿತ್ರ ಎಂದು ಶಶಾಂಕ್‍ ಹೇಳಿದ್ದು, ಒಂದು ಕಾಲ್ಪನಿಕ ಹಳ್ಳಿಯ ಮುಖಂಡ ಜಿಂಗೋ ಆಗಿ ಧನಂಜಯ್‍ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ.

ಈ ಹಿಂದೆ ಕಲರ್ಸ ಕನ್ನಡ ವಾಹಿನಿಯಲ್ಲಿ ಬರಹಗಾರರಾಗಿ ಕೆಲಸ ಮಾಡುತ್ತಿದ್ದ ಹ್ಯಾರಿಸ್ ಅಹ್ಮದ್‍ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದಿದ್ದಾರೆ. ಒಂದು ಹಳ್ಳಿಯಲ್ಲಿ ಕೊಲೆಯಾದಾಗ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗುತ್ತಿದೆ. ಚಿತ್ರದ ಬರವಣಿಗೆ ಕೆಲಸ ಮುಕ್ತಾಯದ ಹಂತಕ್ಕೆ ಬಂದಿದ್ದು, ತಾರಾಗಣದ ಆಯ್ಕೆ ನಡೆಯುತ್ತಿದೆ.

‘ಜಿಂಗೋ’ ಚಿತ್ರವನ್ನು ಧನಂಜಯ್‍ ಮತ್ತು ನರೇಂದ್ರ ರೆಡ್ಡಿ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ರಾಹುಲ್‍ ರಾಯ್‍ ಛಾಯಾಗ್ರಹಣ ಮತ್ತು ನವನೀತ್‍ ಶ್ಯಾಮ್‍ ಸಂಗೀತವಿದೆ.

ಅಂದಹಾಗೆ, ಧನಂಜಯ್‍ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಡಾಲಿ ಪಿಕ್ಚರ್ಸ್ ಯೂಟ್ಯೂಬ್‍ ಚಾನಲ್‍ನಲ್ಲಿ ಚಿತ್ರದ ಮೊದಲ ಟೀಸರ್‍ ಬಿಡುಗಡೆ ಮಾಡಲಾಗಿದೆ.

ಭೂಮಿಕಾ

Recent Posts

ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…

7 mins ago

ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದಿಂದ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್‌ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…

23 mins ago

ನಾನು ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಸಿಎಂ…

2 hours ago

ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: ಡಿ.ಕೆ.ಸುರೇಶ್‌ ಪುನರುಚ್ಛಾರ

ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದರು. ಈ…

2 hours ago

ಸಚಿವ ಎಂ.ಬಿ.ಪಾಟೀಲ್‌ ನಡೆ ಸ್ವಾಗತಿಸಿದ ಸಚಿವ ಚಲುವರಾಯಸ್ವಾಮಿ: ಕಾರಣ ಇಷ್ಟೇ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…

2 hours ago

ಮಹಾಶಿವರಾತ್ರಿ ಜಾತ್ರೆಯ ಸಂಭ್ರಮ: ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನಗಳ ಪ್ರವೇಶಕ್ಕೆ ಬ್ರೇಕ್‌

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…

3 hours ago