ಮನರಂಜನೆ

ಡಾಲಿ ಈಗ ‘ಜಿಂಗೋ’; ಹುಟ್ಟುಹಬ್ಬಕ್ಕೆ ಹೊಸ ಚಿತ್ರದ ಘೋಷಣೆ

ಧನಂಜಯ್‍ ಸದ್ಯ ‘ಉತ್ತರಕಾಂಡ’ ಮತ್ತು ‘ಅಣ್ಣ ಫ್ರಮ್‍ ಮೆಕ್ಸಿಕೋ’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದಲ್ಲದೆ ಧನಂಜಯ್‍ ಅಭಿನಯದ ‘ಜೀಬ್ರಾ’ ಮತ್ತು ‘ಪುಷ್ಪ 2’ ಚಿತ್ರಗಳು ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿವೆ. ಇದರ ಜೊತೆಗೆ ‘ನಾಡಪ್ರಭು ಕೆಂಪೇಗೌಡ’ ಮತ್ತು ‘ಹಲಗಲಿ’ ಚಿತ್ರಗಳಲ್ಲಿ ನಟಿಸುತ್ತಿರುವ ಸುದ್ದಿ ಇದೆ. ಇವೆಲ್ಲದರ ಜೊತೆಗೆ ಅವರು ಇನ್ನೊಂದು ಚಿತ್ರವನ್ನು ಸಹ ಒಪ್ಪಿಕೊಂಡಿದ್ದಾರೆ.

ಧನಂಜಯ್‍ ಹೊಸ ಚಿತ್ರದ ಹೆಸರು ‘ಜಿಂಗೋ’. ಈ ಚಿತ್ರವನ್ನು ಶಶಾಂಕ್‍ ಸೋಗಾಲ್‍ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ, ಪೂರ್ಣಚಂದ್ರ ತೇಜಸ್ವಿ ವಿರಚಿತ ‘ಡೇರ್ ಡೆವಿಲ್‍ ಮುಸ್ತಾಫ’ ಚಿತ್ರವನ್ನು ನಿರ್ದೇಶಿಸಿದ್ದ ಶಶಾಂಕ್‍ ಅವರಿಗೆ ಇದು ಎರಡನೆಯ ಚಿತ್ರ. ‘ಡೇರ್ ಡೆವಿಲ್‍ ಮುಸ್ತಾಫ’ ಚಿತ್ರಕ್ಕೆ ಧನಂಜಯ್‍ ಬೆನ್ನೆಲುಬಾಗಿ ನಿಂತಿದ್ದರು. ಆ ಚಿತ್ರದ ಬಿಡುಗಡೆಗೆ ದೊಡ್ಡ ರೀತಿಯಲ್ಲಿ ಸಹಾಯ ಮಾಡಿದ್ದರು. ಈಗ ಅದೇ ಶಶಾಂಕ್‍ ನಿರ್ದೇಶನದ ಚಿತ್ರದಲ್ಲಿ ಧನಂಜಯ್‍ ನಟಿಸುತ್ತಿದ್ದಾರೆ.

ಈ ಚಿತ್ರದಲ್ಲಿ ಧನಂಜಯ್‍ ಆ್ಯಂಟಿ-ಹೀರೋ ಆಗಿ ನಟಿಸುತ್ತಿದ್ದಾರೆ. ಬಹಳ ದಿನಗಳ ನಂತರ ಅವರು ನೆಗೆಟಿವ್‍ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೊಂದು ಮರ್ಡರ್‍ ಮಿಸ್ಟ್ರಿ ಚಿತ್ರ ಎಂದು ಶಶಾಂಕ್‍ ಹೇಳಿದ್ದು, ಒಂದು ಕಾಲ್ಪನಿಕ ಹಳ್ಳಿಯ ಮುಖಂಡ ಜಿಂಗೋ ಆಗಿ ಧನಂಜಯ್‍ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ.

ಈ ಹಿಂದೆ ಕಲರ್ಸ ಕನ್ನಡ ವಾಹಿನಿಯಲ್ಲಿ ಬರಹಗಾರರಾಗಿ ಕೆಲಸ ಮಾಡುತ್ತಿದ್ದ ಹ್ಯಾರಿಸ್ ಅಹ್ಮದ್‍ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದಿದ್ದಾರೆ. ಒಂದು ಹಳ್ಳಿಯಲ್ಲಿ ಕೊಲೆಯಾದಾಗ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗುತ್ತಿದೆ. ಚಿತ್ರದ ಬರವಣಿಗೆ ಕೆಲಸ ಮುಕ್ತಾಯದ ಹಂತಕ್ಕೆ ಬಂದಿದ್ದು, ತಾರಾಗಣದ ಆಯ್ಕೆ ನಡೆಯುತ್ತಿದೆ.

‘ಜಿಂಗೋ’ ಚಿತ್ರವನ್ನು ಧನಂಜಯ್‍ ಮತ್ತು ನರೇಂದ್ರ ರೆಡ್ಡಿ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ರಾಹುಲ್‍ ರಾಯ್‍ ಛಾಯಾಗ್ರಹಣ ಮತ್ತು ನವನೀತ್‍ ಶ್ಯಾಮ್‍ ಸಂಗೀತವಿದೆ.

ಅಂದಹಾಗೆ, ಧನಂಜಯ್‍ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಡಾಲಿ ಪಿಕ್ಚರ್ಸ್ ಯೂಟ್ಯೂಬ್‍ ಚಾನಲ್‍ನಲ್ಲಿ ಚಿತ್ರದ ಮೊದಲ ಟೀಸರ್‍ ಬಿಡುಗಡೆ ಮಾಡಲಾಗಿದೆ.

ಭೂಮಿಕಾ

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

5 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

6 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

7 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

7 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

8 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

8 hours ago