ಮನರಂಜನೆ

ಡಾಲಿ ಈಗ ‘ಜಿಂಗೋ’; ಹುಟ್ಟುಹಬ್ಬಕ್ಕೆ ಹೊಸ ಚಿತ್ರದ ಘೋಷಣೆ

ಧನಂಜಯ್‍ ಸದ್ಯ ‘ಉತ್ತರಕಾಂಡ’ ಮತ್ತು ‘ಅಣ್ಣ ಫ್ರಮ್‍ ಮೆಕ್ಸಿಕೋ’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದಲ್ಲದೆ ಧನಂಜಯ್‍ ಅಭಿನಯದ ‘ಜೀಬ್ರಾ’ ಮತ್ತು ‘ಪುಷ್ಪ 2’ ಚಿತ್ರಗಳು ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿವೆ. ಇದರ ಜೊತೆಗೆ ‘ನಾಡಪ್ರಭು ಕೆಂಪೇಗೌಡ’ ಮತ್ತು ‘ಹಲಗಲಿ’ ಚಿತ್ರಗಳಲ್ಲಿ ನಟಿಸುತ್ತಿರುವ ಸುದ್ದಿ ಇದೆ. ಇವೆಲ್ಲದರ ಜೊತೆಗೆ ಅವರು ಇನ್ನೊಂದು ಚಿತ್ರವನ್ನು ಸಹ ಒಪ್ಪಿಕೊಂಡಿದ್ದಾರೆ.

ಧನಂಜಯ್‍ ಹೊಸ ಚಿತ್ರದ ಹೆಸರು ‘ಜಿಂಗೋ’. ಈ ಚಿತ್ರವನ್ನು ಶಶಾಂಕ್‍ ಸೋಗಾಲ್‍ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ, ಪೂರ್ಣಚಂದ್ರ ತೇಜಸ್ವಿ ವಿರಚಿತ ‘ಡೇರ್ ಡೆವಿಲ್‍ ಮುಸ್ತಾಫ’ ಚಿತ್ರವನ್ನು ನಿರ್ದೇಶಿಸಿದ್ದ ಶಶಾಂಕ್‍ ಅವರಿಗೆ ಇದು ಎರಡನೆಯ ಚಿತ್ರ. ‘ಡೇರ್ ಡೆವಿಲ್‍ ಮುಸ್ತಾಫ’ ಚಿತ್ರಕ್ಕೆ ಧನಂಜಯ್‍ ಬೆನ್ನೆಲುಬಾಗಿ ನಿಂತಿದ್ದರು. ಆ ಚಿತ್ರದ ಬಿಡುಗಡೆಗೆ ದೊಡ್ಡ ರೀತಿಯಲ್ಲಿ ಸಹಾಯ ಮಾಡಿದ್ದರು. ಈಗ ಅದೇ ಶಶಾಂಕ್‍ ನಿರ್ದೇಶನದ ಚಿತ್ರದಲ್ಲಿ ಧನಂಜಯ್‍ ನಟಿಸುತ್ತಿದ್ದಾರೆ.

ಈ ಚಿತ್ರದಲ್ಲಿ ಧನಂಜಯ್‍ ಆ್ಯಂಟಿ-ಹೀರೋ ಆಗಿ ನಟಿಸುತ್ತಿದ್ದಾರೆ. ಬಹಳ ದಿನಗಳ ನಂತರ ಅವರು ನೆಗೆಟಿವ್‍ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೊಂದು ಮರ್ಡರ್‍ ಮಿಸ್ಟ್ರಿ ಚಿತ್ರ ಎಂದು ಶಶಾಂಕ್‍ ಹೇಳಿದ್ದು, ಒಂದು ಕಾಲ್ಪನಿಕ ಹಳ್ಳಿಯ ಮುಖಂಡ ಜಿಂಗೋ ಆಗಿ ಧನಂಜಯ್‍ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ.

ಈ ಹಿಂದೆ ಕಲರ್ಸ ಕನ್ನಡ ವಾಹಿನಿಯಲ್ಲಿ ಬರಹಗಾರರಾಗಿ ಕೆಲಸ ಮಾಡುತ್ತಿದ್ದ ಹ್ಯಾರಿಸ್ ಅಹ್ಮದ್‍ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದಿದ್ದಾರೆ. ಒಂದು ಹಳ್ಳಿಯಲ್ಲಿ ಕೊಲೆಯಾದಾಗ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗುತ್ತಿದೆ. ಚಿತ್ರದ ಬರವಣಿಗೆ ಕೆಲಸ ಮುಕ್ತಾಯದ ಹಂತಕ್ಕೆ ಬಂದಿದ್ದು, ತಾರಾಗಣದ ಆಯ್ಕೆ ನಡೆಯುತ್ತಿದೆ.

‘ಜಿಂಗೋ’ ಚಿತ್ರವನ್ನು ಧನಂಜಯ್‍ ಮತ್ತು ನರೇಂದ್ರ ರೆಡ್ಡಿ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ರಾಹುಲ್‍ ರಾಯ್‍ ಛಾಯಾಗ್ರಹಣ ಮತ್ತು ನವನೀತ್‍ ಶ್ಯಾಮ್‍ ಸಂಗೀತವಿದೆ.

ಅಂದಹಾಗೆ, ಧನಂಜಯ್‍ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಡಾಲಿ ಪಿಕ್ಚರ್ಸ್ ಯೂಟ್ಯೂಬ್‍ ಚಾನಲ್‍ನಲ್ಲಿ ಚಿತ್ರದ ಮೊದಲ ಟೀಸರ್‍ ಬಿಡುಗಡೆ ಮಾಡಲಾಗಿದೆ.

ಭೂಮಿಕಾ

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

7 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

8 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

9 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

14 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

21 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

21 hours ago