ಮನರಂಜನೆ

ಮನಸ್ಸಿಗೆ ನೋವಾಗುವಂತೆ ಮಾಡಬೇಡಿ; ಅಭಿಮಾನಿಗಳಲ್ಲಿ ಯಶ್ ಮನವಿ

ನಟ ಯಶ್‍, ಇದೇ ಜನವರಿ 8ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅಭಿಮಾನಿಗಳೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದನ್ನು ಯಶ್‍ ನಿಲ್ಲಿಸಿದ್ದಾರೆ. ಈ ವರ್ಷವೂ ಅದನ್ನು ಯಶ್‍ ಮುಂದುವರೆಸಿದ್ದು, ಈ ಕುರಿತು ಅಭಿಮಾನಿಗಳಿಗೆ ಪತ್ರವನ್ನೂ ಬರೆದಿದ್ದಾರೆ. ಈ ಪತ್ರದಲ್ಲಿ ಅವರು ಈ ಬಾರಿ ಮನಸ್ಸಿಗೆ ನೋವಾಗುವಂತೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಅದಕ್ಕೆ ಕಾರಣವೂ ಇದೆ. ಕಳೆದ ವರ್ಷ ಯಶ್‍ ಹುಟ್ಟುಹಬ್ಬದ ಸಂದರ್ಭದಲ್ಲಿ ಗದಗ ಜಿಲ್ಲೆಯಲ್ಲಿ ಯಶ್‍ ಅವರ ಮೂವರು ಅಭಿಮಾನಿಗಳು ತಮ್ಮ ಮೆಚ್ಚಿನ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಫ್ಲೆಕ್ಸ್ ಕಟ್ಟುವುದಕ್ಕೆ ಹೋಗಿ, ಕರೆಂಟ್‍ ಹೊಡೆಸಿಕೊಂಡು ನಿಧನರಾಗಿದ್ದರು. ಮೂವರು ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದ ಬೇಸರಗೊಂಡಿದ್ದ ಯಶ್‍, ಮೃತರ ಮನೆಗಳಿಗೆ ಹೋಗಿ ಸಂತಾಪ ವ್ಯಕ್ತಪಡಿಸಿ ಬಂದಿದ್ದರು. ನಂತರ ಮಾತನಾಡಿದ್ದ ಅವರು, ‘ನೀವು ನನ್ನ ನಿಜವಾದ ಅಭಿಮಾನಿಯಾಗಿದ್ದರೆ, ಇದ್ದಲ್ಲಿಂದಲೇ ಹಾರೈಸಿ. ನಿಮ್ಮ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದು ಹೇಳಿದ್ದರು.

ಈಗ ಅವರು ತಮ್ಮ ಹುಟ್ಟುಹಬ್ಬಕ್ಕೆ ಇನ್ನೂ ಒಂದು ವಾರವಿದೆ ಎನ್ನುವಾಗಲೇ, ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳುವುದರ ಜೊತೆಗೆ, ನಿಮ್ಮ ಕುಟುಂಬದವರು ಹೆಮ್ಮೆ ಪಡುವ ಕೆಲಸ ಮಾಡಿ ಎಂದು ಹೇಳಿದ್ದಾರೆ.

‘ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ. ನಿಮ್ಮ ಅಭಿಮಾನದ ಅಪ್ಪುಗೆ ಮತ್ತೊಂದು ವರ್ಷವನ್ನು ಸಾರ್ಥಕಗೊಳಿಸಿದೆ. ಹೊಸ ವರ್ಷ ಹೊಸ ಭರವಸೆಗಳೊಂದಿಗೆ ನಗುನಗುತ್ತಾ ಬದುಕೋಣ. ಬದುಕನ್ನು ಮೆರಗುಗೊಳಿಸುವಂತಹ ಹೊಸ ಯೋಜನೆಗಳೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ. ಸಿನಿಮಾ ಕೆಲಸದ ನಿಮಿತ್ತ ನಾನು ಹುಟ್ಟುಹಬ್ಬದಂದು ಊರಿನಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಿರಲಿ ಎಂಬುದು ನನ್ನ ಪ್ರೀತಿಯ ಮನವಿ. ಹಾಗಾಗಿ ಫೆಕ್ಸ್, ಬ್ಯಾನರ್ ಗಳ ಯಾವುದೇ ಆಡಂಬರ ಮಾಡದೆ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೆ ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆ ಪಡುವ ಕೆಲಸ ನಿಮ್ಮಿಂದ ಆದರೆ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ. ಆದಷ್ಟು ಬೇಗ ನಿಮ್ಮನ್ನೆಲ್ಲಾ ಭೇಟಿ ಆಗುತ್ತೇನೆ’ ಎಂದು ಯಶ್‍ ಬರೆದುಕೊಂಡಿದ್ದಾರೆ.

ಈ ಬಾರಿಯಾದರೂ ಯಶ್‍ ಅಭಿಮಾನಿಗಳು ತಮ್ಮ ಮೆಚ್ಚಿನ ನಟನ ಮನವಿಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಾರಾ ಎಂದು ಕಾದು ನೋಡಬೇಕಿದೆ.

ಭೂಮಿಕಾ

Recent Posts

ತೆಕ್ಕಲಕೋಟೆ | ಉತ್ಖನನ ವೇಳೆ ಎರಡು ಅಸ್ಥಿ ಪಂಜರ ಪತ್ತೆ

ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ…

21 seconds ago

ಮಂಡ್ಯದಲ್ಲಿ ಎಆರ್‌ಎಐ ಸೆಂಟರ್‌ ತೆರೆಯಲು 500 ಕೋಟಿ ರೂ. : ಎಚ್‌ಡಿಕೆ

ಮೈಸೂರು : ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ, ಉತ್ತೇಜನಕ್ಕೆ ಕೇಂದ್ರಸರ್ಕಾರ ಆದ್ಯತೆ ನೀಡಿರುವ ಜತೆಗೆ, ಮಂಡ್ಯ ಜಿಲ್ಲೆಯಲ್ಲಿ ಆಟೋಮೋಟಿವ್ ರೀಸರ್ಚ್ ಅಸೋಸಿಯೆಷನ್…

25 mins ago

ಗಮನ ಸೆಳೆದ ಸ್ವಚ್ಛತಾ ಮ್ಯಾರಥಾನ್‌

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ ಶೀರ್ಷಿಕೆಯಡಿ ಸ್ವಚ್ಚತಾ…

52 mins ago

ಗೃಹಲಕ್ಷ್ಮಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ : ಸಿಎಂ ಸೂಚನೆ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…

2 hours ago

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

3 hours ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

3 hours ago