ಮನರಂಜನೆ

ಕನ್ನಡ ಚಿತ್ರರಂಗಕ್ಕೆ ಡಾ. ರಾಜ್‍ ಮೊಮ್ಮಗ; ‘ನಿಂಬಿಯಾ ಬನಾದ ಮ್ಯಾಗ’ ಟ್ರೇಲರ್‍ ಬಿಡುಗಡೆ

ಡಾ. ರಾಜಕುಮಾರ್‍ ಅವರ ಮೊಮ್ಮಕ್ಕಳು ಚಿತ್ರರಂಗದಲ್ಲಿ ನಟ-ನಟಿಯರಾಗಿ ಗುರುತಿಸಿಕೊಂಡಿದ್ದಾರೆ. ಈಗ ಈ ಸಾಲಿಗೆ ಷಣ್ಮುಖ ಸಹ ಸೇರಿದ್ದಾರೆ. ಡಾ. ರಾಜಕುಮಾರ್‍ ಮಗಳು ಲಕ್ಷ್ಮೀ ಮತ್ತು ಗೋವಿಂದರಾಜ್‍ ಅವರ ದಂಪತಿಯ ಮಗನಾದ ಷಣ್ಮುಖ, ಇದೀಗ ಚಿತ್ರವೊಂದರಲ್ಲಿ ನಟಿಸಿದ್ದು, ಆ ಚಿತ್ರ ಇದೇ ಏಪ್ರಿಲ್‍.04ರಂದು ಬಿಡುಗಡೆ ಆಗುತ್ತಿದೆ.

ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಷಣ್ಮುಖ ಅವರ ತಂದೆ-ತಾಯಿ ಗೋವಿಂದರಾಜ್‍ ಹಾಗೂ ಲಕ್ಷ್ಮೀ ಟ್ರೇಲರ್ ಅನಾವರಣ ಮಾಡಿ ಮಗನ ಚಿತ್ರಕ್ಕೆ ಶುಭ ಕೋರಿದರು‌. ಹಿರಿಯ ನಿರ್ಮಾಪಕ ಎಸ್‌‌.ಎ. ಚಿನ್ನೇಗೌಡ, ಡಾ. ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಚಿತ್ರವನ್ನು ವಿ. ಮಾದೇಶ್ ನಿರ್ಮಿಸಿದ್ದು, ಅಶೋಕ್ ಕಡಬ ನಿರ್ದೇಶನ ಮಾಡಿದ್ದಾರೆ.

‘ನಿಂಬಿಯಾ ಬನದ‌ ಮ್ಯಾಗ’ ಚಿತ್ರದ ಕುರಿತು ಮಾತನಾಡಿದ ಷಣ್ಮುಖ,‌ ‘ಇದು ನನ್ನ ಅಭಿನಯದ ಮೊದಲ ಚಿತ್ರ. ಇದು ಮಲೆನಾಡಿನ ಮಡಿಲಲ್ಲಿ ನಡೆಯುವ ಸುಂದರ ದೃಶ್ಯ ಕಾವ್ಯ. ಅಮ್ಮ‌-ಮಗನ ಬಾಂಧವ್ಯದ ಕಥೆ. ನಮ್ಮ ಕುಟುಂಬ ಸದಸ್ಯರೆಲ್ಲರು ನನ್ನ ಚಿತ್ರಕ್ಕೆ ಶುಭ ಕೋರಿದ್ದಾರೆ’ ಎಂದರು.

‘ಮಲೆನಾಡ ಭಾಗದ ಬೆಂಗಾಡಿಯಲ್ಲಿ ದೊಡ್ಡ ಮನೆಯ ನಾಲ್ಕು ವರ್ಷದ ಮಗು ಅಚ್ಚು (ಅಚ್ಚಣ್ಣ) ಕಾಣೆಯಾಗಿದೆ. ಆ ತಾಯಿ ಇಂದಲ್ಲ ನಾಳೆ ಮಗು ಬಂದೆ ಬರುತ್ತದೆ ಎನ್ನುವ ನಂಬಿಕೆಯಲ್ಲೇ ಕಾಯುತ್ತಿದ್ದಾಳೆ. ಕಾಲ ಉರುಳಿದಂತೆ 25 ವರ್ಷದ ನಂತರ ದೊಡ್ಡಮನೆಯಲ್ಲಿ ಸಂತೋಷದ ವಾತಾವರಣ. ಕಾರಣ ಕಳೆದು ಹೋದ ಮಗ ಅಚ್ಚಣ್ಣ ಬಂದಿದ್ದಾನೆ. ಮುಂದೆ ಏನು ಎಂಬುದು ‘ನಿಂಬಿಯಾ ಬನಾದ ಮ್ಯಾಗ – ಪೇಜ್ 1’ ಚಿತ್ರದ ಕಥೆ’ ಎನ್ನುತ್ತಾರೆ ಅಶೋಕ್‍ ಕಡಬ.

‘ನಿಂಬಿಯಾ ಬನಾದ ಮ್ಯಾಗ – ಪೇಜ್ 1’ ಮುಂದುವರೆದ ಭಾಗವೂ ಮುಂದಿನ ದಿನಗಳಲ್ಲಿ ಬರುತ್ತದಂತೆ. ಷಣ್ಮುಖಗೆ ನಾಯಕಿಯಾಗಿ ತನುಶ್ರೀ ನಟಿಸಿದ್ದಾರೆ. ವಿಶೇಷವೆಂದರೆ, ‘ಮೇಘಮಾಲೆ’ ಖ್ಯಾತಿಯ ಸುನಾದ್ ರಾಜ್ ಸುಮಾರು 25 ವರ್ಷಗಳ ನಂತರ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಆರೋನ್ ಕಾರ್ತಿಕ್ ಸಂಗೀತ ನೀಡಿರುವ ನಾಲ್ಕು ಹಾಡುಗಳು ಈ ಚಿತ್ರದಲ್ಲಿದೆ. ಪಳನಿ ಡಿ ಸೇನಾಪತಿ ಹಿನ್ನೆಲೆ ಸಂಗೀತ ನೀಡಿದ್ದಾರೆ. ಸಿದ್ದು ಕಾಂಚನಹಳ್ಳಿ ಛಾಯಾಗ್ರಹಣ, ರವಿತೇಜ ಸಂಕಲನ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

30 mins ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

39 mins ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

40 mins ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

43 mins ago

ಇನ್ನೆರಡು ತಿಂಗಳಲ್ಲಿ ದರ್ಶನ್‌ ಹೊರಬರುತ್ತಾರೆ: ನಟ ರವಿಚಂದ್ರನ್‌ ವಿಶ್ವಾಸ

ಬೆಂಗಳೂರು: ನಿಮಗೆಲ್ಲಾ ಡಿಬಾಸ್‌, ಆ ಡಿಬಾಸ್‌ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್‌ ಹೊರಬರುತ್ತಾರೆ ಎಂದು ನಟ ರವಿಚಂದ್ರನ್‌…

45 mins ago

ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಹೂಡಿದ್ದ ಮಾನಹಾನಿ ಪ್ರಕರಣ ವಜಾ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರದ ಜಾಹೀರಾತು ನೀಡಿದ ಪ್ರಕರಣದಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ…

1 hour ago