ಡಾ. ರಾಜಕುಮಾರ್ ಅವರ ಮೊಮ್ಮಕ್ಕಳು ಚಿತ್ರರಂಗದಲ್ಲಿ ನಟ-ನಟಿಯರಾಗಿ ಗುರುತಿಸಿಕೊಂಡಿದ್ದಾರೆ. ಈಗ ಈ ಸಾಲಿಗೆ ಷಣ್ಮುಖ ಸಹ ಸೇರಿದ್ದಾರೆ. ಡಾ. ರಾಜಕುಮಾರ್ ಮಗಳು ಲಕ್ಷ್ಮೀ ಮತ್ತು ಗೋವಿಂದರಾಜ್ ಅವರ ದಂಪತಿಯ ಮಗನಾದ ಷಣ್ಮುಖ, ಇದೀಗ ಚಿತ್ರವೊಂದರಲ್ಲಿ ನಟಿಸಿದ್ದು, ಆ ಚಿತ್ರ ಇದೇ ಏಪ್ರಿಲ್.04ರಂದು ಬಿಡುಗಡೆ ಆಗುತ್ತಿದೆ.
ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಷಣ್ಮುಖ ಅವರ ತಂದೆ-ತಾಯಿ ಗೋವಿಂದರಾಜ್ ಹಾಗೂ ಲಕ್ಷ್ಮೀ ಟ್ರೇಲರ್ ಅನಾವರಣ ಮಾಡಿ ಮಗನ ಚಿತ್ರಕ್ಕೆ ಶುಭ ಕೋರಿದರು. ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ, ಡಾ. ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಚಿತ್ರವನ್ನು ವಿ. ಮಾದೇಶ್ ನಿರ್ಮಿಸಿದ್ದು, ಅಶೋಕ್ ಕಡಬ ನಿರ್ದೇಶನ ಮಾಡಿದ್ದಾರೆ.
‘ನಿಂಬಿಯಾ ಬನದ ಮ್ಯಾಗ’ ಚಿತ್ರದ ಕುರಿತು ಮಾತನಾಡಿದ ಷಣ್ಮುಖ, ‘ಇದು ನನ್ನ ಅಭಿನಯದ ಮೊದಲ ಚಿತ್ರ. ಇದು ಮಲೆನಾಡಿನ ಮಡಿಲಲ್ಲಿ ನಡೆಯುವ ಸುಂದರ ದೃಶ್ಯ ಕಾವ್ಯ. ಅಮ್ಮ-ಮಗನ ಬಾಂಧವ್ಯದ ಕಥೆ. ನಮ್ಮ ಕುಟುಂಬ ಸದಸ್ಯರೆಲ್ಲರು ನನ್ನ ಚಿತ್ರಕ್ಕೆ ಶುಭ ಕೋರಿದ್ದಾರೆ’ ಎಂದರು.
‘ಮಲೆನಾಡ ಭಾಗದ ಬೆಂಗಾಡಿಯಲ್ಲಿ ದೊಡ್ಡ ಮನೆಯ ನಾಲ್ಕು ವರ್ಷದ ಮಗು ಅಚ್ಚು (ಅಚ್ಚಣ್ಣ) ಕಾಣೆಯಾಗಿದೆ. ಆ ತಾಯಿ ಇಂದಲ್ಲ ನಾಳೆ ಮಗು ಬಂದೆ ಬರುತ್ತದೆ ಎನ್ನುವ ನಂಬಿಕೆಯಲ್ಲೇ ಕಾಯುತ್ತಿದ್ದಾಳೆ. ಕಾಲ ಉರುಳಿದಂತೆ 25 ವರ್ಷದ ನಂತರ ದೊಡ್ಡಮನೆಯಲ್ಲಿ ಸಂತೋಷದ ವಾತಾವರಣ. ಕಾರಣ ಕಳೆದು ಹೋದ ಮಗ ಅಚ್ಚಣ್ಣ ಬಂದಿದ್ದಾನೆ. ಮುಂದೆ ಏನು ಎಂಬುದು ‘ನಿಂಬಿಯಾ ಬನಾದ ಮ್ಯಾಗ – ಪೇಜ್ 1’ ಚಿತ್ರದ ಕಥೆ’ ಎನ್ನುತ್ತಾರೆ ಅಶೋಕ್ ಕಡಬ.
‘ನಿಂಬಿಯಾ ಬನಾದ ಮ್ಯಾಗ – ಪೇಜ್ 1’ ಮುಂದುವರೆದ ಭಾಗವೂ ಮುಂದಿನ ದಿನಗಳಲ್ಲಿ ಬರುತ್ತದಂತೆ. ಷಣ್ಮುಖಗೆ ನಾಯಕಿಯಾಗಿ ತನುಶ್ರೀ ನಟಿಸಿದ್ದಾರೆ. ವಿಶೇಷವೆಂದರೆ, ‘ಮೇಘಮಾಲೆ’ ಖ್ಯಾತಿಯ ಸುನಾದ್ ರಾಜ್ ಸುಮಾರು 25 ವರ್ಷಗಳ ನಂತರ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಆರೋನ್ ಕಾರ್ತಿಕ್ ಸಂಗೀತ ನೀಡಿರುವ ನಾಲ್ಕು ಹಾಡುಗಳು ಈ ಚಿತ್ರದಲ್ಲಿದೆ. ಪಳನಿ ಡಿ ಸೇನಾಪತಿ ಹಿನ್ನೆಲೆ ಸಂಗೀತ ನೀಡಿದ್ದಾರೆ. ಸಿದ್ದು ಕಾಂಚನಹಳ್ಳಿ ಛಾಯಾಗ್ರಹಣ, ರವಿತೇಜ ಸಂಕಲನ ಈ ಚಿತ್ರಕ್ಕಿದೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…