ಡಾ. ರಾಜಕುಮಾರ್ ಅವರ ಮೊಮ್ಮಕ್ಕಳು ಚಿತ್ರರಂಗದಲ್ಲಿ ನಟ-ನಟಿಯರಾಗಿ ಗುರುತಿಸಿಕೊಂಡಿದ್ದಾರೆ. ಈಗ ಈ ಸಾಲಿಗೆ ಷಣ್ಮುಖ ಸಹ ಸೇರಿದ್ದಾರೆ. ಡಾ. ರಾಜಕುಮಾರ್ ಮಗಳು ಲಕ್ಷ್ಮೀ ಮತ್ತು ಗೋವಿಂದರಾಜ್ ಅವರ ದಂಪತಿಯ ಮಗನಾದ ಷಣ್ಮುಖ, ಇದೀಗ ಚಿತ್ರವೊಂದರಲ್ಲಿ ನಟಿಸಿದ್ದು, ಆ ಚಿತ್ರ ಇದೇ ಏಪ್ರಿಲ್.04ರಂದು ಬಿಡುಗಡೆ ಆಗುತ್ತಿದೆ.
ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಷಣ್ಮುಖ ಅವರ ತಂದೆ-ತಾಯಿ ಗೋವಿಂದರಾಜ್ ಹಾಗೂ ಲಕ್ಷ್ಮೀ ಟ್ರೇಲರ್ ಅನಾವರಣ ಮಾಡಿ ಮಗನ ಚಿತ್ರಕ್ಕೆ ಶುಭ ಕೋರಿದರು. ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ, ಡಾ. ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಚಿತ್ರವನ್ನು ವಿ. ಮಾದೇಶ್ ನಿರ್ಮಿಸಿದ್ದು, ಅಶೋಕ್ ಕಡಬ ನಿರ್ದೇಶನ ಮಾಡಿದ್ದಾರೆ.
‘ನಿಂಬಿಯಾ ಬನದ ಮ್ಯಾಗ’ ಚಿತ್ರದ ಕುರಿತು ಮಾತನಾಡಿದ ಷಣ್ಮುಖ, ‘ಇದು ನನ್ನ ಅಭಿನಯದ ಮೊದಲ ಚಿತ್ರ. ಇದು ಮಲೆನಾಡಿನ ಮಡಿಲಲ್ಲಿ ನಡೆಯುವ ಸುಂದರ ದೃಶ್ಯ ಕಾವ್ಯ. ಅಮ್ಮ-ಮಗನ ಬಾಂಧವ್ಯದ ಕಥೆ. ನಮ್ಮ ಕುಟುಂಬ ಸದಸ್ಯರೆಲ್ಲರು ನನ್ನ ಚಿತ್ರಕ್ಕೆ ಶುಭ ಕೋರಿದ್ದಾರೆ’ ಎಂದರು.
‘ಮಲೆನಾಡ ಭಾಗದ ಬೆಂಗಾಡಿಯಲ್ಲಿ ದೊಡ್ಡ ಮನೆಯ ನಾಲ್ಕು ವರ್ಷದ ಮಗು ಅಚ್ಚು (ಅಚ್ಚಣ್ಣ) ಕಾಣೆಯಾಗಿದೆ. ಆ ತಾಯಿ ಇಂದಲ್ಲ ನಾಳೆ ಮಗು ಬಂದೆ ಬರುತ್ತದೆ ಎನ್ನುವ ನಂಬಿಕೆಯಲ್ಲೇ ಕಾಯುತ್ತಿದ್ದಾಳೆ. ಕಾಲ ಉರುಳಿದಂತೆ 25 ವರ್ಷದ ನಂತರ ದೊಡ್ಡಮನೆಯಲ್ಲಿ ಸಂತೋಷದ ವಾತಾವರಣ. ಕಾರಣ ಕಳೆದು ಹೋದ ಮಗ ಅಚ್ಚಣ್ಣ ಬಂದಿದ್ದಾನೆ. ಮುಂದೆ ಏನು ಎಂಬುದು ‘ನಿಂಬಿಯಾ ಬನಾದ ಮ್ಯಾಗ – ಪೇಜ್ 1’ ಚಿತ್ರದ ಕಥೆ’ ಎನ್ನುತ್ತಾರೆ ಅಶೋಕ್ ಕಡಬ.
‘ನಿಂಬಿಯಾ ಬನಾದ ಮ್ಯಾಗ – ಪೇಜ್ 1’ ಮುಂದುವರೆದ ಭಾಗವೂ ಮುಂದಿನ ದಿನಗಳಲ್ಲಿ ಬರುತ್ತದಂತೆ. ಷಣ್ಮುಖಗೆ ನಾಯಕಿಯಾಗಿ ತನುಶ್ರೀ ನಟಿಸಿದ್ದಾರೆ. ವಿಶೇಷವೆಂದರೆ, ‘ಮೇಘಮಾಲೆ’ ಖ್ಯಾತಿಯ ಸುನಾದ್ ರಾಜ್ ಸುಮಾರು 25 ವರ್ಷಗಳ ನಂತರ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಆರೋನ್ ಕಾರ್ತಿಕ್ ಸಂಗೀತ ನೀಡಿರುವ ನಾಲ್ಕು ಹಾಡುಗಳು ಈ ಚಿತ್ರದಲ್ಲಿದೆ. ಪಳನಿ ಡಿ ಸೇನಾಪತಿ ಹಿನ್ನೆಲೆ ಸಂಗೀತ ನೀಡಿದ್ದಾರೆ. ಸಿದ್ದು ಕಾಂಚನಹಳ್ಳಿ ಛಾಯಾಗ್ರಹಣ, ರವಿತೇಜ ಸಂಕಲನ ಈ ಚಿತ್ರಕ್ಕಿದೆ.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…