ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್ ಸಿಕ್ಕಿದೆ.
ನಟಿ ರಾಗಿಣಿ ದ್ವಿವೇದಿ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಪ್ರಕರಣ ಖುಲಾಸೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಯಾವುದೇ ಸಾಕ್ಷ್ಯಾಧಾರ ಒದಗಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂಬ ಕಾರಣ ನೀಡಿದ ಹೈಕೋರ್ಟ್ ಎ2 ರಾಗಿಣಿ ವಿರುದ್ಧದ ಪ್ರಕರಣವನ್ನು ರದ್ದು ಮಾಡಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿಯನ್ನು ಕಳೆದ 2020ರಲ್ಲಿ ಬಂಧಿಸಲಾಗಿತ್ತು. ಹಲವು ದಿನ ಜೈಲುವಾಸವನ್ನು ಅನುಭವಿಸಿದ್ದರು. ಡ್ರಗ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪ ರಾಗಿಣಿ ಮೇಲೆ ಇತ್ತು. ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೂ ಅವರು ಅವಕಾಶ ಮಾಡಿಕೊಟ್ಟಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ರಾಗಿಣಿ ದ್ವಿವೇದಿ ಅವರು, ಹೊಸ ಅಧ್ಯಾಯ ಆರಂಭವಾಗಿದೆ. ಸತ್ಯಮೇವ ಜಯತೆ. ಮೌನ ಮುರಿಯುವ ಸಮಯ ಇದಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…