ಮನರಂಜನೆ

ಮತ್ತೆ ತೆಲುಗಿಗೆ ‘ದುನಿಯಾ’ ವಿಜಯ್‍; ಪುರಿ ಜಗನ್ನಾಥ್‍ ಚಿತ್ರದಲ್ಲಿ ನಟನೆ

ಇತ್ತೀಚೆಗಷ್ಟೇ, ನಯನತಾರಾ ಅಭಿನಯದ ‘ಮೂಕುತಿ ಅಮ್ಮನ್‍ 2’ ಚಿತ್ರದಲ್ಲಿ ಕನ್ನಡದ ‘ದುನಿಯಾ’ ವಿಜಯ್‍ ವಿಲನ್‍ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಬಂದಿತ್ತು. ಈಗ ಅವರು ಪುನಃ ತೆಲುಗಿನ ಚಿತ್ರವೊಂದರಲ್ಲಿ ನಟಿಸುತ್ತಿರುವ ಸುದ್ದಿ ಬಂದಿದೆ.

ತಮಿಳಿನ ಜನಪ್ರಿಯ ನಟ ವಿಜಯ್‍ ಸೇತುಪತಿ ಅಭಿನಯದಲ್ಲಿ ಪುರಿ ಜಗನ್ನಾಥ್‍ ಒಂದು ಚಿತ್ರ ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಯುಗಾದಿ ಹಬ್ಬದ ಸಂದರ್ಭದಲ್ಲಿ ಕೇಳಿ ಬಂದಿತ್ತು. ಈಗ ಆ ಚಿತ್ರದಲ್ಲಿ ‘ದುನಿಯಾ’ ವಿಜಯ್‍ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇತ್ತೀಚೆಗೆ ನಿರ್ದೇಶಕ ಪುರಿ ಮತ್ತು ನಿರ್ಮಾಪಕಿ ಚಾರ್ಮಿ ಕೌರ್‍, ಇಬ್ಬರೂ ವಿಜಯ್‍ ಅವರನ್ನು ಭೇಟಿ ಮಾಡಿ ಚಿತ್ರದ ಕಥೆ ಹೇಳಿ, ಅವರಿಂದ ಒಪ್ಪಿಗೆ ಪಡೆದು ಬಂದಿದ್ದಾರೆ. ಈ ಚಿತ್ರವನ್ನು ಪುರಿ ಕನೆಕ್ಟ್ಸ್ ಸಂಸ್ಥೆಯಡಿ ಪುರಿ ಜಗನ್ನಾಥ್‍ ಮತ್ತು ಚಾರ್ಮಿ ಕೌರ್‍ ಜೊತೆಯಾಗಿ ನಿರ್ಮಿಸಿದರೆ, ಪುರಿ ಜಗನ್ನಾಥ್‍ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಬಾಲಿವುಡ್‍ ನಟಿ ಟಬು ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವುದು ವಿಶೇಷ.

‘ದುನಿಯಾ’ ವಿಜಯ್‍ಗೆ ತೆಲುಗು ಚಿತ್ರರಂಗ ಹೊಸದೇನಲ್ಲ. ಇದಕ್ಕೂ ಮೊದಲು ನಂದಮೂರಿ ಬಾಲಕೃಷ್ಣ ಅಭಿನಯದ ‘ವೀರ ಸಿಂಹ ರೆಡ್ಡಿ’ ಎಂಬ ಚಿತ್ರದಲ್ಲಿ ನಟಿಸುವ ಮೂಲಕ ತೆಲುಗು ಚಿತ್ರರಂಗಕ್ಕೆ ಹೋಗಿದ್ದರು ‘ದುನಿಯಾ’ ವಿಜಯ್‍. ಈಗ ಪುರಿ ಜಗನ್ನಾಥ್‍ ನಿರ್ದೇಶನದ ಚಿತ್ರದಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ. ಈ ಹೆಸರಿಡದ ಚಿತ್ರವು ಜೂನ್‍ನಿಂದ ಪ್ರಾರಂಭವಾಗುವ ನಿರೀಕ್ಷೆ ಇದೆ.

ವಿಜಯ್ ಸದ್ಯ ‘ಲ್ಯಾಂಡ್‍ ಲಾರ್ಡ್‍’ ಚಿತ್ರದಲ್ಲಿ ನಟಿಸುತ್ತಿದ್ದು, ಇದರ ಜೊತೆಗೆ ‘ಸಿಟಿ ಲೈಟ್ಸ್’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ವಿನಯ್‍ ರಾಜಕುಮಾರ್‍ ಮತ್ತು ವಿಜಯ್‍ ಮಗಳು ಮೊನೀಷಾ ನಾಯಕ-ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ, ಎಸ್‍. ನಾರಾಯಣ್‍ ನಿರ್ದೇಶನದ ‘ಮಾರುತ’ ಚಿತ್ರದಲ್ಲೂ ವಿಜಯ್‍ ನಟಿಸಿದ್ದು, ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

1 hour ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

1 hour ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

1 hour ago

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

4 hours ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

4 hours ago