ಮನರಂಜನೆ

ಮತ್ತೆ ತೆಲುಗಿಗೆ ‘ದುನಿಯಾ’ ವಿಜಯ್‍; ಪುರಿ ಜಗನ್ನಾಥ್‍ ಚಿತ್ರದಲ್ಲಿ ನಟನೆ

ಇತ್ತೀಚೆಗಷ್ಟೇ, ನಯನತಾರಾ ಅಭಿನಯದ ‘ಮೂಕುತಿ ಅಮ್ಮನ್‍ 2’ ಚಿತ್ರದಲ್ಲಿ ಕನ್ನಡದ ‘ದುನಿಯಾ’ ವಿಜಯ್‍ ವಿಲನ್‍ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಬಂದಿತ್ತು. ಈಗ ಅವರು ಪುನಃ ತೆಲುಗಿನ ಚಿತ್ರವೊಂದರಲ್ಲಿ ನಟಿಸುತ್ತಿರುವ ಸುದ್ದಿ ಬಂದಿದೆ.

ತಮಿಳಿನ ಜನಪ್ರಿಯ ನಟ ವಿಜಯ್‍ ಸೇತುಪತಿ ಅಭಿನಯದಲ್ಲಿ ಪುರಿ ಜಗನ್ನಾಥ್‍ ಒಂದು ಚಿತ್ರ ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಯುಗಾದಿ ಹಬ್ಬದ ಸಂದರ್ಭದಲ್ಲಿ ಕೇಳಿ ಬಂದಿತ್ತು. ಈಗ ಆ ಚಿತ್ರದಲ್ಲಿ ‘ದುನಿಯಾ’ ವಿಜಯ್‍ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇತ್ತೀಚೆಗೆ ನಿರ್ದೇಶಕ ಪುರಿ ಮತ್ತು ನಿರ್ಮಾಪಕಿ ಚಾರ್ಮಿ ಕೌರ್‍, ಇಬ್ಬರೂ ವಿಜಯ್‍ ಅವರನ್ನು ಭೇಟಿ ಮಾಡಿ ಚಿತ್ರದ ಕಥೆ ಹೇಳಿ, ಅವರಿಂದ ಒಪ್ಪಿಗೆ ಪಡೆದು ಬಂದಿದ್ದಾರೆ. ಈ ಚಿತ್ರವನ್ನು ಪುರಿ ಕನೆಕ್ಟ್ಸ್ ಸಂಸ್ಥೆಯಡಿ ಪುರಿ ಜಗನ್ನಾಥ್‍ ಮತ್ತು ಚಾರ್ಮಿ ಕೌರ್‍ ಜೊತೆಯಾಗಿ ನಿರ್ಮಿಸಿದರೆ, ಪುರಿ ಜಗನ್ನಾಥ್‍ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಬಾಲಿವುಡ್‍ ನಟಿ ಟಬು ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವುದು ವಿಶೇಷ.

‘ದುನಿಯಾ’ ವಿಜಯ್‍ಗೆ ತೆಲುಗು ಚಿತ್ರರಂಗ ಹೊಸದೇನಲ್ಲ. ಇದಕ್ಕೂ ಮೊದಲು ನಂದಮೂರಿ ಬಾಲಕೃಷ್ಣ ಅಭಿನಯದ ‘ವೀರ ಸಿಂಹ ರೆಡ್ಡಿ’ ಎಂಬ ಚಿತ್ರದಲ್ಲಿ ನಟಿಸುವ ಮೂಲಕ ತೆಲುಗು ಚಿತ್ರರಂಗಕ್ಕೆ ಹೋಗಿದ್ದರು ‘ದುನಿಯಾ’ ವಿಜಯ್‍. ಈಗ ಪುರಿ ಜಗನ್ನಾಥ್‍ ನಿರ್ದೇಶನದ ಚಿತ್ರದಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ. ಈ ಹೆಸರಿಡದ ಚಿತ್ರವು ಜೂನ್‍ನಿಂದ ಪ್ರಾರಂಭವಾಗುವ ನಿರೀಕ್ಷೆ ಇದೆ.

ವಿಜಯ್ ಸದ್ಯ ‘ಲ್ಯಾಂಡ್‍ ಲಾರ್ಡ್‍’ ಚಿತ್ರದಲ್ಲಿ ನಟಿಸುತ್ತಿದ್ದು, ಇದರ ಜೊತೆಗೆ ‘ಸಿಟಿ ಲೈಟ್ಸ್’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ವಿನಯ್‍ ರಾಜಕುಮಾರ್‍ ಮತ್ತು ವಿಜಯ್‍ ಮಗಳು ಮೊನೀಷಾ ನಾಯಕ-ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ, ಎಸ್‍. ನಾರಾಯಣ್‍ ನಿರ್ದೇಶನದ ‘ಮಾರುತ’ ಚಿತ್ರದಲ್ಲೂ ವಿಜಯ್‍ ನಟಿಸಿದ್ದು, ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

11 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

12 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

13 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

13 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

18 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

18 hours ago