duniya vijay and puri jagannadh combination telugu film
ಇತ್ತೀಚೆಗಷ್ಟೇ, ನಯನತಾರಾ ಅಭಿನಯದ ‘ಮೂಕುತಿ ಅಮ್ಮನ್ 2’ ಚಿತ್ರದಲ್ಲಿ ಕನ್ನಡದ ‘ದುನಿಯಾ’ ವಿಜಯ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಬಂದಿತ್ತು. ಈಗ ಅವರು ಪುನಃ ತೆಲುಗಿನ ಚಿತ್ರವೊಂದರಲ್ಲಿ ನಟಿಸುತ್ತಿರುವ ಸುದ್ದಿ ಬಂದಿದೆ.
ತಮಿಳಿನ ಜನಪ್ರಿಯ ನಟ ವಿಜಯ್ ಸೇತುಪತಿ ಅಭಿನಯದಲ್ಲಿ ಪುರಿ ಜಗನ್ನಾಥ್ ಒಂದು ಚಿತ್ರ ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಯುಗಾದಿ ಹಬ್ಬದ ಸಂದರ್ಭದಲ್ಲಿ ಕೇಳಿ ಬಂದಿತ್ತು. ಈಗ ಆ ಚಿತ್ರದಲ್ಲಿ ‘ದುನಿಯಾ’ ವಿಜಯ್ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇತ್ತೀಚೆಗೆ ನಿರ್ದೇಶಕ ಪುರಿ ಮತ್ತು ನಿರ್ಮಾಪಕಿ ಚಾರ್ಮಿ ಕೌರ್, ಇಬ್ಬರೂ ವಿಜಯ್ ಅವರನ್ನು ಭೇಟಿ ಮಾಡಿ ಚಿತ್ರದ ಕಥೆ ಹೇಳಿ, ಅವರಿಂದ ಒಪ್ಪಿಗೆ ಪಡೆದು ಬಂದಿದ್ದಾರೆ. ಈ ಚಿತ್ರವನ್ನು ಪುರಿ ಕನೆಕ್ಟ್ಸ್ ಸಂಸ್ಥೆಯಡಿ ಪುರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ಜೊತೆಯಾಗಿ ನಿರ್ಮಿಸಿದರೆ, ಪುರಿ ಜಗನ್ನಾಥ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಬಾಲಿವುಡ್ ನಟಿ ಟಬು ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವುದು ವಿಶೇಷ.
‘ದುನಿಯಾ’ ವಿಜಯ್ಗೆ ತೆಲುಗು ಚಿತ್ರರಂಗ ಹೊಸದೇನಲ್ಲ. ಇದಕ್ಕೂ ಮೊದಲು ನಂದಮೂರಿ ಬಾಲಕೃಷ್ಣ ಅಭಿನಯದ ‘ವೀರ ಸಿಂಹ ರೆಡ್ಡಿ’ ಎಂಬ ಚಿತ್ರದಲ್ಲಿ ನಟಿಸುವ ಮೂಲಕ ತೆಲುಗು ಚಿತ್ರರಂಗಕ್ಕೆ ಹೋಗಿದ್ದರು ‘ದುನಿಯಾ’ ವಿಜಯ್. ಈಗ ಪುರಿ ಜಗನ್ನಾಥ್ ನಿರ್ದೇಶನದ ಚಿತ್ರದಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ. ಈ ಹೆಸರಿಡದ ಚಿತ್ರವು ಜೂನ್ನಿಂದ ಪ್ರಾರಂಭವಾಗುವ ನಿರೀಕ್ಷೆ ಇದೆ.
ವಿಜಯ್ ಸದ್ಯ ‘ಲ್ಯಾಂಡ್ ಲಾರ್ಡ್’ ಚಿತ್ರದಲ್ಲಿ ನಟಿಸುತ್ತಿದ್ದು, ಇದರ ಜೊತೆಗೆ ‘ಸಿಟಿ ಲೈಟ್ಸ್’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ವಿನಯ್ ರಾಜಕುಮಾರ್ ಮತ್ತು ವಿಜಯ್ ಮಗಳು ಮೊನೀಷಾ ನಾಯಕ-ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ, ಎಸ್. ನಾರಾಯಣ್ ನಿರ್ದೇಶನದ ‘ಮಾರುತ’ ಚಿತ್ರದಲ್ಲೂ ವಿಜಯ್ ನಟಿಸಿದ್ದು, ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…