ಮನರಂಜನೆ

ರಾಚಯ್ಯ’ ಆದ ‘ದುನಿಯಾ’ ವಿಜಯ್‍; ಹೊಸ ಚಿತ್ರಕ್ಕೆ ನಾಮಕರಣ

‘ದುನಿಯಾ’ ವಿಜಯ್‍ ಅಭಿನಯದ 29ನೇ ಚಿತ್ರಕ್ಕೆ ಚಿತ್ರೀಕರಣ ಕೆಲವು ತಿಂಗಳ ಹಿಂದೆಯೇ ಪ್ರಾರಂಭವಾಗಿದ್ದು, ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಸಹ ಮುಗಿದಿದೆ. ಇದೀಗ ಮೂರನೇ ಹಂತದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭವಾಗಿದ್ದು, ಚಿತ್ರಕ್ಕೆ ‘ರಾಚಯ್ಯ’ ಎಂದು ಹೆಸರಿಡಲಾಗಿದೆ.

ಈ ಹಿಂದೆ ‘ರಾಜಹಂಸ’, ‘ಜಂಟಲ್‍ಮ್ಯಾನ್‍’ ಮತ್ತು ‘ಗುರು ಶಿಷ್ಯರು’ ಚಿತ್ರಗಳನ್ನು ನಿರ್ದೇಶಿಸಿದ್ದ ಮತ್ತು ದರ್ಶನ್‍ ಅಭಿನಯದ ‘ಕಾಟೇರ’ ಚಿತ್ರಕ್ಕೆ ಕಥೆ-ಚಿತ್ರಕಥೆ ರಚಿಸಿದ್ದ ಜಡೇಶ್‍ ಹಂಪಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಒಂದು ದಶಕದ ಹಿಂದೆ ದರ್ಶನ್‍ ಅಭಿನಯದ ‘ಸಾರಥಿ’ ಚಿತ್ರವನ್ನು ನಿರ್ಮಿಸಿದ್ದ ಕೆ.ವಿ. ಸತ್ಯಪ್ರಕಾಶ್‍ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮಾಸ್ತಿ ಮಂಜು ಸಂಭಾಷಣೆ ಈ ಚಿತ್ರಕ್ಕಿದೆ.

ಈ ಚಿತ್ರಕ್ಕೆ ಕೆ. ಶಿವರಾಮ ಕಾರಂತರ ‘ಚೋಮನ ದುಡಿ’ಯ ಚೋಮನ ಪಾತ್ರ ಸ್ಪೂರ್ತಿ ಎಂದು ನಿರ್ದೇಶಕ ಜಡೇಶ್‍ ಮುಹೂರ್ತದ ಸಂದರ್ಭದಲ್ಲಿ ಹೇಳಿಕೊಂಡಿದ್ದರು. ಇದು ಪ್ರತಿ ಹಳ್ಳಿಯಲ್ಲೂ ನಡೆಯುವ ಕಥೆ ಎನ್ನುವ ಜಡೇಶ್‍, ‘ಈ ಕಥೆಯನ್ನು ಕೋಲಾರದ ಹಿನ್ನೆಲೆಯಲ್ಲಿ ಹೇಳುವುದಕ್ಕೆ ಹೊರಟಿದ್ದೇವೆ. ಈ ಹಿಂದೆ ವಿಜಯ್‍ ಅವರು ‘ಜಂಗ್ಲಿ’ ಚಿತ್ರದಲ್ಲಿ ಕೋಲಾರ ಸೊಗಡನ್ನು ತಮ್ಮ ಸಂಭಾಷಣೆಗಳ ಮೂಲಕ ಬಹಳ ಚೆನ್ನಾಗಿ ಹಿಡಿದಿಟ್ಟಿದ್ದರು. ಹಾಗಾಗಿ, ಕೋಲಾರದ ಹಿನ್ನೆಲೆಯಲ್ಲಿ ಕಥೆ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ. ಈ ಚಿತ್ರಕ್ಕೆ ಕೆ. ಶಿವರಾಮ ಕಾರಂತರ ‘ಚೋಮನ ದುಡಿ’ಯ ಚೋಮನ ಪಾತ್ರ ಸ್ಪೂರ್ತಿ. ಹಾಗಂತ ಎರಡೂ ಪಾತ್ರಗಳಿಗೆ ಯಾವುದೇ ಸಂಬಂಧ ಇಲ್ಲ’ ಎಂದು ಹೇಳಿದ್ದರು.

ಈ ಚಿತ್ರದಲ್ಲಿ ವಿಜಯ್‍, ತಮ್ಮ ವಯಸ್ಸಿನ ಪಾತ್ರವನ್ನೇ ಮಾಡುತ್ತಿದ್ದಾರಂತೆ. ‘ಈ ಚಿತ್ರದಲ್ಲಿ ಅವರ ಪಾತ್ರವೇ ಜೀವಾಳ. 90ರ ಕಾಲಘಟ್ಟದಲ್ಲಿ ನಡೆಯುವ ಕಥೆ ಇದು. ನೈಜ ಘಟನೆಗಳನ್ನಾಧರಿಸಿ ಈ ಚಿತ್ರ ಮಾಡುತ್ತಿದ್ದೇನೆ. ನಾನು ನೋಡಿದ, ಕೇಳಿದ ಮತ್ತು ಓದಿದ ಘಟನೆಗಳನ್ನಾಧರಿಸಿ ಈ ಚಿತ್ರ ಮಾಡುತ್ತಿದ್ದೇನೆ’ ಎಂದು ಜಡೇಶ್‍ ಹೇಳಿದ್ದರು.

‘ರಾಚಯ್ಯ’ ಮೂಲಕ ವಿಜಯ್‍ ಮಗಳು ಮೋನಿಕಾ, ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಈ ಚಿತ್ರದ ಮೂಲಕ ಅವರು ತಮ್ಮ ಹೆಸರನ್ನು ರಿತನ್ಯಾ ಎಂದು ಬದಲಾಯಿಸಿಕೊಂಡಿದ್ದಾರೆ. ಮಿಕ್ಕಂತೆ ‘ಡೇರ್‍ ಡೆವಿಲ್‍ ಮುಸ್ತಾಫ’ ಖ್ಯಾತಿಯ ಶಿಶಿರ, ರಚಿತಾ ರಾಮ್‍, ರಾಜ್‍ ಬಿ ಶೆಟ್ಟಿ, ಉಮಾಶ್ರೀ ಮುಂತಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ರಾಚಯ್ಯ’ ಚಿತ್ರದ ಮೊದಲ ನೋಟ ನವೆಂಬರ್‍ ಒಂದರಂದು ಬಿಡುಗಡೆ ಆಗಲಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

12 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

14 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

16 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

16 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

22 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

22 hours ago