ಮನರಂಜನೆ

ತಂದೆಯ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ದುನಿಯಾ ವಿಜಯ್‌ ಪುತ್ರಿ

ಬೆಂಗಳೂರು: ಕಳೆದ ಕೆಲ ದಿನಗಳಿಂದ ನಟ ದುನಿಯಾ ವಿಜಯ್‌ ಪುತ್ರಿ ಮೋನಿಕಾ ವಿಜಯ್‌ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿ ಇದೀಗ ಅಧಿಕೃತವಾಗಿದ್ದು, ತಮ್ಮ ತಂದೆ ವಿಜಯ್‌ ನಾಯಕನಾಗಿ ನಟಿಸಲಿರುವ 29ನೇ ಚಿತ್ರದಲ್ಲಿ ಪುತ್ರಿ ಮೋನಿಕಾ ಕೂಡ ಬಣ್ಣ ಹಚ್ಚಲಿದ್ದಾರೆ. ಸಿನಿಮಾಗಾಗಿ ಮೋನಿಕಾ ತಮ್ಮ ಹೆಸರನ್ನು ರಿತನ್ಯಾ ಎಂದು ಬದಲಿಸಿಕೊಂಡಿದ್ದಾರೆ.

ಗುರುವಾರ ನಡೆದ ಮುಹೂರ್ತ ಕಾರ್ಯಕ್ರಮದಲ್ಲಿ ಮೋನಿಕಾ ಈ ಚಿತ್ರದಲ್ಲಿ ನಟಿಸುವುದು ಖಾತರಿಯಾಗಿದ್ದು, ಸ್ವತಃ ದುನಿಯಾ ವಿಜಯ್‌ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ದುನಿಯಾ ವಿಜಯ್‌ಗೆ ನಾಯಕಿಯಾಗಿ ರಚಿತಾ ರಾಮ್‌ ನಟಿಸುತ್ತಿದ್ದು, ʼಜಂಟಲ್‌ಮ್ಯಾನ್‌ʼ, ʼಗುರು ಶಿಷ್ಯರುʼ ನಿರ್ದೇಶಕ, ʼಕಾಟೇರʼ ಬರಹಗಾರ ಜಡೇಶ್‌ ಕುಮಾರ್‌ ಹಂಪಿ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಲಿದ್ದಾರೆ.

ಇನ್ನು ವಿಜಯ್‌ ಪುತ್ರಿ ಮೋನಿಕಾ ಸಿನಿಮಾದಲ್ಲಿ ನಟಿಸಬೇಕು ಎಂಬ ಗುರಿಯನ್ನು ಇಟ್ಟುಕೊಂಡಿದ್ದರು. ಹೀಗಾಗಿ ಸಾಕಷ್ಟು ತರಬೇತಿ ಪಡೆದು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮುಂಬೈನ ಅನುಪಮ್‌ ಖೇರ್‌ ಸ್ಟುಡಿಯೊದಲ್ಲಿ ನಟನೆ ತರಬೇತಿ ಪಡೆದಿರುವ ಮೋನಿಕಾ ಬೆಂಗಳೂರಿನಲ್ಲಿಯೂ ಅಗತ್ಯ ತರಬೇತಿಯನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಸ್ಟಾರ್‌ ಕಿಡ್‌ ಎಂಟ್ರಿಯಾಗಿದೆ.

andolana

Recent Posts

ಗೃಹಜ್ಯೋತಿ | ಮನೆ-ಮನೆ ಸಮೀಕ್ಷೆ ಅವಧಿ ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ

ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್‌ 30ರವರೆಗೆ ವಿಸ್ತರಿಸಿದೆ. 2023ರ…

9 mins ago

ಮೈಸೂರು ದಸರಾ | ಸೆ.28 ರಿಂದ ಅ.5ರವರೆಗೆ ಯುವ ಸಂಭ್ರಮ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…

55 mins ago

ಕಾವೇರಿ ಜಲವಿವಾದ: ಸೆ.15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೆಪ್ಟೆಂಬರ್‌ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…

7 hours ago

ಎಚ್.ಡಿ.ಕೋಟೆ: ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹುಲಿ ಸೆರೆ

ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.…

7 hours ago

ರಾಜಕೀಯ ಮೇಲಾಟ ನಿಲ್ಲಲಿ; ಸಾಮಾನ್ಯರ ವಿಷಯ ಚರ್ಚೆಯಾಗಲಿ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಕೇಂದ್ರ ಬಿಂದುವಾಗಿದ್ದು,…

13 hours ago