ಮನರಂಜನೆ

‘ಭೀಮ’ ನೋಡಲು ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ ‘ದುನಿಯಾ’ ವಿಜಯ್

‘ದುನಿಯಾ’ ವಿಜಯ್‍ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಮುಂದಿನ ವಾರ ಅಂದರೆ ಆಗಸ್ಟ್ 09ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ವಿಜಯ್‍, ಚಿತ್ರ ವೀಕ್ಷಿಸಲು ಆಹ್ವಾನಿಸಿದ್ದಾರೆ.

‘ಭೀಮ’ ಚಿತ್ರವನ್ನು ವೀಕ್ಷಿಸುವುದಕ್ಕೆ ಮುಖ್ಯಮಂತ್ರಿಗಳು ಮತ್ತು ಇತರೆ ಸಚಿವರನ್ನು ಆಹ್ವಾನಿಸುವುದಾಗಿ ‘ದುನಿಯಾ’ ವಿಜಯ್‍ ಕೆಲವು ದಿನಗಳ ಹಿಂದಷ್ಟೇ ಹೇಳಿಕೊಂಡಿದ್ದರು. ಅದಕ್ಕೆ ಸರಿಯಾಗಿ, ಮುಖ್ಯಮಂತ್ರಿಗಳನ್ನು ಅವರ ಗೃಹಕಚೇರಿಯಲ್ಲಿ ಭೇಟಿ ಮಾಡಿರುವ ವಿಜಯ್‍, ‘ಭೀಮ’ ಚಿತ್ರದ ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸುವುದರ ಜೊತೆಗೆ ಚಿತ್ರವನ್ನು ವೀಕ್ಷಿಸಲು ಆಹ್ವಾನಿಸಿದ್ದಾರೆ ಎಂದು ಹೇಳಲಾಗಿದೆ.

ಆದರೆ, ರಾಜ್ಯದಲ್ಲಿ ಮಳೆ ಹೆಚ್ಚಾಗಿರುವ ಮತ್ತು ಕೆಲವು ಕಡೆ ಸಾಕಷ್ಟು ಸಮಸ್ಯೆಗಳು ಎದುರಾಗಿರುವ ಕಾರಣ, ಇಂತಹ ಸಂದರ್ಭದಲ್ಲಿ ಚಿತ್ರ ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸುವುದು ಕಷ್ಟವಿರುವುದರಿಂದ, ಪರಿಸ್ಥಿತಿ ತಹಬಂದಿಗೆ ನಂತರ ಮುಂದಿನ ವಾರ ಚಿತ್ರ ನೋಡುವುದಾಗಿ ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು, ಚಿತ್ರದ ಪ್ರಚಾರವನ್ನು ‘ದುನಿಯಾ’ ವಿಜಯ್‍ ಜೋರಾಗಿಯೇ ಮಾಡುತ್ತಿದ್ದು, ಇತ್ತೀಚೆಗೆ ಹಲವು ಕಾಲೇಜಿಗಳಿಗೆ ಭೇಟಿ ಕೊಟ್ಟು ಚಿತ್ರದ ಬಗ್ಗೆ ಪ್ರಚಾರ ಮಾಡಿದ್ದಾರೆ. ‘ಭೀಮ’ ಚಿತ್ರದಲ್ಲಿ ಯುವಜನಾಂಗದವರನ್ನು ಡ್ರಗ್ಸ್ ಹೇಗೆ ಕಾಡುತ್ತಿದೆ ಎಂಬ ವಿಷಯವನ್ನು ವಿಜಯ್‍ ಹೇಳಿದ್ದು, ಈ ನಿಟ್ಟಿನಲ್ಲಿ ಹಲವು ಕಾಲೇಜುಗಳಿಗೆ ಭೇಟಿ ನೀಡಿ ಚಿತ್ರದ ಪ್ರಚಾರ ಮಾಡುವುದರ ಜೊತೆಗೆ, ಡ್ರಗ್ಸ್ ಹಾವಳಿ ಕುರಿತು ಜಾಗೃತಿ ಮೂಡಿಸಿ ಬಂದಿದ್ದಾರೆ.

‘ಸಲಗ’ ನಂತರ ವಿಜಯ್‍ ನಿರ್ದೇಶಿಸುತ್ತಿರುವ ಎರಡನೆಯ ಕಥೆ ಇದು. ಈ ಚಿತ್ರಕ್ಕೆ ‘ದುನಿಯಾ’ ವಿಜಯ್‍ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದು, ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರಿಗೆ ನಾಯಕಿಯಾಗಿ ಅಶ್ವಿನಿ ನಟಿಸಿದ್ದಾರೆ. ಮಿಕ್ಕಂತೆ ಅಚ್ಯುತ್‍ ಕುಮಾರ್, ರಂಗಾಯಣ ರಘು, ರಾಘು ಶಿವಮೊಗ್ಗ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚರಣ್ರಾಜ್ ಸಂಗೀತ ಈ ಚಿತ್ರಕ್ಕಿದೆ. ‘ಭೀಮ’ ಚಿತ್ರವನ್ನು ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ಜೊತೆಯಾಗಿ ನಿರ್ಮಿಸಿದ್ದಾರೆ.

ಭೂಮಿಕಾ

Recent Posts

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

10 mins ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

29 mins ago

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

1 hour ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

1 hour ago

ಐಪಿಎಲ್‌ ಪಂದ್ಯ : ಏಪ್ರಿಲ್‌ 15, 24ರಂದು ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್‌ ಪಂದ್ಯಗಳು ಏಪ್ರಿಲ್ ‌15 ಹಾಗೂ ಏಪ್ರಿಲ್ ‌24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.…

1 hour ago

ನಿತೀಶ್ ಕುಮಾರ್ ರಾಜೀನಾಮೆ; ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಹಾರದ ಹೊಸ…

2 hours ago