‘ದುನಿಯಾ’ ವಿಜಯ್ ಮತ್ತು ಶ್ರೇಯಸ್ ಮಂಜು ಅಭಿನಯದ ‘ಮಾರುತ’ ಚಿತ್ರವು ಅಕ್ಟೋಬರ್ 31ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ನಾಯಕ ತಾನಲ್ಲ, ಸುಮ್ಮನೆ ನಾಯಕ ಎಂದು ಬಿಂಬಿಸಬೇಡಿ ಎಂದು ‘ದುನಿಯಾ’ ವಿಜಯ್ ಹೇಳಿದ್ದಾರೆ.
ಮಂಗಳವಾರವಷ್ಟೇ, ‘ಮಾರುತ’ ಚಿತ್ರದ ಬಿಡುಗಡೆ ದಿನಾಂಕ ಹೊರಬಿದ್ದಿದ್ದು, ಕೆಲವು ದಿನಗಳ ಹಿಂದೆ ಚಿತ್ರದ ಟೀಸರ್ ಸಹ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ‘ದುನಿಯಾ’ ವಿಜಯ್ ಅವರನ್ನು ನಾಯಕ ಎಂದು ಬಿಂಬಿಸಲಾಗಿದೆ. ಆದರೆ, ಚಿತ್ರವಾದ ನಾಯಕ ತಾನಲ್ಲ, ಶ್ರೇಯಸ್ ಮಂಜು ಎಂದು ವಿಜಯ್ ಹೇಳಿದ್ದಾರೆ.
ಇದನ್ನು ಓದಿ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಇನ್ನೊಂದು ಬಯೋಪಿಕ್ ಘೋಷಣೆ
ಸದ್ಯ ಚೆನ್ನೈನಲ್ಲಿ ‘ಮೂಕುತಿ ಅಮ್ಮನ್ 2’ ಚಿತ್ರದ ಚಿತ್ರೀಕರಣದಲ್ಲಿ ನಿರತವಾಗಿರುವ ವಿಜಯ್, ಈ ಕುರಿತು ಮಾತನಾಡಿದ್ದಾರೆ. ‘ನಿರ್ಮಾಪಕ ಕೆ, ಮಂಜು ಮತ್ತು ನಿರ್ದೇಶಕ ಎಸ್. ನಾರಾಯಣ್ ಅವರ ಮೇಲೆ ಅಪಾರ ಅಭಿಮಾನ ಮತ್ತು ಗೌರವವಿದೆ. ಹೀಗಾಗಿ ‘ಮಾರುತ’ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಆದರೆ, ನಾಯಕ ನಾನಲ್ಲ. ಕೆ. ಮಂಜು ಅವರ ಮಗ ಶ್ರೇಯಸ್ ಮಂಜು ಅವರನ್ನು ಚಿಕ್ಕ ವಯಸ್ಸಿನಿಂದ ಬಲ್ಲೆ. ಹೀಗಾಗಿ ಆತನಿಗೆ ಒಳಿತಾಗಲಿ ಎನ್ನುವ ಕಾರಣಕ್ಕೆ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸಿದ್ದೇನೆ’ ಎಂದಿದ್ದಾರೆ.
‘ಮಾರುತ’ ಚಿತ್ರದಲ್ಲಿ ನಾಯಕ ಎಂದು ಬಿಂಬಿಸಲು ಪ್ರಯತ್ನ ಮಾಡಬೇಡಿ ಎಂದಿರುವ ಅವರು, ‘ಚಿತ್ರಕ್ಕೆ ನಾನು ನಾಯಕನಲ್ಲ. ತಂಡಕ್ಕೆ ಒಳಿತಾಗಲಿ ಎಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಅಷ್ಟೇ’ ಎಂದು ಹೇಳಿದ್ದಾರೆ.
‘ಮಾರುತ’ ಚಿತ್ರವಲ್ಲದೆ ‘ಲ್ಯಾಂಡ್ ಲಾರ್ಡ್’ ಚಿತ್ರದಲ್ಲೂ ವಿಜಯ್ ನಟಿಸಿದ್ದು, ಅದರ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಕಾರ್ಯಗಳು ನಡೆಯತ್ತಿವೆ, ಎಲ್ಲಾ ಅಂದುಕೊಂಡಂತೆ ಆದರೆ ವರ್ಷಾಂತ್ಯಕ್ಕೆ ಚಿತ್ರ ತೆರೆಗೆ ಬರುವ ನಿರೀಕ್ಷೆ ಇದೆ ಎಂದಿದ್ಧಾರೆ. ಜಡೇಶ್ ಕುಮಾರ್ ಹಂಪಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಲಾಂಡ್ ಲಾರ್ಡ್’ ಚಿತ್ರದಲ್ಲಿ ಇದುವರೆಗೆ ಕಾಣಿಸಿಕೊಳ್ಳದ ವಿಭಿನ್ನ ಪಾತ್ರದಲ್ಲಿ ವಿಜಯ್ ಕಾಣಿಸಿಕೊಂಡಿದ್ದು, ತಮ್ಮ ವೃತ್ತಿ ಬದುಕಿನ ಮತ್ತೊಂದು ವಿಭಿನ್ನ ಮಾದರಿಯ ಚಿತ್ರವಾಗಲಿದೆ ಎಂದು ನಂಬಿದ್ದಾರೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…