ಮನರಂಜನೆ

‘ಮಾರುತ’ ಚಿತ್ರದಲ್ಲಿ ನಾಯಕ ನಾನಲ್ಲ ಎಂದ ‘ದುನಿಯಾ’ ವಿಜಯ್

‘ದುನಿಯಾ’ ವಿಜಯ್ ಮತ್ತು ಶ್ರೇಯಸ್‍ ಮಂಜು ಅಭಿನಯದ ‘ಮಾರುತ’ ಚಿತ್ರವು ಅಕ್ಟೋಬರ್ 31ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ನಾಯಕ ತಾನಲ್ಲ, ಸುಮ್ಮನೆ ನಾಯಕ ಎಂದು ಬಿಂಬಿಸಬೇಡಿ ಎಂದು ‘ದುನಿಯಾ’ ವಿಜಯ್‍ ಹೇಳಿದ್ದಾರೆ.

ಮಂಗಳವಾರವಷ್ಟೇ, ‘ಮಾರುತ’ ಚಿತ್ರದ ಬಿಡುಗಡೆ ದಿನಾಂಕ ಹೊರಬಿದ್ದಿದ್ದು, ಕೆಲವು ದಿನಗಳ ಹಿಂದೆ ಚಿತ್ರದ ಟೀಸರ್‍ ಸಹ ಬಿಡುಗಡೆಯಾಗಿದೆ. ಈ ಟೀಸರ್‌ನಲ್ಲಿ ‘ದುನಿಯಾ’ ವಿಜಯ್‍ ಅವರನ್ನು ನಾಯಕ ಎಂದು ಬಿಂಬಿಸಲಾಗಿದೆ. ಆದರೆ, ಚಿತ್ರವಾದ ನಾಯಕ ತಾನಲ್ಲ, ಶ್ರೇಯಸ್‍ ಮಂಜು ಎಂದು ವಿಜಯ್‍ ಹೇಳಿದ್ದಾರೆ.

ಇದನ್ನು ಓದಿ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಇನ್ನೊಂದು ಬಯೋಪಿಕ್‍ ಘೋಷಣೆ

ಸದ್ಯ ಚೆನ್ನೈನಲ್ಲಿ ‘ಮೂಕುತಿ ಅಮ್ಮನ್ 2’ ಚಿತ್ರದ ಚಿತ್ರೀಕರಣದಲ್ಲಿ ನಿರತವಾಗಿರುವ ವಿಜಯ್‍, ಈ ಕುರಿತು ಮಾತನಾಡಿದ್ದಾರೆ. ‘ನಿರ್ಮಾಪಕ ಕೆ, ಮಂಜು ಮತ್ತು ನಿರ್ದೇಶಕ ಎಸ್. ನಾರಾಯಣ್ ಅವರ ಮೇಲೆ ಅಪಾರ ಅಭಿಮಾನ ಮತ್ತು ಗೌರವವಿದೆ. ಹೀಗಾಗಿ ‘ಮಾರುತ’ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಆದರೆ, ನಾಯಕ ನಾನಲ್ಲ. ಕೆ. ಮಂಜು ಅವರ ಮಗ ಶ್ರೇಯಸ್ ಮಂಜು ಅವರನ್ನು ಚಿಕ್ಕ ವಯಸ್ಸಿನಿಂದ ಬಲ್ಲೆ. ಹೀಗಾಗಿ ಆತನಿಗೆ ಒಳಿತಾಗಲಿ ಎನ್ನುವ ಕಾರಣಕ್ಕೆ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸಿದ್ದೇನೆ’ ಎಂದಿದ್ದಾರೆ.

‘ಮಾರುತ’ ಚಿತ್ರದಲ್ಲಿ ನಾಯಕ ಎಂದು ಬಿಂಬಿಸಲು ಪ್ರಯತ್ನ ಮಾಡಬೇಡಿ ಎಂದಿರುವ ಅವರು, ‘ಚಿತ್ರಕ್ಕೆ ನಾನು ನಾಯಕನಲ್ಲ. ತಂಡಕ್ಕೆ ಒಳಿತಾಗಲಿ ಎಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಅಷ್ಟೇ’ ಎಂದು ಹೇಳಿದ್ದಾರೆ.

‘ಮಾರುತ’ ಚಿತ್ರವಲ್ಲದೆ ‘ಲ್ಯಾಂಡ್‍ ಲಾರ್ಡ್’ ಚಿತ್ರದಲ್ಲೂ ವಿಜಯ್‍ ನಟಿಸಿದ್ದು, ಅದರ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಕಾರ್ಯಗಳು ನಡೆಯತ್ತಿವೆ, ಎಲ್ಲಾ ಅಂದುಕೊಂಡಂತೆ ಆದರೆ ವರ್ಷಾಂತ್ಯಕ್ಕೆ ಚಿತ್ರ ತೆರೆಗೆ ಬರುವ ನಿರೀಕ್ಷೆ ಇದೆ ಎಂದಿದ್ಧಾರೆ. ಜಡೇಶ್ ಕುಮಾರ್ ಹಂಪಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಲಾಂಡ್ ಲಾರ್ಡ್’ ಚಿತ್ರದಲ್ಲಿ ಇದುವರೆಗೆ ಕಾಣಿಸಿಕೊಳ್ಳದ ವಿಭಿನ್ನ ಪಾತ್ರದಲ್ಲಿ ವಿಜಯ್‍ ಕಾಣಿಸಿಕೊಂಡಿದ್ದು, ತಮ್ಮ ವೃತ್ತಿ ಬದುಕಿನ ಮತ್ತೊಂದು ವಿಭಿನ್ನ ಮಾದರಿಯ ಚಿತ್ರವಾಗಲಿದೆ ಎಂದು ನಂಬಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೊಂದ ಪುರುಷರ ಹಕ್ಕುಗಳ ರಕ್ಷಣೆಗೆ ಆಯೋಗ ರಚಿಸಿ ; ಎ.ಎಚ್.ವಿಶ್ವನಾಥ್‌

ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…

10 hours ago

ಮೈಸೂರು | ಎನ್‌.ಆರ್‌.ಕ್ಷೇತ್ರದಲ್ಲಿ ನಿಯಮಬಾಹಿರ ಎಸ್‌ಐಆರ್‌ : ಸಂಸದ ಯದುವೀರ್ ಆರೋಪ

ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…

10 hours ago

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

16 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

17 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

19 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

19 hours ago