ಮನರಂಜನೆ

ಬಿ ಪ್ಲಸ್, ಸಿ ಪ್ಲಸ್‍ ಪಡೆಯುತ್ತಿದ್ದ ‘ದುನಿಯಾ’ ವಿಜಯ್‍ಗೆ ‘ಎ’ ಸಿಕ್ಕಿತು

‘ದುನಿಯಾ’ ವಿಜಯ್ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಸೆನ್ಸಾರ್‍ ಸಹ ಮುಗಿದು, ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರವು ಆಗಸ್ಟ್ 09ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಚಿತ್ರತಂಡ ಪ್ರಚಾರವನ್ನು ಈಗಾಗಲೇ ಪ್ರಾರಂಭಿಸಿದೆ.

ಅಂದಹಾಗೆ, ಈ ಚಿತ್ರಕ್ಕೆ ಸೆನ್ಸಾರ್‍ ಮಂಡಳಿಯವರು ‘ಎ’ ಪ್ರಮಾಣಪತ್ರ ನೀಡಿದ್ದಾರೆ. ವಿಜಯ್‍ ಅಭಿನಯದ ‘ಸಲಗ’ ಚಿತ್ರಕ್ಕೂ ‘ಎ’ ಸರ್ಟಿಫಿಕೇಟ್‍ ಸಿಕ್ಕಿತ್ತು. ಅದಕ್ಕೆ ಸರಿಯಾಗಿ ಚಿತ್ರದಲ್ಲಿ ಸಾಕಷ್ಟು ಹಿಂಸೆ, ಕ್ರೌರ್ಯ ಮತ್ತು ರಕ್ತಪಾತವಿತ್ತು. ‘ಭೀಮ’ ಸಹ ಅದೇ ಜಾನರ್‍ನ ಚಿತ್ರವಾದ್ದರಿಂದ ಈ ಚಿತ್ರಕ್ಕೂ ‘ಎ’ ಸಿಗಬಹುದು ಎಂದು ಹಲವರು ಅಂದಾಜಿಸಿದ್ದರು. ಅದೀಗ ನಿಜವಾಗಿದೆ.

ಈ ಕುರಿತು ಮಾತನಾಡುವ ‘ದುನಿಯಾ’ ವಿಜಯ್‍, ‘ಈ ಚಿತ್ರದ ಮೂಲಕ ಒಂದು ಸೂಕ್ಷ್ಮ ವಿಚಾರವನ್ನು ಜನರಿಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದೇನೆ. ಸಾಮಾಜಿಕ ಸಂದೇಶವಿರುವ ಈ ಚಿತ್ರ ಎಲ್ಲರಲ್ಲೂ ಜಾಗೃತಿ ಮೂಡಿಸುವಂತೆ ಆಗಬೇಕು. ನಾನು ಹಾಗೂ ಸಂಭಾಷಣೆ ಕಾರ ಮಾಸ್ತಿ ಸೇರಿ ಕಥೆ ಹಂತದಿಂದ ಹಿಡಿದು ಚಿತ್ರಕಥೆ, ಸಂಭಾಷಣೆಯಿಂದ ಪ್ರತಿ ಹಂತದಲ್ಲೂ ಬಹಳ ಶ್ರಮ ಪಟ್ಟು ಕೆಲಸ ಮಾಡಿದ್ದೇವೆ. ಶಾಲಾ ದಿನಗಳಿಂದಲೂ ಬಿ ಪ್ಲಸ್, ಸಿ ಪ್ಲಸ್ ಅಂಕಗಳನ್ನು ಪಡೆಯುತ್ತಿದೆ. ಈಗ ‘ಭೀಮ’ ಚಿತ್ರದಲ್ಲಿ ‘ಎ’ ಸಿಕ್ಕಿದೆ. ಚಿತ್ರದ ಸಂಭಾಷಣೆ ವಿಚಾರವಾಗಿ ಒಂದಷ್ಟು ಕಟ್ಸ್ , ಮ್ಯೂಟ್ಸ್ ಮಾಡಲು ಸೆನ್ಸಾರ್‍ನವರು ಹೇಳಿದ್ದಾರೆ. ಅದರಂತೆ ಎಲ್ಲವನ್ನೂ ಮಾಡುತ್ತೇವೆ’ ಎಂದರು.

ಈ ಚಿತ್ರಕ್ಕಾಗಿ ವಿಜಯ್‍ ಹೆಚ್ಚಾಗಿ ಬೆಂಗಳೂರಿನ ಸ್ಲಂಗಳಲ್ಲಿ ಚಿತ್ರೀಕರಣ ಮಾಡಿದ್ದಾರೆ. ‘ನನಗೆ ಸಹಜತೆ ಬೇಕಿತ್ತು. ಹಾಗಾಗಿ, ಹಾಡು ಮತ್ತು ಕೆಲವು ದೃಶ್ಯಗಳ ಚಿತ್ರೀಕರಣ ಬಿಟ್ಟರೆ, ಮಿಕ್ಕಂತೆ ಎಲ್ಲವನ್ನೂ ನಾವು ನೈಜ ಪರಿಸರದಲ್ಲೇ ಮಾಡಿದ್ದೇವೆ. ಸಾಕಷ್ಟು ಸ್ಲಂ ಪ್ರದೇಶಗಳಲ್ಲಿ ಚಿತ್ರೀಕರಣ ಮಾಡಿದ್ದೇವೆ. ಚಿತ್ರದಲ್ಲಿ 70ಕ್ಕೂ ಹೆಚ್ಚು ಜನ ಹೊಸಬರು ನಟಿಸಿದ್ದಾರೆ. ರಾತ್ರಿ ಹೊತ್ತು ಚಿತ್ರೀಕರಣ ಜಾಸ್ತಿ ಇದೆ. 125 ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ. ಕೆಲವು ಕಡೆ ಹೊಸಬರನ್ನಿಟ್ಟುಕೊಂಡು ಚಿತ್ರೀಕರಣ ಮಾಡುವುದು ನಿಜಕ್ಕೂ ಕಷ್ಟದ ಕೆಲಸವಾಗಿತ್ತು. ಈ ಚಿತ್ರದಿಂದ ಸಾಕಷ್ಟು ವಿಷಯಗಳನ್ನು ಕಲಿತಿದ್ದೇನೆ’ ಎಂದರು.

‘ಭೀಮ’ ಚಿತ್ರವನ್ನು ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ಜೊತೆಯಾಗಿ ನಿರ್ಮಿಸಿದ್ದು, ಚಿತ್ರಕ್ಕೆ ಚರಣ್ರಾಜ್ ಸಂಗೀತ ಮತ್ತು ಶಿವಸೇನಾ ಛಾಯಾಗ್ರಹಣವಿದೆ. ವಿಜಯ್‍ಗೆ ನಾಯಕಿಯಾಗಿ ಅಶ್ವಿನಿ ನಟಿಸಿದ್ದಾರೆ. ಮಿಕ್ಕಂತೆ ರಂಗಾಯಣ ರಘು, ಅಚ್ಯುತ್‍ ಕುಮಾರ್‍, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

4 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

4 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

5 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

5 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

6 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

7 hours ago